Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...