Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...