Homeಮುಖಪುಟಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್...

ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಆದರೆ ಅಧಿಕಾರವಧಿ ಇನ್ನೂ 3 ವರ್ಷಗಳ ಕಾಲ ಇದ್ದರೂ, ಚುನಾವಣೆ ಹೊಸ್ತಿಲಲ್ಲಿ ಅವರು ರಾಜೀನಾಮೆ ನೀಡಿದ್ದೇಕೆ ಎಂಬ ಪ್ರಶ್ನೆಗಳು ವ್ಯಾಪಕವಾಗಿ ಉದ್ಭವಿಸಿದೆ.

ಮೂಲಗಳ ಪ್ರಕಾರ, ಚುನಾವಣೆ ದಿನಾಂಕಗಳನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದೆ ಮತ್ತು  ಗೋಯೆಲ್ ಅವರ ರಾಜೀನಾಮೆ ಇದೀಗ ಈ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ರಾಜೀನಾಮೆ ನೀಡುವಾಗ  ಗೋಯೆಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ, ಸರ್ಕಾರವು ಅವರನ್ನು ಹುದ್ದೆ ತೊರೆಯದಂತೆ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಅವರು  ಅದಕ್ಕೆ ಒಪ್ಪಲಿಲ್ಲ ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ. ರಾಜೀನಾಮೆಗೆ ಅನಾರೋಗ್ಯವೇ ಕಾರಣ ಎಂಬ ಊಹಾಪೋಹಗಳ ಬೆನ್ನಲ್ಲಿ ಗೋಯೆಲ್ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ನೂತನ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಲ್ಲಖಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಫೆಬ್ರವರಿ 2025ರಲ್ಲಿ ರಾಜೀವ್ ಕುಮಾರ್ ಅವರ ಅಧಿಕಾರದ ಅಂತ್ಯದ ನಂತರ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುವ ಸಾಧ್ಯತೆ ಇತ್ತು. 61 ವರ್ಷ ವಯಸ್ಸಿನ ಅವರ ಅಧಿಕಾರಾವಧಿಯು ಡಿಸೆಂಬರ್ 2027ರವರೆಗೆ ಇತ್ತು. ಫೆಬ್ರವರಿಯಲ್ಲಿ ಅನುಪ್ ಪಾಂಡೆ ನಿವೃತ್ತಿ ಮತ್ತು ಇದೀಗ ಗೋಯೆಲ್ ರಾಜೀನಾಮೆ ನಂತರ, ಮೂವರು ಸದಸ್ಯರ ಚುನಾವಣಾ ಆಯೋಗದ ಸಮಿತಿಯು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮಾತ್ರ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...