HomeUncategorizedವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು! ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ತ್ಯತ್ಯಾಸ ಕಂಡು ಬರುತ್ತಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಲಬುರ್ಗಿಯಲ್ಲಿ ಮತ ಏಣಿಕೆ ಮುಗಿದ ನಂತರ ಲೆಕ್ಕ ಹಾಕಿದಾಗ, ಮತದಾನ ಆಗಿದ್ದಕ್ಕಿಂತ ಎಣಿಕೆ ಆದ ಮತಗಳು ಹೆಚ್ಚಿದ್ದವು! ಇದನ್ನು ಅಲ್ಲಿನ ‘ಪ್ರಜಾವಾಣಿ’ ವಿಸ್ತಾರವಾಗಿ ವರದಿ ಮಾಡಿತ್ತು. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಉತ್ತರ ಭಾರತದ ಎಂಟು ಆಯ್ದ ಕ್ಷೇತ್ರಗಳಲ್ಲಿ ತನಿಖೆ ನಡೆಸಿದ್ದು, ಎಲ್ಲ ಕಡೆ ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಜಾಸ್ತಿ ಇವೆ! ಈ ಕುರಿತು ಚುನಾವಣಾ ಆಯೋಗ ಉತ್ತರಿಸಲೇಬೇಕು ಎಂದು ಮೂವರು ಮಾಜಿ ಚುನಾವಣಾ ಆಯುಕ್ತರು ಒತ್ತಾಯಿಸಿದ್ದಾರೆ….

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಠ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಮಾಡಿರುವ ತನಿಖೆ ಈ ಪ್ರಶ್ನೆಗಳನ್ನು ಎತ್ತಿದೆ ಮತ್ತು ಈ ಕುರಿತು ಧ್ವನಿ ಎತ್ತಿರುವ ಮೂವರು ಮಾಜಿ ಚುನಾವಣಾ ಆಯುಕ್ತರು ಆಯೋಗ ಈ ಕುರಿತು ಗೊಂದಲಗಳನ್ನು ಕೂಡಲೇ ಬಹೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೌಂಟಿಂಗ್‍ನಲ್ಲಿ ಹೆಚ್ಚಾಗಿದ್ದು ಹೇಗೆ?
ಈ ಪ್ರಶ್ನೆಯನ್ನು ಪ್ರಜಾಪ್ರಭುತ್ವ ಗೌರವಿಸುವ ಎಲ್ಲರೂ ಕೇಳಲೇಬೇಕಾಗಿದೆ. ಉತ್ತರಪ್ರದೇಶ, ಬಿಹಾರ್, ದೆಹಲಿ ಮತ್ತು ಮಧ್ಯಪ್ರದೇಶದ ಹಲವಾರು ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಕಂಡು ಬಂದಿದೆ. ಅವುಗಳಲ್ಲಿ ಎಂಟು ಕ್ಷೇತ್ರಗಳ ತನಿಖೆ ಮಾಡಿದಾಗ ಇದು ಸತ್ಯ ಎಂಬುದು ಸಾಬೀತಾಗಿದೆ. ಅದರಲ್ಲಿ ಪ್ರತಿಷ್ಠಿತ ಎನಿಸಿದ್ದ ಪಾಟ್ನಾ ಸಾಹೀಬ್, ಜೆಹಲ್ನಾಬಾದ್ ಮತ್ತು ಬೇಗುಸರಾಯ್ ಕ್ಷೇತ್ರಗಳೂ ಸೇರಿವೆ. ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತಗಳು ಹೆಚ್ಚಿವೆ, ಒಂದು ಕಡೆ ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತ ಕಡಿಮೆಯೂ ಇದೆ. ಈ ವ್ಯತ್ಯಾಸವೇ ಗೋಲ್‍ಮಾಲ್ ನಡೆದಿರಬಹುದು ಎಂಬ ದಟ್ಟ ಸಂಶಯಕ್ಕೆ ಕಾರಣವಾಗಿದೆ.

ಈ ಎಂಟು ಕ್ಷೇತ್ರಗಳ ಪೈಕಿ ಕನಿಷ್ಠ ಒಂದರಲ್ಲಿ, ಗೆಲುವಿನ ಅಂತರಕ್ಕಿಂತ ಮತ ವ್ಯತ್ಯಾಸ (ಕೌಂಟ್ ಆದ ಮತಗಳು ಮೈನಸ್ ವೋಟ್ ಆದ ಮತಗಳು)ವೇ ದೊಡ್ಡದಿದ್ದು ಬಹುಪಾಲು ಕ್ಷೇತ್ರಗಳಲ್ಲಿ ಇದು ಸಂಭವಿಸಿರಬಹುದು ಎಂದು ತನಿಖೆ ಉಲ್ಲೇಖಿಸಿದೆ. ಮೇ 23ರ ಏಣಿಕೆಗೂ ಮೊದಲು ಅಕ್ರಮವಾಗಿ ಎವಿಎಂಗಳನ್ನು ಸಾಗಿಸಿದ ವರದಿ ಮತ್ತು ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಇಲ್ಲೇನೋ ಮಸಲತ್ತು ನಡೆದಿದೆ ಎಂಬ ಸಂಶಯವನ್ನು ಈ ತನಿಖೆ ಇನ್ನಷ್ಟು ಗಟ್ಟಿಗೊಳಿಸಿದೆ.

ಮಾಜಿ ಆಯುಕ್ತರ ಆಗ್ರಹ
ಮೂವರು ಮಾಜಿ ಆಯುಕ್ತರು ಇದರ ವಿರುದ್ಧ ಧ್ವನಿ ಎತ್ತಿ ಆಯೋಗ ಕೂಡಲೇ ಈ ಸಂಶಯಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆಯುಕ್ತರಾಗಿದ್ದ ಖುರೇಶಿ, ಇದಕ್ಕೆ ಆಯೋಗದ ಬಳಿ ಕಾರಣಗಳಿರಬಹುದು. ಆದರೆ ಈ ವಿಷಯವಾಗಿ ಯಾರಾದರೂ ಕೋರ್ಟಿಗೆ ಹೋಗೋದು ಒಳ್ಳೆಯದು ಎಂದು ಹೇಳಿದ್ದಾರೆ.

ಖುರೇಷಿ

2006-09ರಲ್ಲಿ ಆಯುಕ್ತರಾಗಿದ್ದ ಗೋಪಾಲಸ್ವಾಮಿ, 2015ರಲ್ಲಿ ಆಯುಕ್ತರಾಗಿದ್ದ ಎಚ್.ಎಸ್ ಬ್ರಹ್ಮ ಕೂಡ ಇದೇ ತರಹದ ಪ್ರಶ್ನೆ ಎತ್ತುವ ಮೂಲಕ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!
ಪಾಟ್ನಾ ಸಾಹೀಬ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿಶಂಕರ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಶತ್ರುಘನ ಸಿನ್ಹಾ ಸ್ಪರ್ಧಿಸಿದ್ದರು. ಅಲ್ಲಿ 20, 51, 905 ಅರ್ಹ ಮತದಾರರಿದ್ದು, ಮೇ 18ರಂದು ಶೇ 46.34ರಷ್ಟು ಮತದಾನವಾಗಿತ್ತು. ಆದರೆ ಮೇ 23ರಂದು ಏಣಿಕೆ ಮಾಡಿದಾಗ ಅಂಚೆಮತ ಸೇರಿ ರವಿಶಂಕರ ಪ್ರಸಾದ್‍ಗೆ 6,07,506, ಶತ್ರುಘ್ನ ಸಿನ್ಹಾಗೆ 3,22, 849 ಮತ್ತು ನೋಟಾ ಸೇರಿ ಇತರೆ 45,709 ಮತ ಲಭಿಸಿವೆ.

ಅಂದರೆ ಆಯೋಗದ ಪ್ರಕಾರ 9,82,285 ಮತಗಳು ದಾಖಲಾಗಿವೆ. ಶೆಕಡಾವಾರು ಮತದಾನದ ಪ್ರಕಾರ, 9,50,852 ಮತಗಳು ಹಾಕಲ್ಪಟ್ಟಿವೆ. ಈ ಹೆಚ್ಚುವರಿ 31,433 ಮತಗಳು ಎಲ್ಲಿಂದ ಬಂದವು?

ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ಯತ್ಯಾಸ ಕಂಡು ಬರುತ್ತಿದೆ.

ಇದು ಕೇವಲ ಅಂಕಗಣಿತದ ತಪ್ಪಾಗಿರಲಾರದು. ಏಕೆಂದರೆ ದೇಶದ ನಾನಾ ಕಡೆಯಿಂದ ಈ ಸಂಶಯಗಳು ಕೇಳಿ ಬಂದಿವೆ. ರಾಜ್ಯದ ಪ್ರತಿಷ್ಠಿತ ಕಲಬುರ್ಗಿ ಕ್ಷೇತ್ರದಲ್ಲೂ ಅಪರಾ ತಪರಾ ಕಂಡುಬಂದಿದೆ.

ಈಗಲಾದರೂ ಚುನಾವಣಾ ಆಯೋಗ ಈ ವ್ಯತ್ಯಾಸಗಳಿಗೆ ಕಾರಣ ನೀಡಲೇಬೇಕು. ಹೆಚ್ಚುವರಿ ಮತಗಳು ಹೇಗೆ ಬಂದವು ಎಂಬುದನ್ನೂ ವಿವರಿಸಬೇಕು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೆ ಆಗಲಿ ಬಿಡಿ. ಗೆದ್ದು ಬಂದರೂ ಅವರು ಮಾಡೋದು ಅಷ್ಟರಲ್ಲೇ ಇದೆ. ಆಯ್ಕೆ ಆದವರೆಲ್ಲ ಖಜಾನೆ ದರೋಡೆ ಮಾಡಿಯೇ ಸಿದ್ಧ. ಮತದಾನ ಮಾಡಿದವರಿಗೆ ನಯಾ ಪೈಸೆ ಲಾಭ ಆಗಿದೆಯೇ. ಮತ ದಾನ ಮಾಡಿ ಮಾಡಿ ಮತದಾರ ಕೆಟ್ಟ.. ಮತ ದಾನ ಮಾಡಿಸಿಕೊಂಡಾವ ಲೂಟಿ ಮಾಡಿ ಮಾಡಿ ಅವನ ವಂಶವೃಕ್ಷ ತಿಂದು ತೇಗಿದರೂ ಹತ್ತಾರು ತಲೆಮಾರುಗಳು ಸುಖವಾಗಿರಬಹುದು ಅಷ್ಟು ದರೋಡೆ ಮಾಡಿ ಪ್ರಜಾಪ್ರಭುತ್ವ ಕೆಟ್ಟ ಹಾಳಾಗೋ ಹಾಗೆ ಮಾಡಿದ. ಯಾವಾನ್ ಗೆದ್ದರೂ ಕಳ್ಳತನ ಮಾಡೋದ್ ತಾನೆ. ಒಬ್ಬನಿಗಾದರೂ ದೇಶದ ಅಭಿವೃದ್ಧಿ ಅಂದರೇನು ಅಂತಾ ಗೊತ್ತಾ..? ಅವರ ಕುಟುಂಬದವರೆಲ್ಲರ ನವರಂಧ್ರಗಳು ಸುಖ ಪಡಬೇಕು. ರೈತರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕು. ವಿಷ ಕುಡಿದು ಸಾಯಬೇಕು. ನಿರುದ್ಯೋಗಿಗಳು ಕೆಲಸ ಇಲ್ಲದೇ ಹುಚ್ಚರಂಥೆ ಅಲೆಯಬೇಕು. ಇದನ್ನು ಬಿಟ್ಟು ಈ ದೇಶದ ಚುನಾವಣೆಯ ನಂತರ ದೇಶ ಬದಲಾಗಿದೆಯೇ..? ಎಲ್ಲಾ ಖಧೀಮರು, ಭ್ರಷ್ಟರು. ಎಂಟು ದಶಕಗಳು ಕಳೆದರೂ ಜನರಿಗೆ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಇಲ್ಲಿ ಚುನಾವಣೆ ನೆಪಕ್ಕೆ ಮಾತ್ರ. ಇಷ್ಟು ದಶಕಗಳಲ್ಲಿ ಆಯ್ಕೆ ಆಗಿದ್ದವರಲ್ಲಿ ಒಬ್ಬನಾದರೂ ಸಾಚಾ ಇದ್ದರೆ ಎದಿ ಮುಟ್ಟಿ ಕೊಂಡು ಹೇಳಲಿ ನೋಡೋಣ.

  2. ಈ ಸುದ್ದಿಯ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳದೇ ನಂಬುವುದು ಕಷ್ಟ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...