Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...