Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...