Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....