HomeUncategorizedವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ತ್ಯತ್ಯಾಸ ಕಂಡು ಬರುತ್ತಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಲಬುರ್ಗಿಯಲ್ಲಿ ಮತ ಏಣಿಕೆ ಮುಗಿದ ನಂತರ ಲೆಕ್ಕ ಹಾಕಿದಾಗ, ಮತದಾನ ಆಗಿದ್ದಕ್ಕಿಂತ ಎಣಿಕೆ ಆದ ಮತಗಳು ಹೆಚ್ಚಿದ್ದವು! ಇದನ್ನು ಅಲ್ಲಿನ ‘ಪ್ರಜಾವಾಣಿ’ ವಿಸ್ತಾರವಾಗಿ ವರದಿ ಮಾಡಿತ್ತು. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಉತ್ತರ ಭಾರತದ ಎಂಟು ಆಯ್ದ ಕ್ಷೇತ್ರಗಳಲ್ಲಿ ತನಿಖೆ ನಡೆಸಿದ್ದು, ಎಲ್ಲ ಕಡೆ ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಜಾಸ್ತಿ ಇವೆ! ಈ ಕುರಿತು ಚುನಾವಣಾ ಆಯೋಗ ಉತ್ತರಿಸಲೇಬೇಕು ಎಂದು ಮೂವರು ಮಾಜಿ ಚುನಾವಣಾ ಆಯುಕ್ತರು ಒತ್ತಾಯಿಸಿದ್ದಾರೆ….

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಠ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಮಾಡಿರುವ ತನಿಖೆ ಈ ಪ್ರಶ್ನೆಗಳನ್ನು ಎತ್ತಿದೆ ಮತ್ತು ಈ ಕುರಿತು ಧ್ವನಿ ಎತ್ತಿರುವ ಮೂವರು ಮಾಜಿ ಚುನಾವಣಾ ಆಯುಕ್ತರು ಆಯೋಗ ಈ ಕುರಿತು ಗೊಂದಲಗಳನ್ನು ಕೂಡಲೇ ಬಹೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೌಂಟಿಂಗ್‍ನಲ್ಲಿ ಹೆಚ್ಚಾಗಿದ್ದು ಹೇಗೆ?
ಈ ಪ್ರಶ್ನೆಯನ್ನು ಪ್ರಜಾಪ್ರಭುತ್ವ ಗೌರವಿಸುವ ಎಲ್ಲರೂ ಕೇಳಲೇಬೇಕಾಗಿದೆ. ಉತ್ತರಪ್ರದೇಶ, ಬಿಹಾರ್, ದೆಹಲಿ ಮತ್ತು ಮಧ್ಯಪ್ರದೇಶದ ಹಲವಾರು ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಕಂಡು ಬಂದಿದೆ. ಅವುಗಳಲ್ಲಿ ಎಂಟು ಕ್ಷೇತ್ರಗಳ ತನಿಖೆ ಮಾಡಿದಾಗ ಇದು ಸತ್ಯ ಎಂಬುದು ಸಾಬೀತಾಗಿದೆ. ಅದರಲ್ಲಿ ಪ್ರತಿಷ್ಠಿತ ಎನಿಸಿದ್ದ ಪಾಟ್ನಾ ಸಾಹೀಬ್, ಜೆಹಲ್ನಾಬಾದ್ ಮತ್ತು ಬೇಗುಸರಾಯ್ ಕ್ಷೇತ್ರಗಳೂ ಸೇರಿವೆ. ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತಗಳು ಹೆಚ್ಚಿವೆ, ಒಂದು ಕಡೆ ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತ ಕಡಿಮೆಯೂ ಇದೆ. ಈ ವ್ಯತ್ಯಾಸವೇ ಗೋಲ್‍ಮಾಲ್ ನಡೆದಿರಬಹುದು ಎಂಬ ದಟ್ಟ ಸಂಶಯಕ್ಕೆ ಕಾರಣವಾಗಿದೆ.

ಈ ಎಂಟು ಕ್ಷೇತ್ರಗಳ ಪೈಕಿ ಕನಿಷ್ಠ ಒಂದರಲ್ಲಿ, ಗೆಲುವಿನ ಅಂತರಕ್ಕಿಂತ ಮತ ವ್ಯತ್ಯಾಸ (ಕೌಂಟ್ ಆದ ಮತಗಳು ಮೈನಸ್ ವೋಟ್ ಆದ ಮತಗಳು)ವೇ ದೊಡ್ಡದಿದ್ದು ಬಹುಪಾಲು ಕ್ಷೇತ್ರಗಳಲ್ಲಿ ಇದು ಸಂಭವಿಸಿರಬಹುದು ಎಂದು ತನಿಖೆ ಉಲ್ಲೇಖಿಸಿದೆ. ಮೇ 23ರ ಏಣಿಕೆಗೂ ಮೊದಲು ಅಕ್ರಮವಾಗಿ ಎವಿಎಂಗಳನ್ನು ಸಾಗಿಸಿದ ವರದಿ ಮತ್ತು ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಇಲ್ಲೇನೋ ಮಸಲತ್ತು ನಡೆದಿದೆ ಎಂಬ ಸಂಶಯವನ್ನು ಈ ತನಿಖೆ ಇನ್ನಷ್ಟು ಗಟ್ಟಿಗೊಳಿಸಿದೆ.

ಮಾಜಿ ಆಯುಕ್ತರ ಆಗ್ರಹ
ಮೂವರು ಮಾಜಿ ಆಯುಕ್ತರು ಇದರ ವಿರುದ್ಧ ಧ್ವನಿ ಎತ್ತಿ ಆಯೋಗ ಕೂಡಲೇ ಈ ಸಂಶಯಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆಯುಕ್ತರಾಗಿದ್ದ ಖುರೇಶಿ, ಇದಕ್ಕೆ ಆಯೋಗದ ಬಳಿ ಕಾರಣಗಳಿರಬಹುದು. ಆದರೆ ಈ ವಿಷಯವಾಗಿ ಯಾರಾದರೂ ಕೋರ್ಟಿಗೆ ಹೋಗೋದು ಒಳ್ಳೆಯದು ಎಂದು ಹೇಳಿದ್ದಾರೆ.

ಖುರೇಷಿ

2006-09ರಲ್ಲಿ ಆಯುಕ್ತರಾಗಿದ್ದ ಗೋಪಾಲಸ್ವಾಮಿ, 2015ರಲ್ಲಿ ಆಯುಕ್ತರಾಗಿದ್ದ ಎಚ್.ಎಸ್ ಬ್ರಹ್ಮ ಕೂಡ ಇದೇ ತರಹದ ಪ್ರಶ್ನೆ ಎತ್ತುವ ಮೂಲಕ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!
ಪಾಟ್ನಾ ಸಾಹೀಬ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿಶಂಕರ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಶತ್ರುಘನ ಸಿನ್ಹಾ ಸ್ಪರ್ಧಿಸಿದ್ದರು. ಅಲ್ಲಿ 20, 51, 905 ಅರ್ಹ ಮತದಾರರಿದ್ದು, ಮೇ 18ರಂದು ಶೇ 46.34ರಷ್ಟು ಮತದಾನವಾಗಿತ್ತು. ಆದರೆ ಮೇ 23ರಂದು ಏಣಿಕೆ ಮಾಡಿದಾಗ ಅಂಚೆಮತ ಸೇರಿ ರವಿಶಂಕರ ಪ್ರಸಾದ್‍ಗೆ 6,07,506, ಶತ್ರುಘ್ನ ಸಿನ್ಹಾಗೆ 3,22, 849 ಮತ್ತು ನೋಟಾ ಸೇರಿ ಇತರೆ 45,709 ಮತ ಲಭಿಸಿವೆ.

ಅಂದರೆ ಆಯೋಗದ ಪ್ರಕಾರ 9,82,285 ಮತಗಳು ದಾಖಲಾಗಿವೆ. ಶೆಕಡಾವಾರು ಮತದಾನದ ಪ್ರಕಾರ, 9,50,852 ಮತಗಳು ಹಾಕಲ್ಪಟ್ಟಿವೆ. ಈ ಹೆಚ್ಚುವರಿ 31,433 ಮತಗಳು ಎಲ್ಲಿಂದ ಬಂದವು?

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ಯತ್ಯಾಸ ಕಂಡು ಬರುತ್ತಿದೆ.

ಇದು ಕೇವಲ ಅಂಕಗಣಿತದ ತಪ್ಪಾಗಿರಲಾರದು. ಏಕೆಂದರೆ ದೇಶದ ನಾನಾ ಕಡೆಯಿಂದ ಈ ಸಂಶಯಗಳು ಕೇಳಿ ಬಂದಿವೆ. ರಾಜ್ಯದ ಪ್ರತಿಷ್ಠಿತ ಕಲಬುರ್ಗಿ ಕ್ಷೇತ್ರದಲ್ಲೂ ಅಪರಾ ತಪರಾ ಕಂಡುಬಂದಿದೆ.

ಈಗಲಾದರೂ ಚುನಾವಣಾ ಆಯೋಗ ಈ ವ್ಯತ್ಯಾಸಗಳಿಗೆ ಕಾರಣ ನೀಡಲೇಬೇಕು. ಹೆಚ್ಚುವರಿ ಮತಗಳು ಹೇಗೆ ಬಂದವು ಎಂಬುದನ್ನೂ ವಿವರಿಸಬೇಕು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೆ ಆಗಲಿ ಬಿಡಿ. ಗೆದ್ದು ಬಂದರೂ ಅವರು ಮಾಡೋದು ಅಷ್ಟರಲ್ಲೇ ಇದೆ. ಆಯ್ಕೆ ಆದವರೆಲ್ಲ ಖಜಾನೆ ದರೋಡೆ ಮಾಡಿಯೇ ಸಿದ್ಧ. ಮತದಾನ ಮಾಡಿದವರಿಗೆ ನಯಾ ಪೈಸೆ ಲಾಭ ಆಗಿದೆಯೇ. ಮತ ದಾನ ಮಾಡಿ ಮಾಡಿ ಮತದಾರ ಕೆಟ್ಟ.. ಮತ ದಾನ ಮಾಡಿಸಿಕೊಂಡಾವ ಲೂಟಿ ಮಾಡಿ ಮಾಡಿ ಅವನ ವಂಶವೃಕ್ಷ ತಿಂದು ತೇಗಿದರೂ ಹತ್ತಾರು ತಲೆಮಾರುಗಳು ಸುಖವಾಗಿರಬಹುದು ಅಷ್ಟು ದರೋಡೆ ಮಾಡಿ ಪ್ರಜಾಪ್ರಭುತ್ವ ಕೆಟ್ಟ ಹಾಳಾಗೋ ಹಾಗೆ ಮಾಡಿದ. ಯಾವಾನ್ ಗೆದ್ದರೂ ಕಳ್ಳತನ ಮಾಡೋದ್ ತಾನೆ. ಒಬ್ಬನಿಗಾದರೂ ದೇಶದ ಅಭಿವೃದ್ಧಿ ಅಂದರೇನು ಅಂತಾ ಗೊತ್ತಾ..? ಅವರ ಕುಟುಂಬದವರೆಲ್ಲರ ನವರಂಧ್ರಗಳು ಸುಖ ಪಡಬೇಕು. ರೈತರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕು. ವಿಷ ಕುಡಿದು ಸಾಯಬೇಕು. ನಿರುದ್ಯೋಗಿಗಳು ಕೆಲಸ ಇಲ್ಲದೇ ಹುಚ್ಚರಂಥೆ ಅಲೆಯಬೇಕು. ಇದನ್ನು ಬಿಟ್ಟು ಈ ದೇಶದ ಚುನಾವಣೆಯ ನಂತರ ದೇಶ ಬದಲಾಗಿದೆಯೇ..? ಎಲ್ಲಾ ಖಧೀಮರು, ಭ್ರಷ್ಟರು. ಎಂಟು ದಶಕಗಳು ಕಳೆದರೂ ಜನರಿಗೆ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಇಲ್ಲಿ ಚುನಾವಣೆ ನೆಪಕ್ಕೆ ಮಾತ್ರ. ಇಷ್ಟು ದಶಕಗಳಲ್ಲಿ ಆಯ್ಕೆ ಆಗಿದ್ದವರಲ್ಲಿ ಒಬ್ಬನಾದರೂ ಸಾಚಾ ಇದ್ದರೆ ಎದಿ ಮುಟ್ಟಿ ಕೊಂಡು ಹೇಳಲಿ ನೋಡೋಣ.

  2. ಈ ಸುದ್ದಿಯ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳದೇ ನಂಬುವುದು ಕಷ್ಟ.

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...