Homeಮುಖಪುಟಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು ತೋರಿಸುತ್ತವೆ. ಅಂದರೆ ಮತದಾನ ಮುಗಿದ 379 ಕ್ಷೇತ್ರಗಳಲ್ಲಿ ಸರಾಸರಿ 28,000 ಮತಗಳ ವ್ಯತ್ಯಾಸವನ್ನು ತೋರಿಸುತ್ತದೆ.

ಪ್ರತಿ ಹಂತದ ಮತದಾನ ದಿನದಂದು ರಾತ್ರಿ 10.30ರಿಂದ 11.30ರ ನಡುವೆ ಅಂಕಿಅಂಶಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಚು.ಆಯೋಗ ಬಿಡುಗಡೆಗೊಳಿಸಿರುವ ಅಂತಿಮ ಅಂಕಿ ಅಂಶಗಳು ಪೋಸ್ಟಲ್‌ ಮತಗಳನ್ನು ಒಳಗೊಂಡಿಲ್ಲ ಹಾಗೂ ಇದು ಅಂದಾಜು ಟ್ರೆಂಡ್‌ಗಳು ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಮತದಾನದ ಬಗ್ಗೆ ಮಾಹಿತಿ ನೀಡಲಾಗಿದೆ ಮತ್ತ 2, 3 ಮತ್ತು 4ನೇ ಹಂತದ ಚುನಾವಣೆಯ ನಾಲ್ಕು ದಿನಗಳ ನಂತರ ಈ ಪ್ರಕ್ರಿಯೆ ನಡೆದಿದೆ.

ಅಂತಿಮ ಅಂಕಿಅಂಶಗಳು ಮತದಾನದ ದಿನದಂದು ಬಹಿರಂಗಗೊಳಿಸಿದ ಅಂಕಿಅಂಶಗಳಿಗಿಂತ ಭಿನ್ನವಾಗಿವೆ. ಹಲವಾರು ರಾಜ್ಯಗಳಲ್ಲಿನ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೊದಲ ಹಂತದ ಚುನಾವಣೆಯಲ್ಲಿ 18.6 ಲಕ್ಷ ಮತಗಳು, ಎರಡನೇ ಹಂತದಲ್ಲಿ 32.2 ಲಕ್ಷ ಮತಗಳು, ಮೂರನೇ ಹಂತದಲ್ಲಿ 22.1 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 33.9 ಲಕ್ಷ ಮತಗಳು ಹೀಗೆ ಒಟ್ಟು 1.07 ಕೋಟಿ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಆಂಧ್ರ ಪ್ರದೇಶದಲ್ಲಿ ಆರಂಭದಲ್ಲಿ ತಿಳಿಸಲಾದ ಅಂಕಿಅಂಶ ಮತ್ತು ಅಂತಿಮ ಡೇಟಾದಲ್ಲಿ 4.2% ವ್ಯತ್ಯಾಸವಿದೆ (ಇದು ಗರಿಷ್ಠ 17.2 ಲಕ್ಷ ಆಗಿದೆ). ಮಹಾರಾಷ್ಟ್ರದಲ್ಲಿ ಶೇ 2.4(ಅಂದರೆ 16.7 ಲಕ್ಷ), ಕೇರಳದಲ್ಲಿ ಶೇ 4.1 (ಅಂದರೆ 11.4 ಲಕ್ಷ) ಮತ್ತು ಅಸ್ಸಾಂನಲ್ಲಿ ಶೇ 4.2 (ಅಂದರೆ 10.3 ಲಕ್ಷ) ಮತಗಳಲ್ಲಿ ಏರಿಕೆಯಾಗಿದೆ. ಅಸ್ಸಾಂನಲ್ಲಿ ಪ್ರತಿ ಕ್ಷೇತ್ರದಲ್ಲಿ 73,000ಕ್ಕೂ ಅಧಿಕ ಮತಗಳ ವ್ಯತ್ಯಾಸವಿದೆ. ಆಂಧ್ರಪ್ರದೇಶದಲ್ಲಿ 69,000 ಮತಗಳು ಹಾಗೂ ಕೇರಳದಲ್ಲಿ 57,000 ಮತಗಳು, ಕರ್ನಾಟಕದಲ್ಲಿ 51,000 ಮತ್ತು ಮಹಾರಾಷ್ಟ್ರದಲ್ಲಿ 48,000 ಮತಗಳ ವ್ಯತ್ಯಾಸವಿದೆ.

ಆದರೆ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣಾ ಆಯೋಗದ ಅಂಕಿಸಂಖ್ಯೆಗಳಲ್ಲಿ ಹೆಚ್ಚಾಗಿ ವ್ಯತ್ಯಾಸ ಕಂಡು ಬಂದಿಲ್ಲ. ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಚುನಾವಣಾ ಆಯೋಗವು ಸುಮಾರು 67% ಮತದಾನವನ್ನು ದಾಖಲಿಸಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...