Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...