Homeಮುಖಪುಟಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು ತೋರಿಸುತ್ತವೆ. ಅಂದರೆ ಮತದಾನ ಮುಗಿದ 379 ಕ್ಷೇತ್ರಗಳಲ್ಲಿ ಸರಾಸರಿ 28,000 ಮತಗಳ ವ್ಯತ್ಯಾಸವನ್ನು ತೋರಿಸುತ್ತದೆ.

ಪ್ರತಿ ಹಂತದ ಮತದಾನ ದಿನದಂದು ರಾತ್ರಿ 10.30ರಿಂದ 11.30ರ ನಡುವೆ ಅಂಕಿಅಂಶಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಚು.ಆಯೋಗ ಬಿಡುಗಡೆಗೊಳಿಸಿರುವ ಅಂತಿಮ ಅಂಕಿ ಅಂಶಗಳು ಪೋಸ್ಟಲ್‌ ಮತಗಳನ್ನು ಒಳಗೊಂಡಿಲ್ಲ ಹಾಗೂ ಇದು ಅಂದಾಜು ಟ್ರೆಂಡ್‌ಗಳು ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಮತದಾನದ ಬಗ್ಗೆ ಮಾಹಿತಿ ನೀಡಲಾಗಿದೆ ಮತ್ತ 2, 3 ಮತ್ತು 4ನೇ ಹಂತದ ಚುನಾವಣೆಯ ನಾಲ್ಕು ದಿನಗಳ ನಂತರ ಈ ಪ್ರಕ್ರಿಯೆ ನಡೆದಿದೆ.

ಅಂತಿಮ ಅಂಕಿಅಂಶಗಳು ಮತದಾನದ ದಿನದಂದು ಬಹಿರಂಗಗೊಳಿಸಿದ ಅಂಕಿಅಂಶಗಳಿಗಿಂತ ಭಿನ್ನವಾಗಿವೆ. ಹಲವಾರು ರಾಜ್ಯಗಳಲ್ಲಿನ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೊದಲ ಹಂತದ ಚುನಾವಣೆಯಲ್ಲಿ 18.6 ಲಕ್ಷ ಮತಗಳು, ಎರಡನೇ ಹಂತದಲ್ಲಿ 32.2 ಲಕ್ಷ ಮತಗಳು, ಮೂರನೇ ಹಂತದಲ್ಲಿ 22.1 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 33.9 ಲಕ್ಷ ಮತಗಳು ಹೀಗೆ ಒಟ್ಟು 1.07 ಕೋಟಿ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಆಂಧ್ರ ಪ್ರದೇಶದಲ್ಲಿ ಆರಂಭದಲ್ಲಿ ತಿಳಿಸಲಾದ ಅಂಕಿಅಂಶ ಮತ್ತು ಅಂತಿಮ ಡೇಟಾದಲ್ಲಿ 4.2% ವ್ಯತ್ಯಾಸವಿದೆ (ಇದು ಗರಿಷ್ಠ 17.2 ಲಕ್ಷ ಆಗಿದೆ). ಮಹಾರಾಷ್ಟ್ರದಲ್ಲಿ ಶೇ 2.4(ಅಂದರೆ 16.7 ಲಕ್ಷ), ಕೇರಳದಲ್ಲಿ ಶೇ 4.1 (ಅಂದರೆ 11.4 ಲಕ್ಷ) ಮತ್ತು ಅಸ್ಸಾಂನಲ್ಲಿ ಶೇ 4.2 (ಅಂದರೆ 10.3 ಲಕ್ಷ) ಮತಗಳಲ್ಲಿ ಏರಿಕೆಯಾಗಿದೆ. ಅಸ್ಸಾಂನಲ್ಲಿ ಪ್ರತಿ ಕ್ಷೇತ್ರದಲ್ಲಿ 73,000ಕ್ಕೂ ಅಧಿಕ ಮತಗಳ ವ್ಯತ್ಯಾಸವಿದೆ. ಆಂಧ್ರಪ್ರದೇಶದಲ್ಲಿ 69,000 ಮತಗಳು ಹಾಗೂ ಕೇರಳದಲ್ಲಿ 57,000 ಮತಗಳು, ಕರ್ನಾಟಕದಲ್ಲಿ 51,000 ಮತ್ತು ಮಹಾರಾಷ್ಟ್ರದಲ್ಲಿ 48,000 ಮತಗಳ ವ್ಯತ್ಯಾಸವಿದೆ.

ಆದರೆ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣಾ ಆಯೋಗದ ಅಂಕಿಸಂಖ್ಯೆಗಳಲ್ಲಿ ಹೆಚ್ಚಾಗಿ ವ್ಯತ್ಯಾಸ ಕಂಡು ಬಂದಿಲ್ಲ. ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಚುನಾವಣಾ ಆಯೋಗವು ಸುಮಾರು 67% ಮತದಾನವನ್ನು ದಾಖಲಿಸಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...