Homeಮುಖಪುಟಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

- Advertisement -
- Advertisement -

ಕೇಂದ್ರ ಸರ್ಕಾರ ಶುಕ್ರವಾರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯಿಂದಾಗಿ ಇನ್ನು ಮುಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಸರ್ಕಾರ ಈ ಬದಲಾವಣೆ ಮಾಡಿದೆ. ಚುನಾವಣಾ ದಾಖಲೆಗಳನ್ನು

1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತದೆ” ಎಂದು ಇತ್ತು. ಇದೀಗ ಕೇಂದ್ರ ಸರ್ಕಾರ ಇದನ್ನು ಬದಲಾಯಿಸಿ, “ಚುನಾವಣೆಗೆ ಸಂಬಂಧಿಸಿದ ಈ ‘ನಿಯಮಾವಳಿಗಳಲ್ಲಿ ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ನಿಯಮ ತಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಈ ಬದಲಾವಣೆಗೆ ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಇನ್ನು ಮುಂದೆ ಸಾಧ್ಯವಾಗುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದು.

ಹಾಗಾಗಿ, ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಒದಗಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ. ಚುನಾವಣಾ ದಾಖಲೆಗಳನ್ನು

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೋಗ್ರಫಿ, ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲ ಮೆಹಮೂದ್ ಪ್ರಾಚಾಗೆ ಒದಗಿಸುವಂತೆ ಸೂಚಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸಿದೆ.

ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಪ್ರಾಚಾ ಅವರು, “ಪ್ರಜಾಪ್ರಭುತ್ವ ಮತ್ತು ಬಾಬಾಸಾಹೇಬರ ಸಂವಿಧಾನವನ್ನು ಉಳಿಸಲು ನಾವು ಪ್ರತಿಕೂಲ ಸ್ಥಿತಿಯಲ್ಲಿ ಹೋರಾಡಬೇಕಿದೆ. ಮನುವಾದಿ ಶಕ್ತಿಗಳು ಇತಿಹಾಸದುದ್ದಕ್ಕೂ ಅಂಬೇಡ್ಕರ್‌ವಾದಿಗಳನ್ನು ಹತ್ತಿಕ್ಕಲು ಅನೈತಿಕ ಮತ್ತು ಅನ್ಯಾಯದ ವಿಧಾನಗಳನ್ನು ಬಳಸುತ್ತಿದ್ದಾರೆ. ಆದರೆ ಈ ಪ್ರಜಾಪ್ರಭುತ್ವ ವಿರೋಧಿ ಮತ್ತು ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸಲು ನಾವು ಕಾನೂನು ಮಾರ್ಗಗಳು ಸೇರಿದಂತೆ ನಮ್ಮದೇ ಆದ ವಿಧಾನಗಳಿವೆ’’ ಎಂದು ಸ್ಕ್ರಾಲ್‌.ಇನ್‌ಗೆ ಹೇಳಿದ್ದಾರೆ.

ಚುನಾವಣಾ ಆಯೋಗವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಚಾ ಅವರ ಮನವಿಯನ್ನು ವಿರೋಧಿಸಿತ್ತು. ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಚಾ ಅವರು ಅಭ್ಯರ್ಥಿಯಾಗಿರಲಿಲ್ಲ, ಆದ್ದರಿಂದ ಅವರು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಅದು ವಾದಿಸಿತ್ತು. ಆದರೆ, ವಕೀಲ ಪ್ರಾಚಾ ಅವರ ವಾದವನ್ನು ಪುರಸ್ಕರಿಸಿದ್ದ ಹೈಕೋರ್ಟ್, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗೆ ಉಚಿತವಾಗಿ ಮತ್ತು ಇತರ ವ್ಯಕ್ತಿಗಳಿಗೆ ನಿಗದಿತ ಶುಲ್ಕ ಪಾವತಿಸಿ ದಾಖಲೆಗಳನ್ನು ನೀಡಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...