Homeಅಂಕಣಗಳುಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

ಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

- Advertisement -
- Advertisement -

ನಮ್ಮ ಪತ್ರಿಕೆ ನಿಮ್ಮ ಕೈ ಸೇರುವ ವೇಳೆಗೆ ಕರ್ನಾಟಕದ ಮೊದಲ ಸುತ್ತಿನ ಚುನಾವಣೆ ಮತ್ತು ದೇಶದ ಎರಡನೇ ಸುತ್ತಿನ ಚುನಾವಣೆ ಮುಗಿದಿರುತ್ತದೆ. ಹಾಗೆಯೇ ಮುಂದಿನ ಸುತ್ತಿನ ಚುನಾವಣೆಗೆ ದೇಶ ಎದುರು ನೋಡುತ್ತಿರುತ್ತದೆ. ಹೆಚ್ಚು ಜನ ಮತಗಟ್ಟೆಗೆ ಹೋಗಿ ಮತ ಚಲಾಯಿಸುವಂತೆ ಚುನಾವಣಾ ಆಯೋಗ ವಿವಿಧ ಜನ ಸಂಘಟನೆಗಳ ಸಹಯೋಗದಿಂದ ಜನರ ಮನಸ್ಸನ್ನು ಒಲಿಸುವ ಕೆಲಸವನ್ನು ಈ ಬಾರಿ ಹಿಂದೆಂದಿಗಿಂತಲೂ ಭರದಿಂದ ಕೈಗೆತ್ತಿಕೊಂಡಿದೆ. ಹೆಚ್ಚು ಜನ ಮತ ಚಲಾಯಿಸಿದಷ್ಟೂ ನಮ್ಮ ಪ್ರಜಾಪ್ರಭುತ್ವ ಹೆಚ್ಚು ಗಟ್ಟಿಯಾಗುತ್ತದೆ; ಅದು ಪ್ರಜಾತಂತ್ರಕ್ಕೆ ಸಂದ ವಿಜಯ ಎಂಬಂತೆ ಈ ಪ್ರಚಾರ ಸಾಗುತ್ತಿದೆ. ಯಾವುದೇ ಆಮಿಷ, ಬೆದರಿಕೆಗೆ ಒಳಗಾಗದೆ ಮತ ಚಲಾಯಿಸುವಂತೆ ಮಾಡಲು ಈ ಪ್ರಯತ್ನ ಸ್ವಾಗತಾರ್ಹವೇ. ಹಾಗೆಯೇ ‘ಒಳ್ಳೆಯ’ ಅಭ್ಯರ್ಥಿಯನ್ನು ಗೆಲ್ಲಿಸಿ ಎಂಬ ಘೋಷವಾಕ್ಯವೂ ಈ ಪ್ರÀಚಾರದಲ್ಲಿ ಸೇರಿದೆ. ಮತ ಚಲಾವಣೆ ಒಂದು ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ. ಒಂದು ಆಶಯವಾಗಿ ಇವೆಲ್ಲವೂ ಸರಿಯೇ ಆದರೂ ಇದು ಕೆಲವು ಮುಖ್ಯ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ.
ಒಂದು, ಇಡೀ ಪ್ರಜಾಪ್ರಭುತ್ವವನ್ನೇ ಚುನಾವಣಾ ಪ್ರಕ್ರಿಯೆಗೆ ಸಮೀಕರಿಸುವುದಕ್ಕೆ ಸಂಬಂಧಪಟ್ಟಿದ್ದು. ಇಂದು ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳಲು ಚುನಾವಣೆಗಳನ್ನು ಕಾಲಕ್ಕೆ ಸರಿಯಾಗಿ ನಡೆಸುವುದನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತಿದೆ. ಹೀಗಾಗಿ ಇಲ್ಲಿ ಪ್ರಜಾಪ್ರಭುತ್ವದ ಉಳಿವು-ಬೆಳವಣಿಗೆಗೆ ಚುನಾವಣೆಗಳನ್ನೇ ಕಾರಣವಾಗಿಸುವ ಒಂದು ಪ್ರಯತ್ನವಿದೆ. ಚುನಾವಣೆಗಳು ಪ್ರಜಾತಂತ್ರದ ಮುಖ್ಯ ಅಂಗ ನಿಜ. ಆದರೆ ಅದೇ ಅದರ ಜೀವಾಳವಲ್ಲ. ಯಾಕೆಂದರೆ ಇದೇ ಚುನಾವಣೆಯ ಪ್ರಕ್ರಿಯೆಯ ಮೂಲಕವೇ, ಅದನ್ನು ಬಳಸಿಕೊಂಡೇ, ಆಳುವ ರಾಜಕೀಯ ಪಕ್ಷಗಳು ಅಪ್ರಜಾತಾಂತ್ರಿಕವಾದ ಕಾನೂನುಗಳನ್ನು ಮತ್ತು ಅಚರಣೆಗಳನ್ನು ಜಾರಿ ಮಾಡಿರುವುದನ್ನು ನಾವು ಕಂಡಿದ್ದೇವೆ. ಈಗ ಭಾರತದಲ್ಲಿರುವ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ಮುಂದೆ ಇದು ಇನ್ನೂ ಹೆಚ್ಚಾಗುವ ಸಂಭವವೇ ಜಾಸ್ತಿ. ಹೀಗಾಗಿ ಹೆಚ್ಚು ಜನ ಮತ ಚಲಾಯಿಸುವುದನ್ನೇ ಪ್ರಜಾಪ್ರಭಯತ್ವದ ದಿಗ್ವಿಜಯ ಎಂದು ಹೇಳಲಾಗದು. ಚುನಾವಣೆಯನ್ನು ಅಧಿಕಾರಕ್ಕೆ ಬರುವ ಮಾರ್ಗ ಎಂದು ಮಾತ್ರ ಭಾವಿಸುವ ಆಳುವ ಪಕ್ಷಗಳೂ ಕೂಡ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಒಂದು short hand ಆಗಿ ಭಾವಿಸುತ್ತವೆ. ‘ಯಾರು ಬಂದರೂ ರಾಗಿ ಬೀಸುವುದು ತಪ್ಪದು’ ಎಂಬ ನಿತ್ಯ ಸತ್ಯದ ಗೊಣಗಾಟದಲ್ಲಿ ಮತದಾರರು ತಮ್ಮ ಯಾವತ್ತೂ ಜೀವನಕ್ಕೆ ಮರಳಿದರೆ, ಗೆದ್ದ ಹುರಿಯಾಳುಗಳು ಇನೈದು ವರ್ಷ ಯಾರ ಮುಂದೆಯೂ ಕೈ ಚಾಚ ಬೇಕಿಲ್ಲ ಎಂಬ ಹಮ್ಮಿನೊಂದಿಗೆ ಅಧಿಕಾರ ಹಿಡಿಯುತ್ತಾರೆ. ಮತ್ತೆ ಇನ್ನೊಂದು ಚುನಾವಣೆ ಬರುವವರೆಗೂ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತದೆ.
ಇನ್ನು ‘ಒಳ್ಳೆಯ ವ್ಯಕ್ತಿ’ಯನ್ನು ಗೆಲ್ಲಿಸುವ ವಿಚಾರ. ಚುನಾವಣಾ ಕಣದಲ್ಲಿ ‘ಒಳ್ಳೆಯ ವ್ಯಕ್ತಿ’ಗಳು ಕಾಣಿಸಿಕೊಳ್ಳುವುದೇ ಅಪರೂಪ. ಹೀಗಿರುವಾಗ ಕುರುಡರ ಪೈಕಿ ಮೇಲುಗಣ್ಣರನ್ನು ಆಯುವುದಷ್ಟೇ ಮತದಾರರ ಮುಂದಿರುವ ಆಯ್ಕೆ. ‘ಒಳ್ಳೆಯ ವ್ಯಕ್ತಿ’ ಯಾರು ಎಂದು ನಿರ್ಧರಿಸುವುದಕ್ಕೆ ಆಗದಹಾಗೆ ನಮ್ಮ ಚುನಾವಣಾ ಪ್ರಕ್ರಿಯೆ ಸಜ್ಜುಗೊಂಡಿದೆ. ಹಣವಿರದ ಆದರೆ ಜನಪರ ಕಾಳಜಿ ಇರುವ ಹಾಗೂ ಜನರೊಂದಿಗೆ ಹೋರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಗೆದ್ದು ಬರಲು ಸಾಧ್ಯವೇ ಇಲ್ಲದ ಹಾಗೆ ಚುನಾವಣಾ ಸ್ವರೂಪವನ್ನು ರಚಿಸಲಾಗಿದೆ. ಇಷ್ಟಾದರೂ ಕಷ್ಟಪಟ್ಟು ಪಕ್ಷೇತರರಾಗಿ ಚುನಾವಣೆಗೆ ನಿಂತ ಹ¯ವಾರು ಖ್ಯಾತನಾಮರು ಠೇವಣಿ ಕಳೆದುಕೊಂಡಿರುವುದೇ ಹೆಚ್ಚು. ಹಣ ಇರುವವರು ಮಾತ್ರ ಚುನಾವಣೆಗೆ ನಿಲ್ಲುವಂಥ ಪರಿಸ್ಥಿತಿಯನ್ನು ಸೃಷ್ಟಿಸಿರುವುದೇ ನಮ್ಮ ಪ್ರಜಾತಂತ್ರದ ದೋಷಗಳಲ್ಲಿ ಒಂದು. ಇಷ್ಟಾದರೂ, ಹಣ-ಜಾತಿ ಆಮಿಷಗಳ ನಡುವೆಯೂ, ಜನ ತೀರಾ ಸಿನಿಕರಾಗದೆ ಮತ ಚಲಾಯಿಸಿಕೊಂಡು ಬಂದಿದ್ದಾರೆ. ಆಳುವ ಪಕ್ಷಗಳನ್ನು ಬದಲಾಯಿಸಿದ್ದಾರೆ. ಒಟ್ಟಾರೆಯಾಗಿ ಚುನಾವಣೆಗಳು ಒಂದು ಸ್ಥೂಲ ಅರ್ಥದಲ್ಲಿ ಜನಾಭಿಪ್ರಾಯದ ಸೂಚನೆಯಾಗಿದೆ. ಆದರೆ ಇವೇ ಚುನಾವಣೆಗಳ ಮೂಲಕವೇ ಮೋದಿಯಂಥವರು ಗೆದ್ದು ಬರಲು ಸಾಧ್ಯವಾಗಿದೆ. ಗೆದ್ದವರು ಐದು ವರ್ಷಗಳ ಕಾಲ ಎಲ್ಲಾ ರಂಗಗಳಲ್ಲೂ ತೀವ್ರ ವೈಫಲ್ಯ ಕಂಡಾಗಲೂ, ವಿರೋಧಿ ಅಲೆ ಎಷ್ಟಿರಬೇಕಿತ್ತೋ ಅಷ್ಟಿಲ್ಲದೇ ಹೋಗಲು ಕಾರಣಗಳಿರಬಹುದು, ಆದರೆ ವಾಸ್ತವ.
ಚುನಾವಣೆಯಲ್ಲಿ ಮತ ಚಲಾಯಿಸುವುದು ಜನರ ಹಕ್ಕು ಮತ್ತು ಕರ್ತವ್ಯ ಸರಿ. ಆದರೆ ಮತ ಚಲಾವಣೆಯಲ್ಲಿ ಭಾಗವಹಿಸದವರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆಯೇ? ಅಥವಾ ತಾವು ಮತ ಹಾಕಿದ ಪಕ್ಷ/ವ್ಯಕ್ತಿ ಸೋತುಹೋದರೆ, ತಾವು ಮತಹಾಕದ ಸಂಸದ/ ಶಾಸಕರುಗಳಲ್ಲಿ ನಮ್ಮ ಬೇಡಿಕೆಗಳನ್ನು ಇಟ್ಟು ಹೋರಾಟ ಮಾಡಬಾರದೆ? ಪ್ರಜಾತಂತ್ರದಲ್ಲಿ ಎಷ್ಟೇ ಮತದ ಅಂತರದಿಂದ ಗೆದ್ದರೂ ಆ ಗೆದ್ದ ವ್ಯಕ್ತಿ/ಪಕ್ಷ ಎಲ್ಲರನ್ನೂ- ತಮ್ಮ ವಿರೋಧಿಗಳನ್ನೂ ಒಳಗೊಂಡಂತೆ – ಪ್ರತಿನಿಧಿಸುವುದು ಪ್ರಜಾತಂತ್ರದ ಅವಿಭಾಜ್ಯ ಅಂಗ. ನಮ್ಮ ಆಳುವ ಪಕ್ಷ/ವ್ಯಕ್ತಿಗಳಲ್ಲಿ ಈ ಭಾವನೆ ಮೂಡುವವರೆಗೂ ಪ್ರಜಾತಂತ್ರ ಗಟ್ಟಿಯಾಗುವುದಿಲ್ಲ.
ಹೀಗಾಗಿ ಚುನಾವಣೆಗಳು ಪ್ರತಿನಿಧಿಗಳನ್ನು ಆಯುವ ಪ್ರಕ್ರಿಯೆಯೇ ಹೊರತು ಪ್ರಾತಿನಿಧ್ಯವನ್ನೇ ಮೊಟಕುಗೊಳಿಸುವ ಸಾಧನ ಅಲ್ಲ; ಆಗಬಾರದು. ಈ ಪ್ರಾತಿನಿಧ್ಯದ ಹಕ್ಕನ್ನು ಎಲ್ಲ ಪ್ರಜೆಗಳು, ಮತ ಚಲಾಯಿಸದವರೂ ಸೇರಿದಂತೆ, ಹೊಂದಿರುತ್ತಾರೆ. ಆದರೆ ಈ ಪ್ರಾತಿನಿಧ್ಯ ಹಾಗೆಯೇ ಒದಗಿ ಬರುವುದಿಲ್ಲ. ಅದಕ್ಕೆ ಸದಾಕಾಲ ಎಚ್ಚರದಿಂದ ಇರುವ ಮತ್ತು ಇದು ನಮ್ಮದೇ ಪ್ರಭುತ್ವ ಎಂಬ ಜಾಗೃತಿ ಇರುವ ಪ್ರಜೆಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ. ಇದು ಚುನಾವಣೆಯ ನಂತರವೂ ಪ್ರಜಾತಂತ್ರವನ್ನ ಉಳಿಸಿಕೊಳ್ಳಲು ಅಗತ್ಯವಾದ ಪ್ರಕ್ರಿಯೆ. ಈ ಬಾರಿಯ ಚುನಾವಣೆಗಳ ನಂತರ ಪ್ರಜಾತಾಂತ್ರಿಕ ಹೋರಾಟದ ಅವಶ್ಯಕತೆ ಇನ್ನೂ ಹೆಚ್ಚಾಗಲಿದೆ. ಪ್ರಜಾಪ್ರಭುತ್ವವನ್ನು ಕಡೆÀಗೂ ಕಾಪಾಡುವುದು ಜನರೇ ಹೊರತು ಇಂಥ ಚುನಾವಣೆಗಳಲ್ಲ. ಇದಕ್ಕೆ ಸಜ್ಜಾಗುವುದೊಂದೇ ನಮ್ಮ ಮುಂದಿರುವ ನಿಜವಾದ ಆಯ್ಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...