HomeUncategorizedವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ತ್ಯತ್ಯಾಸ ಕಂಡು ಬರುತ್ತಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಲಬುರ್ಗಿಯಲ್ಲಿ ಮತ ಏಣಿಕೆ ಮುಗಿದ ನಂತರ ಲೆಕ್ಕ ಹಾಕಿದಾಗ, ಮತದಾನ ಆಗಿದ್ದಕ್ಕಿಂತ ಎಣಿಕೆ ಆದ ಮತಗಳು ಹೆಚ್ಚಿದ್ದವು! ಇದನ್ನು ಅಲ್ಲಿನ ‘ಪ್ರಜಾವಾಣಿ’ ವಿಸ್ತಾರವಾಗಿ ವರದಿ ಮಾಡಿತ್ತು. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಉತ್ತರ ಭಾರತದ ಎಂಟು ಆಯ್ದ ಕ್ಷೇತ್ರಗಳಲ್ಲಿ ತನಿಖೆ ನಡೆಸಿದ್ದು, ಎಲ್ಲ ಕಡೆ ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಜಾಸ್ತಿ ಇವೆ! ಈ ಕುರಿತು ಚುನಾವಣಾ ಆಯೋಗ ಉತ್ತರಿಸಲೇಬೇಕು ಎಂದು ಮೂವರು ಮಾಜಿ ಚುನಾವಣಾ ಆಯುಕ್ತರು ಒತ್ತಾಯಿಸಿದ್ದಾರೆ….

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಠ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಮಾಡಿರುವ ತನಿಖೆ ಈ ಪ್ರಶ್ನೆಗಳನ್ನು ಎತ್ತಿದೆ ಮತ್ತು ಈ ಕುರಿತು ಧ್ವನಿ ಎತ್ತಿರುವ ಮೂವರು ಮಾಜಿ ಚುನಾವಣಾ ಆಯುಕ್ತರು ಆಯೋಗ ಈ ಕುರಿತು ಗೊಂದಲಗಳನ್ನು ಕೂಡಲೇ ಬಹೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೌಂಟಿಂಗ್‍ನಲ್ಲಿ ಹೆಚ್ಚಾಗಿದ್ದು ಹೇಗೆ?
ಈ ಪ್ರಶ್ನೆಯನ್ನು ಪ್ರಜಾಪ್ರಭುತ್ವ ಗೌರವಿಸುವ ಎಲ್ಲರೂ ಕೇಳಲೇಬೇಕಾಗಿದೆ. ಉತ್ತರಪ್ರದೇಶ, ಬಿಹಾರ್, ದೆಹಲಿ ಮತ್ತು ಮಧ್ಯಪ್ರದೇಶದ ಹಲವಾರು ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಕಂಡು ಬಂದಿದೆ. ಅವುಗಳಲ್ಲಿ ಎಂಟು ಕ್ಷೇತ್ರಗಳ ತನಿಖೆ ಮಾಡಿದಾಗ ಇದು ಸತ್ಯ ಎಂಬುದು ಸಾಬೀತಾಗಿದೆ. ಅದರಲ್ಲಿ ಪ್ರತಿಷ್ಠಿತ ಎನಿಸಿದ್ದ ಪಾಟ್ನಾ ಸಾಹೀಬ್, ಜೆಹಲ್ನಾಬಾದ್ ಮತ್ತು ಬೇಗುಸರಾಯ್ ಕ್ಷೇತ್ರಗಳೂ ಸೇರಿವೆ. ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತಗಳು ಹೆಚ್ಚಿವೆ, ಒಂದು ಕಡೆ ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತ ಕಡಿಮೆಯೂ ಇದೆ. ಈ ವ್ಯತ್ಯಾಸವೇ ಗೋಲ್‍ಮಾಲ್ ನಡೆದಿರಬಹುದು ಎಂಬ ದಟ್ಟ ಸಂಶಯಕ್ಕೆ ಕಾರಣವಾಗಿದೆ.

ಈ ಎಂಟು ಕ್ಷೇತ್ರಗಳ ಪೈಕಿ ಕನಿಷ್ಠ ಒಂದರಲ್ಲಿ, ಗೆಲುವಿನ ಅಂತರಕ್ಕಿಂತ ಮತ ವ್ಯತ್ಯಾಸ (ಕೌಂಟ್ ಆದ ಮತಗಳು ಮೈನಸ್ ವೋಟ್ ಆದ ಮತಗಳು)ವೇ ದೊಡ್ಡದಿದ್ದು ಬಹುಪಾಲು ಕ್ಷೇತ್ರಗಳಲ್ಲಿ ಇದು ಸಂಭವಿಸಿರಬಹುದು ಎಂದು ತನಿಖೆ ಉಲ್ಲೇಖಿಸಿದೆ. ಮೇ 23ರ ಏಣಿಕೆಗೂ ಮೊದಲು ಅಕ್ರಮವಾಗಿ ಎವಿಎಂಗಳನ್ನು ಸಾಗಿಸಿದ ವರದಿ ಮತ್ತು ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಇಲ್ಲೇನೋ ಮಸಲತ್ತು ನಡೆದಿದೆ ಎಂಬ ಸಂಶಯವನ್ನು ಈ ತನಿಖೆ ಇನ್ನಷ್ಟು ಗಟ್ಟಿಗೊಳಿಸಿದೆ.

ಮಾಜಿ ಆಯುಕ್ತರ ಆಗ್ರಹ
ಮೂವರು ಮಾಜಿ ಆಯುಕ್ತರು ಇದರ ವಿರುದ್ಧ ಧ್ವನಿ ಎತ್ತಿ ಆಯೋಗ ಕೂಡಲೇ ಈ ಸಂಶಯಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆಯುಕ್ತರಾಗಿದ್ದ ಖುರೇಶಿ, ಇದಕ್ಕೆ ಆಯೋಗದ ಬಳಿ ಕಾರಣಗಳಿರಬಹುದು. ಆದರೆ ಈ ವಿಷಯವಾಗಿ ಯಾರಾದರೂ ಕೋರ್ಟಿಗೆ ಹೋಗೋದು ಒಳ್ಳೆಯದು ಎಂದು ಹೇಳಿದ್ದಾರೆ.

ಖುರೇಷಿ

2006-09ರಲ್ಲಿ ಆಯುಕ್ತರಾಗಿದ್ದ ಗೋಪಾಲಸ್ವಾಮಿ, 2015ರಲ್ಲಿ ಆಯುಕ್ತರಾಗಿದ್ದ ಎಚ್.ಎಸ್ ಬ್ರಹ್ಮ ಕೂಡ ಇದೇ ತರಹದ ಪ್ರಶ್ನೆ ಎತ್ತುವ ಮೂಲಕ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!
ಪಾಟ್ನಾ ಸಾಹೀಬ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿಶಂಕರ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಶತ್ರುಘನ ಸಿನ್ಹಾ ಸ್ಪರ್ಧಿಸಿದ್ದರು. ಅಲ್ಲಿ 20, 51, 905 ಅರ್ಹ ಮತದಾರರಿದ್ದು, ಮೇ 18ರಂದು ಶೇ 46.34ರಷ್ಟು ಮತದಾನವಾಗಿತ್ತು. ಆದರೆ ಮೇ 23ರಂದು ಏಣಿಕೆ ಮಾಡಿದಾಗ ಅಂಚೆಮತ ಸೇರಿ ರವಿಶಂಕರ ಪ್ರಸಾದ್‍ಗೆ 6,07,506, ಶತ್ರುಘ್ನ ಸಿನ್ಹಾಗೆ 3,22, 849 ಮತ್ತು ನೋಟಾ ಸೇರಿ ಇತರೆ 45,709 ಮತ ಲಭಿಸಿವೆ.

ಅಂದರೆ ಆಯೋಗದ ಪ್ರಕಾರ 9,82,285 ಮತಗಳು ದಾಖಲಾಗಿವೆ. ಶೆಕಡಾವಾರು ಮತದಾನದ ಪ್ರಕಾರ, 9,50,852 ಮತಗಳು ಹಾಕಲ್ಪಟ್ಟಿವೆ. ಈ ಹೆಚ್ಚುವರಿ 31,433 ಮತಗಳು ಎಲ್ಲಿಂದ ಬಂದವು?

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ಯತ್ಯಾಸ ಕಂಡು ಬರುತ್ತಿದೆ.

ಇದು ಕೇವಲ ಅಂಕಗಣಿತದ ತಪ್ಪಾಗಿರಲಾರದು. ಏಕೆಂದರೆ ದೇಶದ ನಾನಾ ಕಡೆಯಿಂದ ಈ ಸಂಶಯಗಳು ಕೇಳಿ ಬಂದಿವೆ. ರಾಜ್ಯದ ಪ್ರತಿಷ್ಠಿತ ಕಲಬುರ್ಗಿ ಕ್ಷೇತ್ರದಲ್ಲೂ ಅಪರಾ ತಪರಾ ಕಂಡುಬಂದಿದೆ.

ಈಗಲಾದರೂ ಚುನಾವಣಾ ಆಯೋಗ ಈ ವ್ಯತ್ಯಾಸಗಳಿಗೆ ಕಾರಣ ನೀಡಲೇಬೇಕು. ಹೆಚ್ಚುವರಿ ಮತಗಳು ಹೇಗೆ ಬಂದವು ಎಂಬುದನ್ನೂ ವಿವರಿಸಬೇಕು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೆ ಆಗಲಿ ಬಿಡಿ. ಗೆದ್ದು ಬಂದರೂ ಅವರು ಮಾಡೋದು ಅಷ್ಟರಲ್ಲೇ ಇದೆ. ಆಯ್ಕೆ ಆದವರೆಲ್ಲ ಖಜಾನೆ ದರೋಡೆ ಮಾಡಿಯೇ ಸಿದ್ಧ. ಮತದಾನ ಮಾಡಿದವರಿಗೆ ನಯಾ ಪೈಸೆ ಲಾಭ ಆಗಿದೆಯೇ. ಮತ ದಾನ ಮಾಡಿ ಮಾಡಿ ಮತದಾರ ಕೆಟ್ಟ.. ಮತ ದಾನ ಮಾಡಿಸಿಕೊಂಡಾವ ಲೂಟಿ ಮಾಡಿ ಮಾಡಿ ಅವನ ವಂಶವೃಕ್ಷ ತಿಂದು ತೇಗಿದರೂ ಹತ್ತಾರು ತಲೆಮಾರುಗಳು ಸುಖವಾಗಿರಬಹುದು ಅಷ್ಟು ದರೋಡೆ ಮಾಡಿ ಪ್ರಜಾಪ್ರಭುತ್ವ ಕೆಟ್ಟ ಹಾಳಾಗೋ ಹಾಗೆ ಮಾಡಿದ. ಯಾವಾನ್ ಗೆದ್ದರೂ ಕಳ್ಳತನ ಮಾಡೋದ್ ತಾನೆ. ಒಬ್ಬನಿಗಾದರೂ ದೇಶದ ಅಭಿವೃದ್ಧಿ ಅಂದರೇನು ಅಂತಾ ಗೊತ್ತಾ..? ಅವರ ಕುಟುಂಬದವರೆಲ್ಲರ ನವರಂಧ್ರಗಳು ಸುಖ ಪಡಬೇಕು. ರೈತರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕು. ವಿಷ ಕುಡಿದು ಸಾಯಬೇಕು. ನಿರುದ್ಯೋಗಿಗಳು ಕೆಲಸ ಇಲ್ಲದೇ ಹುಚ್ಚರಂಥೆ ಅಲೆಯಬೇಕು. ಇದನ್ನು ಬಿಟ್ಟು ಈ ದೇಶದ ಚುನಾವಣೆಯ ನಂತರ ದೇಶ ಬದಲಾಗಿದೆಯೇ..? ಎಲ್ಲಾ ಖಧೀಮರು, ಭ್ರಷ್ಟರು. ಎಂಟು ದಶಕಗಳು ಕಳೆದರೂ ಜನರಿಗೆ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಇಲ್ಲಿ ಚುನಾವಣೆ ನೆಪಕ್ಕೆ ಮಾತ್ರ. ಇಷ್ಟು ದಶಕಗಳಲ್ಲಿ ಆಯ್ಕೆ ಆಗಿದ್ದವರಲ್ಲಿ ಒಬ್ಬನಾದರೂ ಸಾಚಾ ಇದ್ದರೆ ಎದಿ ಮುಟ್ಟಿ ಕೊಂಡು ಹೇಳಲಿ ನೋಡೋಣ.

  2. ಈ ಸುದ್ದಿಯ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳದೇ ನಂಬುವುದು ಕಷ್ಟ.

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...