Homeಮುಖಪುಟಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

ಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

ಮಾರ್ಚ್ 10 ರಂದು ಬಿಜೆಪಿ ಮುಕ್ತ ಎಂದ ಕಾಂಗ್ರೆಸ್ - ಉತ್ತರ ಪ್ರದೇಶ ಬದಲಾಗಲಿದೆ ಎಂದ SP

- Advertisement -
- Advertisement -

ಬಹುನೀರಿಕ್ಷಿತ ಪಂಚರಾಜ್ಯ ಚುನಾವಣೆಗೆ ಕೊನೆಗೂ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದು ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ. ಈಗ ಎಲ್ಲರ ಕಣ್ಣು ಬಹುದೊಡ್ಡ ರಾಜ್ಯ ಉತ್ತರ ಪ್ರದೇಶದ ಮೇಲೆ ನೆಟ್ಟಿದೆ. ಈ ನಿಟ್ಟಿನಲ್ಲಿ ಉತ್ತರಪ್ರದೇಶದ ಅಧಿಕಾರದ ಮೇಲೆ ಕಣ್ಣಿಟ್ಟಿರುವ ಪ್ರಮುಖ ನಾಲ್ಕು ಪಕ್ಷಗಳ ಮೊದಲ ಪ್ರತಿಕ್ರಿಯೆ ಇಲ್ಲಿದೆ.

ಡಬಲ್ ಇಂಜಿನ್ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ

ಪ್ರಜಾಪ್ರಭುತ್ವದ ಮಹಾ ಹಬ್ಬದಲ್ಲಿ ರಾಜ್ಯ ಚುನಾವಣೆಯ ದಿನಾಂಕ ಘೋಷಣೆಗೆ ಸ್ವಾಗತ, ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಆಧಾರದ ಮೇಲೆ ಜನತಾ ಜನಾರ್ದನರ ಆಶೀರ್ವಾದದೊಂದಿಗೆ ಭಾರತೀಯ ಜನತಾ ಪಕ್ಷವು ಭರ್ಜರಿ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಎಎನ್‌ಐ ಜೊತೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಜನರು ಮತ್ತೊಮ್ಮೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಬದಲಾಗಲಿದೆ – ಸಮಾಜವಾದಿ ಪಕ್ಷ

ಮಾರ್ಚ್ 10 ರಂದು ಇಂಕ್ವಿಲಾಬ್ ಮೆರವಣಿಗೆ ನಡೆಯಲಿದೆ, ಉತ್ತರ ಪ್ರದೇಶ ಬದಲಾಗಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ತಮ್ಮ ಪಕ್ಷದ 2022ರಲ್ಲಿ ಸೈಕಲ್ (ಸಮಾಜವಾದಿ ಪಕ್ಷದ ಚಿಹ್ನೆ) ಅಧಿಕಾರಕ್ಕೆ ಎಂಬ ಹ್ಯಾಷ್‌ಟ್ಯಾಗ್ ಸಹ ಬಳಸಿದ್ದಾರೆ.

ಉತ್ತರ ಪ್ರದೇಶ ಹೋರಾಡುತ್ತದೆ ಮತ್ತು ಗೆಲ್ಲುತ್ತದೆ – ಕಾಂಗ್ರೆಸ್

ಮಾರ್ಚ್ 10 ರಂದು ಉತ್ತರ ಪ್ರದೇಶದ ಯುವಕರು, ರೈತರು, ಮಹಿಳೆಯರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ಸಾಮಾನ್ಯ ಜನರ ವಿಜಯಯಾತ್ರೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಯುವಕರು, ರೈತರು, ಮಹಿಳೆಯರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ಸಾಮಾನ್ಯ ಜನರ ಹಕ್ಕುಗಳಿಗಾಗಿ ಹೋರಾಡಲಿದೆ. ಯುಪಿ ಹೋರಾಡುತ್ತದೆ ಮತ್ತು ಗೆಲ್ಲುತ್ತದೆ ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್‌ರವರು ಮಾರ್ಚ್ 10 ರಂದು ಬಿಜೆಪಿ ಮುಕ್ತವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನೀತಿ ಸಂಹಿತೆ ಪಾಲಿಸಲಿ – ಬಿಎಸ್‌ಪಿ

ಮುಕ್ತ, ನ್ಯಾಯಸಮ್ಮತ, ಸುಗಮ ಮತ್ತು ಶಾಂತಿಯುತ ಚುನಾವಣೆ ನಡೆಯಬೇಕು. ಬಿಜೆಪಿ ಹೊಸ ತಂತ್ರಗಳನ್ನು ಅನುಸರಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವುದನ್ನು ನಿಲ್ಲಿಸಬೇಕು. ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ವಿಶೇಷವಾಗಿ ಬಡವರು, ಕಾರ್ಮಿಕರು ಮತ್ತು ದುಡಿಯುವ ಜನರು ಚುನಾವಣೆಯೆಡೆಗೆ ಬಹಳ ಉತ್ಸುಕರಾಗಿದ್ದಾರೆ, ಅವರ ಭಾವನೆಗಳು ಮತ್ತು ಹಕ್ಕುಗಳನ್ನು ಎಲ್ಲ ರೀತಿಯಲ್ಲೂ ರಕ್ಷಿಸಬೇಕು. ಇಂದಿನಿಂದಲೇ ಅನ್ವಯವಾಗುವ ಪಕ್ಷದ ಶಿಸ್ತು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಬಿಎಸ್‌ಪಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಪಕ್ಷದ ಮುಖ್ಯಸ್ಥೆ ಮಯಾವತಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...