HomeUncategorizedವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ತ್ಯತ್ಯಾಸ ಕಂಡು ಬರುತ್ತಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಲಬುರ್ಗಿಯಲ್ಲಿ ಮತ ಏಣಿಕೆ ಮುಗಿದ ನಂತರ ಲೆಕ್ಕ ಹಾಕಿದಾಗ, ಮತದಾನ ಆಗಿದ್ದಕ್ಕಿಂತ ಎಣಿಕೆ ಆದ ಮತಗಳು ಹೆಚ್ಚಿದ್ದವು! ಇದನ್ನು ಅಲ್ಲಿನ ‘ಪ್ರಜಾವಾಣಿ’ ವಿಸ್ತಾರವಾಗಿ ವರದಿ ಮಾಡಿತ್ತು. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಉತ್ತರ ಭಾರತದ ಎಂಟು ಆಯ್ದ ಕ್ಷೇತ್ರಗಳಲ್ಲಿ ತನಿಖೆ ನಡೆಸಿದ್ದು, ಎಲ್ಲ ಕಡೆ ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಜಾಸ್ತಿ ಇವೆ! ಈ ಕುರಿತು ಚುನಾವಣಾ ಆಯೋಗ ಉತ್ತರಿಸಲೇಬೇಕು ಎಂದು ಮೂವರು ಮಾಜಿ ಚುನಾವಣಾ ಆಯುಕ್ತರು ಒತ್ತಾಯಿಸಿದ್ದಾರೆ….

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಠ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಮಾಡಿರುವ ತನಿಖೆ ಈ ಪ್ರಶ್ನೆಗಳನ್ನು ಎತ್ತಿದೆ ಮತ್ತು ಈ ಕುರಿತು ಧ್ವನಿ ಎತ್ತಿರುವ ಮೂವರು ಮಾಜಿ ಚುನಾವಣಾ ಆಯುಕ್ತರು ಆಯೋಗ ಈ ಕುರಿತು ಗೊಂದಲಗಳನ್ನು ಕೂಡಲೇ ಬಹೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೌಂಟಿಂಗ್‍ನಲ್ಲಿ ಹೆಚ್ಚಾಗಿದ್ದು ಹೇಗೆ?
ಈ ಪ್ರಶ್ನೆಯನ್ನು ಪ್ರಜಾಪ್ರಭುತ್ವ ಗೌರವಿಸುವ ಎಲ್ಲರೂ ಕೇಳಲೇಬೇಕಾಗಿದೆ. ಉತ್ತರಪ್ರದೇಶ, ಬಿಹಾರ್, ದೆಹಲಿ ಮತ್ತು ಮಧ್ಯಪ್ರದೇಶದ ಹಲವಾರು ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಕಂಡು ಬಂದಿದೆ. ಅವುಗಳಲ್ಲಿ ಎಂಟು ಕ್ಷೇತ್ರಗಳ ತನಿಖೆ ಮಾಡಿದಾಗ ಇದು ಸತ್ಯ ಎಂಬುದು ಸಾಬೀತಾಗಿದೆ. ಅದರಲ್ಲಿ ಪ್ರತಿಷ್ಠಿತ ಎನಿಸಿದ್ದ ಪಾಟ್ನಾ ಸಾಹೀಬ್, ಜೆಹಲ್ನಾಬಾದ್ ಮತ್ತು ಬೇಗುಸರಾಯ್ ಕ್ಷೇತ್ರಗಳೂ ಸೇರಿವೆ. ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತಗಳು ಹೆಚ್ಚಿವೆ, ಒಂದು ಕಡೆ ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತ ಕಡಿಮೆಯೂ ಇದೆ. ಈ ವ್ಯತ್ಯಾಸವೇ ಗೋಲ್‍ಮಾಲ್ ನಡೆದಿರಬಹುದು ಎಂಬ ದಟ್ಟ ಸಂಶಯಕ್ಕೆ ಕಾರಣವಾಗಿದೆ.

ಈ ಎಂಟು ಕ್ಷೇತ್ರಗಳ ಪೈಕಿ ಕನಿಷ್ಠ ಒಂದರಲ್ಲಿ, ಗೆಲುವಿನ ಅಂತರಕ್ಕಿಂತ ಮತ ವ್ಯತ್ಯಾಸ (ಕೌಂಟ್ ಆದ ಮತಗಳು ಮೈನಸ್ ವೋಟ್ ಆದ ಮತಗಳು)ವೇ ದೊಡ್ಡದಿದ್ದು ಬಹುಪಾಲು ಕ್ಷೇತ್ರಗಳಲ್ಲಿ ಇದು ಸಂಭವಿಸಿರಬಹುದು ಎಂದು ತನಿಖೆ ಉಲ್ಲೇಖಿಸಿದೆ. ಮೇ 23ರ ಏಣಿಕೆಗೂ ಮೊದಲು ಅಕ್ರಮವಾಗಿ ಎವಿಎಂಗಳನ್ನು ಸಾಗಿಸಿದ ವರದಿ ಮತ್ತು ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಇಲ್ಲೇನೋ ಮಸಲತ್ತು ನಡೆದಿದೆ ಎಂಬ ಸಂಶಯವನ್ನು ಈ ತನಿಖೆ ಇನ್ನಷ್ಟು ಗಟ್ಟಿಗೊಳಿಸಿದೆ.

ಮಾಜಿ ಆಯುಕ್ತರ ಆಗ್ರಹ
ಮೂವರು ಮಾಜಿ ಆಯುಕ್ತರು ಇದರ ವಿರುದ್ಧ ಧ್ವನಿ ಎತ್ತಿ ಆಯೋಗ ಕೂಡಲೇ ಈ ಸಂಶಯಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆಯುಕ್ತರಾಗಿದ್ದ ಖುರೇಶಿ, ಇದಕ್ಕೆ ಆಯೋಗದ ಬಳಿ ಕಾರಣಗಳಿರಬಹುದು. ಆದರೆ ಈ ವಿಷಯವಾಗಿ ಯಾರಾದರೂ ಕೋರ್ಟಿಗೆ ಹೋಗೋದು ಒಳ್ಳೆಯದು ಎಂದು ಹೇಳಿದ್ದಾರೆ.

ಖುರೇಷಿ

2006-09ರಲ್ಲಿ ಆಯುಕ್ತರಾಗಿದ್ದ ಗೋಪಾಲಸ್ವಾಮಿ, 2015ರಲ್ಲಿ ಆಯುಕ್ತರಾಗಿದ್ದ ಎಚ್.ಎಸ್ ಬ್ರಹ್ಮ ಕೂಡ ಇದೇ ತರಹದ ಪ್ರಶ್ನೆ ಎತ್ತುವ ಮೂಲಕ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!
ಪಾಟ್ನಾ ಸಾಹೀಬ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿಶಂಕರ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಶತ್ರುಘನ ಸಿನ್ಹಾ ಸ್ಪರ್ಧಿಸಿದ್ದರು. ಅಲ್ಲಿ 20, 51, 905 ಅರ್ಹ ಮತದಾರರಿದ್ದು, ಮೇ 18ರಂದು ಶೇ 46.34ರಷ್ಟು ಮತದಾನವಾಗಿತ್ತು. ಆದರೆ ಮೇ 23ರಂದು ಏಣಿಕೆ ಮಾಡಿದಾಗ ಅಂಚೆಮತ ಸೇರಿ ರವಿಶಂಕರ ಪ್ರಸಾದ್‍ಗೆ 6,07,506, ಶತ್ರುಘ್ನ ಸಿನ್ಹಾಗೆ 3,22, 849 ಮತ್ತು ನೋಟಾ ಸೇರಿ ಇತರೆ 45,709 ಮತ ಲಭಿಸಿವೆ.

ಅಂದರೆ ಆಯೋಗದ ಪ್ರಕಾರ 9,82,285 ಮತಗಳು ದಾಖಲಾಗಿವೆ. ಶೆಕಡಾವಾರು ಮತದಾನದ ಪ್ರಕಾರ, 9,50,852 ಮತಗಳು ಹಾಕಲ್ಪಟ್ಟಿವೆ. ಈ ಹೆಚ್ಚುವರಿ 31,433 ಮತಗಳು ಎಲ್ಲಿಂದ ಬಂದವು?

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ಯತ್ಯಾಸ ಕಂಡು ಬರುತ್ತಿದೆ.

ಇದು ಕೇವಲ ಅಂಕಗಣಿತದ ತಪ್ಪಾಗಿರಲಾರದು. ಏಕೆಂದರೆ ದೇಶದ ನಾನಾ ಕಡೆಯಿಂದ ಈ ಸಂಶಯಗಳು ಕೇಳಿ ಬಂದಿವೆ. ರಾಜ್ಯದ ಪ್ರತಿಷ್ಠಿತ ಕಲಬುರ್ಗಿ ಕ್ಷೇತ್ರದಲ್ಲೂ ಅಪರಾ ತಪರಾ ಕಂಡುಬಂದಿದೆ.

ಈಗಲಾದರೂ ಚುನಾವಣಾ ಆಯೋಗ ಈ ವ್ಯತ್ಯಾಸಗಳಿಗೆ ಕಾರಣ ನೀಡಲೇಬೇಕು. ಹೆಚ್ಚುವರಿ ಮತಗಳು ಹೇಗೆ ಬಂದವು ಎಂಬುದನ್ನೂ ವಿವರಿಸಬೇಕು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೆ ಆಗಲಿ ಬಿಡಿ. ಗೆದ್ದು ಬಂದರೂ ಅವರು ಮಾಡೋದು ಅಷ್ಟರಲ್ಲೇ ಇದೆ. ಆಯ್ಕೆ ಆದವರೆಲ್ಲ ಖಜಾನೆ ದರೋಡೆ ಮಾಡಿಯೇ ಸಿದ್ಧ. ಮತದಾನ ಮಾಡಿದವರಿಗೆ ನಯಾ ಪೈಸೆ ಲಾಭ ಆಗಿದೆಯೇ. ಮತ ದಾನ ಮಾಡಿ ಮಾಡಿ ಮತದಾರ ಕೆಟ್ಟ.. ಮತ ದಾನ ಮಾಡಿಸಿಕೊಂಡಾವ ಲೂಟಿ ಮಾಡಿ ಮಾಡಿ ಅವನ ವಂಶವೃಕ್ಷ ತಿಂದು ತೇಗಿದರೂ ಹತ್ತಾರು ತಲೆಮಾರುಗಳು ಸುಖವಾಗಿರಬಹುದು ಅಷ್ಟು ದರೋಡೆ ಮಾಡಿ ಪ್ರಜಾಪ್ರಭುತ್ವ ಕೆಟ್ಟ ಹಾಳಾಗೋ ಹಾಗೆ ಮಾಡಿದ. ಯಾವಾನ್ ಗೆದ್ದರೂ ಕಳ್ಳತನ ಮಾಡೋದ್ ತಾನೆ. ಒಬ್ಬನಿಗಾದರೂ ದೇಶದ ಅಭಿವೃದ್ಧಿ ಅಂದರೇನು ಅಂತಾ ಗೊತ್ತಾ..? ಅವರ ಕುಟುಂಬದವರೆಲ್ಲರ ನವರಂಧ್ರಗಳು ಸುಖ ಪಡಬೇಕು. ರೈತರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕು. ವಿಷ ಕುಡಿದು ಸಾಯಬೇಕು. ನಿರುದ್ಯೋಗಿಗಳು ಕೆಲಸ ಇಲ್ಲದೇ ಹುಚ್ಚರಂಥೆ ಅಲೆಯಬೇಕು. ಇದನ್ನು ಬಿಟ್ಟು ಈ ದೇಶದ ಚುನಾವಣೆಯ ನಂತರ ದೇಶ ಬದಲಾಗಿದೆಯೇ..? ಎಲ್ಲಾ ಖಧೀಮರು, ಭ್ರಷ್ಟರು. ಎಂಟು ದಶಕಗಳು ಕಳೆದರೂ ಜನರಿಗೆ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಇಲ್ಲಿ ಚುನಾವಣೆ ನೆಪಕ್ಕೆ ಮಾತ್ರ. ಇಷ್ಟು ದಶಕಗಳಲ್ಲಿ ಆಯ್ಕೆ ಆಗಿದ್ದವರಲ್ಲಿ ಒಬ್ಬನಾದರೂ ಸಾಚಾ ಇದ್ದರೆ ಎದಿ ಮುಟ್ಟಿ ಕೊಂಡು ಹೇಳಲಿ ನೋಡೋಣ.

  2. ಈ ಸುದ್ದಿಯ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳದೇ ನಂಬುವುದು ಕಷ್ಟ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...