Homeಮುಖಪುಟಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು ತೋರಿಸುತ್ತವೆ. ಅಂದರೆ ಮತದಾನ ಮುಗಿದ 379 ಕ್ಷೇತ್ರಗಳಲ್ಲಿ ಸರಾಸರಿ 28,000 ಮತಗಳ ವ್ಯತ್ಯಾಸವನ್ನು ತೋರಿಸುತ್ತದೆ.

ಪ್ರತಿ ಹಂತದ ಮತದಾನ ದಿನದಂದು ರಾತ್ರಿ 10.30ರಿಂದ 11.30ರ ನಡುವೆ ಅಂಕಿಅಂಶಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಚು.ಆಯೋಗ ಬಿಡುಗಡೆಗೊಳಿಸಿರುವ ಅಂತಿಮ ಅಂಕಿ ಅಂಶಗಳು ಪೋಸ್ಟಲ್‌ ಮತಗಳನ್ನು ಒಳಗೊಂಡಿಲ್ಲ ಹಾಗೂ ಇದು ಅಂದಾಜು ಟ್ರೆಂಡ್‌ಗಳು ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಮತದಾನದ ಬಗ್ಗೆ ಮಾಹಿತಿ ನೀಡಲಾಗಿದೆ ಮತ್ತ 2, 3 ಮತ್ತು 4ನೇ ಹಂತದ ಚುನಾವಣೆಯ ನಾಲ್ಕು ದಿನಗಳ ನಂತರ ಈ ಪ್ರಕ್ರಿಯೆ ನಡೆದಿದೆ.

ಅಂತಿಮ ಅಂಕಿಅಂಶಗಳು ಮತದಾನದ ದಿನದಂದು ಬಹಿರಂಗಗೊಳಿಸಿದ ಅಂಕಿಅಂಶಗಳಿಗಿಂತ ಭಿನ್ನವಾಗಿವೆ. ಹಲವಾರು ರಾಜ್ಯಗಳಲ್ಲಿನ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೊದಲ ಹಂತದ ಚುನಾವಣೆಯಲ್ಲಿ 18.6 ಲಕ್ಷ ಮತಗಳು, ಎರಡನೇ ಹಂತದಲ್ಲಿ 32.2 ಲಕ್ಷ ಮತಗಳು, ಮೂರನೇ ಹಂತದಲ್ಲಿ 22.1 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 33.9 ಲಕ್ಷ ಮತಗಳು ಹೀಗೆ ಒಟ್ಟು 1.07 ಕೋಟಿ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಆಂಧ್ರ ಪ್ರದೇಶದಲ್ಲಿ ಆರಂಭದಲ್ಲಿ ತಿಳಿಸಲಾದ ಅಂಕಿಅಂಶ ಮತ್ತು ಅಂತಿಮ ಡೇಟಾದಲ್ಲಿ 4.2% ವ್ಯತ್ಯಾಸವಿದೆ (ಇದು ಗರಿಷ್ಠ 17.2 ಲಕ್ಷ ಆಗಿದೆ). ಮಹಾರಾಷ್ಟ್ರದಲ್ಲಿ ಶೇ 2.4(ಅಂದರೆ 16.7 ಲಕ್ಷ), ಕೇರಳದಲ್ಲಿ ಶೇ 4.1 (ಅಂದರೆ 11.4 ಲಕ್ಷ) ಮತ್ತು ಅಸ್ಸಾಂನಲ್ಲಿ ಶೇ 4.2 (ಅಂದರೆ 10.3 ಲಕ್ಷ) ಮತಗಳಲ್ಲಿ ಏರಿಕೆಯಾಗಿದೆ. ಅಸ್ಸಾಂನಲ್ಲಿ ಪ್ರತಿ ಕ್ಷೇತ್ರದಲ್ಲಿ 73,000ಕ್ಕೂ ಅಧಿಕ ಮತಗಳ ವ್ಯತ್ಯಾಸವಿದೆ. ಆಂಧ್ರಪ್ರದೇಶದಲ್ಲಿ 69,000 ಮತಗಳು ಹಾಗೂ ಕೇರಳದಲ್ಲಿ 57,000 ಮತಗಳು, ಕರ್ನಾಟಕದಲ್ಲಿ 51,000 ಮತ್ತು ಮಹಾರಾಷ್ಟ್ರದಲ್ಲಿ 48,000 ಮತಗಳ ವ್ಯತ್ಯಾಸವಿದೆ.

ಆದರೆ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣಾ ಆಯೋಗದ ಅಂಕಿಸಂಖ್ಯೆಗಳಲ್ಲಿ ಹೆಚ್ಚಾಗಿ ವ್ಯತ್ಯಾಸ ಕಂಡು ಬಂದಿಲ್ಲ. ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಚುನಾವಣಾ ಆಯೋಗವು ಸುಮಾರು 67% ಮತದಾನವನ್ನು ದಾಖಲಿಸಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...