Homeಮುಖಪುಟಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು ತೋರಿಸುತ್ತವೆ. ಅಂದರೆ ಮತದಾನ ಮುಗಿದ 379 ಕ್ಷೇತ್ರಗಳಲ್ಲಿ ಸರಾಸರಿ 28,000 ಮತಗಳ ವ್ಯತ್ಯಾಸವನ್ನು ತೋರಿಸುತ್ತದೆ.

ಪ್ರತಿ ಹಂತದ ಮತದಾನ ದಿನದಂದು ರಾತ್ರಿ 10.30ರಿಂದ 11.30ರ ನಡುವೆ ಅಂಕಿಅಂಶಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಚು.ಆಯೋಗ ಬಿಡುಗಡೆಗೊಳಿಸಿರುವ ಅಂತಿಮ ಅಂಕಿ ಅಂಶಗಳು ಪೋಸ್ಟಲ್‌ ಮತಗಳನ್ನು ಒಳಗೊಂಡಿಲ್ಲ ಹಾಗೂ ಇದು ಅಂದಾಜು ಟ್ರೆಂಡ್‌ಗಳು ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಮತದಾನದ ಬಗ್ಗೆ ಮಾಹಿತಿ ನೀಡಲಾಗಿದೆ ಮತ್ತ 2, 3 ಮತ್ತು 4ನೇ ಹಂತದ ಚುನಾವಣೆಯ ನಾಲ್ಕು ದಿನಗಳ ನಂತರ ಈ ಪ್ರಕ್ರಿಯೆ ನಡೆದಿದೆ.

ಅಂತಿಮ ಅಂಕಿಅಂಶಗಳು ಮತದಾನದ ದಿನದಂದು ಬಹಿರಂಗಗೊಳಿಸಿದ ಅಂಕಿಅಂಶಗಳಿಗಿಂತ ಭಿನ್ನವಾಗಿವೆ. ಹಲವಾರು ರಾಜ್ಯಗಳಲ್ಲಿನ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೊದಲ ಹಂತದ ಚುನಾವಣೆಯಲ್ಲಿ 18.6 ಲಕ್ಷ ಮತಗಳು, ಎರಡನೇ ಹಂತದಲ್ಲಿ 32.2 ಲಕ್ಷ ಮತಗಳು, ಮೂರನೇ ಹಂತದಲ್ಲಿ 22.1 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 33.9 ಲಕ್ಷ ಮತಗಳು ಹೀಗೆ ಒಟ್ಟು 1.07 ಕೋಟಿ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಆಂಧ್ರ ಪ್ರದೇಶದಲ್ಲಿ ಆರಂಭದಲ್ಲಿ ತಿಳಿಸಲಾದ ಅಂಕಿಅಂಶ ಮತ್ತು ಅಂತಿಮ ಡೇಟಾದಲ್ಲಿ 4.2% ವ್ಯತ್ಯಾಸವಿದೆ (ಇದು ಗರಿಷ್ಠ 17.2 ಲಕ್ಷ ಆಗಿದೆ). ಮಹಾರಾಷ್ಟ್ರದಲ್ಲಿ ಶೇ 2.4(ಅಂದರೆ 16.7 ಲಕ್ಷ), ಕೇರಳದಲ್ಲಿ ಶೇ 4.1 (ಅಂದರೆ 11.4 ಲಕ್ಷ) ಮತ್ತು ಅಸ್ಸಾಂನಲ್ಲಿ ಶೇ 4.2 (ಅಂದರೆ 10.3 ಲಕ್ಷ) ಮತಗಳಲ್ಲಿ ಏರಿಕೆಯಾಗಿದೆ. ಅಸ್ಸಾಂನಲ್ಲಿ ಪ್ರತಿ ಕ್ಷೇತ್ರದಲ್ಲಿ 73,000ಕ್ಕೂ ಅಧಿಕ ಮತಗಳ ವ್ಯತ್ಯಾಸವಿದೆ. ಆಂಧ್ರಪ್ರದೇಶದಲ್ಲಿ 69,000 ಮತಗಳು ಹಾಗೂ ಕೇರಳದಲ್ಲಿ 57,000 ಮತಗಳು, ಕರ್ನಾಟಕದಲ್ಲಿ 51,000 ಮತ್ತು ಮಹಾರಾಷ್ಟ್ರದಲ್ಲಿ 48,000 ಮತಗಳ ವ್ಯತ್ಯಾಸವಿದೆ.

ಆದರೆ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣಾ ಆಯೋಗದ ಅಂಕಿಸಂಖ್ಯೆಗಳಲ್ಲಿ ಹೆಚ್ಚಾಗಿ ವ್ಯತ್ಯಾಸ ಕಂಡು ಬಂದಿಲ್ಲ. ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಚುನಾವಣಾ ಆಯೋಗವು ಸುಮಾರು 67% ಮತದಾನವನ್ನು ದಾಖಲಿಸಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...