Homeಮುಖಪುಟಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್...

ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಆದರೆ ಅಧಿಕಾರವಧಿ ಇನ್ನೂ 3 ವರ್ಷಗಳ ಕಾಲ ಇದ್ದರೂ, ಚುನಾವಣೆ ಹೊಸ್ತಿಲಲ್ಲಿ ಅವರು ರಾಜೀನಾಮೆ ನೀಡಿದ್ದೇಕೆ ಎಂಬ ಪ್ರಶ್ನೆಗಳು ವ್ಯಾಪಕವಾಗಿ ಉದ್ಭವಿಸಿದೆ.

ಮೂಲಗಳ ಪ್ರಕಾರ, ಚುನಾವಣೆ ದಿನಾಂಕಗಳನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದೆ ಮತ್ತು  ಗೋಯೆಲ್ ಅವರ ರಾಜೀನಾಮೆ ಇದೀಗ ಈ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ರಾಜೀನಾಮೆ ನೀಡುವಾಗ  ಗೋಯೆಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ, ಸರ್ಕಾರವು ಅವರನ್ನು ಹುದ್ದೆ ತೊರೆಯದಂತೆ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಅವರು  ಅದಕ್ಕೆ ಒಪ್ಪಲಿಲ್ಲ ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ. ರಾಜೀನಾಮೆಗೆ ಅನಾರೋಗ್ಯವೇ ಕಾರಣ ಎಂಬ ಊಹಾಪೋಹಗಳ ಬೆನ್ನಲ್ಲಿ ಗೋಯೆಲ್ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ನೂತನ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಲ್ಲಖಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಫೆಬ್ರವರಿ 2025ರಲ್ಲಿ ರಾಜೀವ್ ಕುಮಾರ್ ಅವರ ಅಧಿಕಾರದ ಅಂತ್ಯದ ನಂತರ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುವ ಸಾಧ್ಯತೆ ಇತ್ತು. 61 ವರ್ಷ ವಯಸ್ಸಿನ ಅವರ ಅಧಿಕಾರಾವಧಿಯು ಡಿಸೆಂಬರ್ 2027ರವರೆಗೆ ಇತ್ತು. ಫೆಬ್ರವರಿಯಲ್ಲಿ ಅನುಪ್ ಪಾಂಡೆ ನಿವೃತ್ತಿ ಮತ್ತು ಇದೀಗ ಗೋಯೆಲ್ ರಾಜೀನಾಮೆ ನಂತರ, ಮೂವರು ಸದಸ್ಯರ ಚುನಾವಣಾ ಆಯೋಗದ ಸಮಿತಿಯು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮಾತ್ರ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...