Homeಅಂಕಣಗಳುಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

ಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

- Advertisement -
- Advertisement -

ನಮ್ಮ ಪತ್ರಿಕೆ ನಿಮ್ಮ ಕೈ ಸೇರುವ ವೇಳೆಗೆ ಕರ್ನಾಟಕದ ಮೊದಲ ಸುತ್ತಿನ ಚುನಾವಣೆ ಮತ್ತು ದೇಶದ ಎರಡನೇ ಸುತ್ತಿನ ಚುನಾವಣೆ ಮುಗಿದಿರುತ್ತದೆ. ಹಾಗೆಯೇ ಮುಂದಿನ ಸುತ್ತಿನ ಚುನಾವಣೆಗೆ ದೇಶ ಎದುರು ನೋಡುತ್ತಿರುತ್ತದೆ. ಹೆಚ್ಚು ಜನ ಮತಗಟ್ಟೆಗೆ ಹೋಗಿ ಮತ ಚಲಾಯಿಸುವಂತೆ ಚುನಾವಣಾ ಆಯೋಗ ವಿವಿಧ ಜನ ಸಂಘಟನೆಗಳ ಸಹಯೋಗದಿಂದ ಜನರ ಮನಸ್ಸನ್ನು ಒಲಿಸುವ ಕೆಲಸವನ್ನು ಈ ಬಾರಿ ಹಿಂದೆಂದಿಗಿಂತಲೂ ಭರದಿಂದ ಕೈಗೆತ್ತಿಕೊಂಡಿದೆ. ಹೆಚ್ಚು ಜನ ಮತ ಚಲಾಯಿಸಿದಷ್ಟೂ ನಮ್ಮ ಪ್ರಜಾಪ್ರಭುತ್ವ ಹೆಚ್ಚು ಗಟ್ಟಿಯಾಗುತ್ತದೆ; ಅದು ಪ್ರಜಾತಂತ್ರಕ್ಕೆ ಸಂದ ವಿಜಯ ಎಂಬಂತೆ ಈ ಪ್ರಚಾರ ಸಾಗುತ್ತಿದೆ. ಯಾವುದೇ ಆಮಿಷ, ಬೆದರಿಕೆಗೆ ಒಳಗಾಗದೆ ಮತ ಚಲಾಯಿಸುವಂತೆ ಮಾಡಲು ಈ ಪ್ರಯತ್ನ ಸ್ವಾಗತಾರ್ಹವೇ. ಹಾಗೆಯೇ ‘ಒಳ್ಳೆಯ’ ಅಭ್ಯರ್ಥಿಯನ್ನು ಗೆಲ್ಲಿಸಿ ಎಂಬ ಘೋಷವಾಕ್ಯವೂ ಈ ಪ್ರÀಚಾರದಲ್ಲಿ ಸೇರಿದೆ. ಮತ ಚಲಾವಣೆ ಒಂದು ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ. ಒಂದು ಆಶಯವಾಗಿ ಇವೆಲ್ಲವೂ ಸರಿಯೇ ಆದರೂ ಇದು ಕೆಲವು ಮುಖ್ಯ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ.
ಒಂದು, ಇಡೀ ಪ್ರಜಾಪ್ರಭುತ್ವವನ್ನೇ ಚುನಾವಣಾ ಪ್ರಕ್ರಿಯೆಗೆ ಸಮೀಕರಿಸುವುದಕ್ಕೆ ಸಂಬಂಧಪಟ್ಟಿದ್ದು. ಇಂದು ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳಲು ಚುನಾವಣೆಗಳನ್ನು ಕಾಲಕ್ಕೆ ಸರಿಯಾಗಿ ನಡೆಸುವುದನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತಿದೆ. ಹೀಗಾಗಿ ಇಲ್ಲಿ ಪ್ರಜಾಪ್ರಭುತ್ವದ ಉಳಿವು-ಬೆಳವಣಿಗೆಗೆ ಚುನಾವಣೆಗಳನ್ನೇ ಕಾರಣವಾಗಿಸುವ ಒಂದು ಪ್ರಯತ್ನವಿದೆ. ಚುನಾವಣೆಗಳು ಪ್ರಜಾತಂತ್ರದ ಮುಖ್ಯ ಅಂಗ ನಿಜ. ಆದರೆ ಅದೇ ಅದರ ಜೀವಾಳವಲ್ಲ. ಯಾಕೆಂದರೆ ಇದೇ ಚುನಾವಣೆಯ ಪ್ರಕ್ರಿಯೆಯ ಮೂಲಕವೇ, ಅದನ್ನು ಬಳಸಿಕೊಂಡೇ, ಆಳುವ ರಾಜಕೀಯ ಪಕ್ಷಗಳು ಅಪ್ರಜಾತಾಂತ್ರಿಕವಾದ ಕಾನೂನುಗಳನ್ನು ಮತ್ತು ಅಚರಣೆಗಳನ್ನು ಜಾರಿ ಮಾಡಿರುವುದನ್ನು ನಾವು ಕಂಡಿದ್ದೇವೆ. ಈಗ ಭಾರತದಲ್ಲಿರುವ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ಮುಂದೆ ಇದು ಇನ್ನೂ ಹೆಚ್ಚಾಗುವ ಸಂಭವವೇ ಜಾಸ್ತಿ. ಹೀಗಾಗಿ ಹೆಚ್ಚು ಜನ ಮತ ಚಲಾಯಿಸುವುದನ್ನೇ ಪ್ರಜಾಪ್ರಭಯತ್ವದ ದಿಗ್ವಿಜಯ ಎಂದು ಹೇಳಲಾಗದು. ಚುನಾವಣೆಯನ್ನು ಅಧಿಕಾರಕ್ಕೆ ಬರುವ ಮಾರ್ಗ ಎಂದು ಮಾತ್ರ ಭಾವಿಸುವ ಆಳುವ ಪಕ್ಷಗಳೂ ಕೂಡ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಒಂದು short hand ಆಗಿ ಭಾವಿಸುತ್ತವೆ. ‘ಯಾರು ಬಂದರೂ ರಾಗಿ ಬೀಸುವುದು ತಪ್ಪದು’ ಎಂಬ ನಿತ್ಯ ಸತ್ಯದ ಗೊಣಗಾಟದಲ್ಲಿ ಮತದಾರರು ತಮ್ಮ ಯಾವತ್ತೂ ಜೀವನಕ್ಕೆ ಮರಳಿದರೆ, ಗೆದ್ದ ಹುರಿಯಾಳುಗಳು ಇನೈದು ವರ್ಷ ಯಾರ ಮುಂದೆಯೂ ಕೈ ಚಾಚ ಬೇಕಿಲ್ಲ ಎಂಬ ಹಮ್ಮಿನೊಂದಿಗೆ ಅಧಿಕಾರ ಹಿಡಿಯುತ್ತಾರೆ. ಮತ್ತೆ ಇನ್ನೊಂದು ಚುನಾವಣೆ ಬರುವವರೆಗೂ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತದೆ.
ಇನ್ನು ‘ಒಳ್ಳೆಯ ವ್ಯಕ್ತಿ’ಯನ್ನು ಗೆಲ್ಲಿಸುವ ವಿಚಾರ. ಚುನಾವಣಾ ಕಣದಲ್ಲಿ ‘ಒಳ್ಳೆಯ ವ್ಯಕ್ತಿ’ಗಳು ಕಾಣಿಸಿಕೊಳ್ಳುವುದೇ ಅಪರೂಪ. ಹೀಗಿರುವಾಗ ಕುರುಡರ ಪೈಕಿ ಮೇಲುಗಣ್ಣರನ್ನು ಆಯುವುದಷ್ಟೇ ಮತದಾರರ ಮುಂದಿರುವ ಆಯ್ಕೆ. ‘ಒಳ್ಳೆಯ ವ್ಯಕ್ತಿ’ ಯಾರು ಎಂದು ನಿರ್ಧರಿಸುವುದಕ್ಕೆ ಆಗದಹಾಗೆ ನಮ್ಮ ಚುನಾವಣಾ ಪ್ರಕ್ರಿಯೆ ಸಜ್ಜುಗೊಂಡಿದೆ. ಹಣವಿರದ ಆದರೆ ಜನಪರ ಕಾಳಜಿ ಇರುವ ಹಾಗೂ ಜನರೊಂದಿಗೆ ಹೋರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಗೆದ್ದು ಬರಲು ಸಾಧ್ಯವೇ ಇಲ್ಲದ ಹಾಗೆ ಚುನಾವಣಾ ಸ್ವರೂಪವನ್ನು ರಚಿಸಲಾಗಿದೆ. ಇಷ್ಟಾದರೂ ಕಷ್ಟಪಟ್ಟು ಪಕ್ಷೇತರರಾಗಿ ಚುನಾವಣೆಗೆ ನಿಂತ ಹ¯ವಾರು ಖ್ಯಾತನಾಮರು ಠೇವಣಿ ಕಳೆದುಕೊಂಡಿರುವುದೇ ಹೆಚ್ಚು. ಹಣ ಇರುವವರು ಮಾತ್ರ ಚುನಾವಣೆಗೆ ನಿಲ್ಲುವಂಥ ಪರಿಸ್ಥಿತಿಯನ್ನು ಸೃಷ್ಟಿಸಿರುವುದೇ ನಮ್ಮ ಪ್ರಜಾತಂತ್ರದ ದೋಷಗಳಲ್ಲಿ ಒಂದು. ಇಷ್ಟಾದರೂ, ಹಣ-ಜಾತಿ ಆಮಿಷಗಳ ನಡುವೆಯೂ, ಜನ ತೀರಾ ಸಿನಿಕರಾಗದೆ ಮತ ಚಲಾಯಿಸಿಕೊಂಡು ಬಂದಿದ್ದಾರೆ. ಆಳುವ ಪಕ್ಷಗಳನ್ನು ಬದಲಾಯಿಸಿದ್ದಾರೆ. ಒಟ್ಟಾರೆಯಾಗಿ ಚುನಾವಣೆಗಳು ಒಂದು ಸ್ಥೂಲ ಅರ್ಥದಲ್ಲಿ ಜನಾಭಿಪ್ರಾಯದ ಸೂಚನೆಯಾಗಿದೆ. ಆದರೆ ಇವೇ ಚುನಾವಣೆಗಳ ಮೂಲಕವೇ ಮೋದಿಯಂಥವರು ಗೆದ್ದು ಬರಲು ಸಾಧ್ಯವಾಗಿದೆ. ಗೆದ್ದವರು ಐದು ವರ್ಷಗಳ ಕಾಲ ಎಲ್ಲಾ ರಂಗಗಳಲ್ಲೂ ತೀವ್ರ ವೈಫಲ್ಯ ಕಂಡಾಗಲೂ, ವಿರೋಧಿ ಅಲೆ ಎಷ್ಟಿರಬೇಕಿತ್ತೋ ಅಷ್ಟಿಲ್ಲದೇ ಹೋಗಲು ಕಾರಣಗಳಿರಬಹುದು, ಆದರೆ ವಾಸ್ತವ.
ಚುನಾವಣೆಯಲ್ಲಿ ಮತ ಚಲಾಯಿಸುವುದು ಜನರ ಹಕ್ಕು ಮತ್ತು ಕರ್ತವ್ಯ ಸರಿ. ಆದರೆ ಮತ ಚಲಾವಣೆಯಲ್ಲಿ ಭಾಗವಹಿಸದವರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆಯೇ? ಅಥವಾ ತಾವು ಮತ ಹಾಕಿದ ಪಕ್ಷ/ವ್ಯಕ್ತಿ ಸೋತುಹೋದರೆ, ತಾವು ಮತಹಾಕದ ಸಂಸದ/ ಶಾಸಕರುಗಳಲ್ಲಿ ನಮ್ಮ ಬೇಡಿಕೆಗಳನ್ನು ಇಟ್ಟು ಹೋರಾಟ ಮಾಡಬಾರದೆ? ಪ್ರಜಾತಂತ್ರದಲ್ಲಿ ಎಷ್ಟೇ ಮತದ ಅಂತರದಿಂದ ಗೆದ್ದರೂ ಆ ಗೆದ್ದ ವ್ಯಕ್ತಿ/ಪಕ್ಷ ಎಲ್ಲರನ್ನೂ- ತಮ್ಮ ವಿರೋಧಿಗಳನ್ನೂ ಒಳಗೊಂಡಂತೆ – ಪ್ರತಿನಿಧಿಸುವುದು ಪ್ರಜಾತಂತ್ರದ ಅವಿಭಾಜ್ಯ ಅಂಗ. ನಮ್ಮ ಆಳುವ ಪಕ್ಷ/ವ್ಯಕ್ತಿಗಳಲ್ಲಿ ಈ ಭಾವನೆ ಮೂಡುವವರೆಗೂ ಪ್ರಜಾತಂತ್ರ ಗಟ್ಟಿಯಾಗುವುದಿಲ್ಲ.
ಹೀಗಾಗಿ ಚುನಾವಣೆಗಳು ಪ್ರತಿನಿಧಿಗಳನ್ನು ಆಯುವ ಪ್ರಕ್ರಿಯೆಯೇ ಹೊರತು ಪ್ರಾತಿನಿಧ್ಯವನ್ನೇ ಮೊಟಕುಗೊಳಿಸುವ ಸಾಧನ ಅಲ್ಲ; ಆಗಬಾರದು. ಈ ಪ್ರಾತಿನಿಧ್ಯದ ಹಕ್ಕನ್ನು ಎಲ್ಲ ಪ್ರಜೆಗಳು, ಮತ ಚಲಾಯಿಸದವರೂ ಸೇರಿದಂತೆ, ಹೊಂದಿರುತ್ತಾರೆ. ಆದರೆ ಈ ಪ್ರಾತಿನಿಧ್ಯ ಹಾಗೆಯೇ ಒದಗಿ ಬರುವುದಿಲ್ಲ. ಅದಕ್ಕೆ ಸದಾಕಾಲ ಎಚ್ಚರದಿಂದ ಇರುವ ಮತ್ತು ಇದು ನಮ್ಮದೇ ಪ್ರಭುತ್ವ ಎಂಬ ಜಾಗೃತಿ ಇರುವ ಪ್ರಜೆಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ. ಇದು ಚುನಾವಣೆಯ ನಂತರವೂ ಪ್ರಜಾತಂತ್ರವನ್ನ ಉಳಿಸಿಕೊಳ್ಳಲು ಅಗತ್ಯವಾದ ಪ್ರಕ್ರಿಯೆ. ಈ ಬಾರಿಯ ಚುನಾವಣೆಗಳ ನಂತರ ಪ್ರಜಾತಾಂತ್ರಿಕ ಹೋರಾಟದ ಅವಶ್ಯಕತೆ ಇನ್ನೂ ಹೆಚ್ಚಾಗಲಿದೆ. ಪ್ರಜಾಪ್ರಭುತ್ವವನ್ನು ಕಡೆÀಗೂ ಕಾಪಾಡುವುದು ಜನರೇ ಹೊರತು ಇಂಥ ಚುನಾವಣೆಗಳಲ್ಲ. ಇದಕ್ಕೆ ಸಜ್ಜಾಗುವುದೊಂದೇ ನಮ್ಮ ಮುಂದಿರುವ ನಿಜವಾದ ಆಯ್ಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...