Homeಮುಖಪುಟಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

- Advertisement -
- Advertisement -

ಕೇಂದ್ರ ಸರ್ಕಾರ ಶುಕ್ರವಾರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯಿಂದಾಗಿ ಇನ್ನು ಮುಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಸರ್ಕಾರ ಈ ಬದಲಾವಣೆ ಮಾಡಿದೆ. ಚುನಾವಣಾ ದಾಖಲೆಗಳನ್ನು

1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತದೆ” ಎಂದು ಇತ್ತು. ಇದೀಗ ಕೇಂದ್ರ ಸರ್ಕಾರ ಇದನ್ನು ಬದಲಾಯಿಸಿ, “ಚುನಾವಣೆಗೆ ಸಂಬಂಧಿಸಿದ ಈ ‘ನಿಯಮಾವಳಿಗಳಲ್ಲಿ ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ನಿಯಮ ತಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಈ ಬದಲಾವಣೆಗೆ ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಇನ್ನು ಮುಂದೆ ಸಾಧ್ಯವಾಗುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದು.

ಹಾಗಾಗಿ, ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಒದಗಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ. ಚುನಾವಣಾ ದಾಖಲೆಗಳನ್ನು

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೋಗ್ರಫಿ, ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲ ಮೆಹಮೂದ್ ಪ್ರಾಚಾಗೆ ಒದಗಿಸುವಂತೆ ಸೂಚಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸಿದೆ.

ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಪ್ರಾಚಾ ಅವರು, “ಪ್ರಜಾಪ್ರಭುತ್ವ ಮತ್ತು ಬಾಬಾಸಾಹೇಬರ ಸಂವಿಧಾನವನ್ನು ಉಳಿಸಲು ನಾವು ಪ್ರತಿಕೂಲ ಸ್ಥಿತಿಯಲ್ಲಿ ಹೋರಾಡಬೇಕಿದೆ. ಮನುವಾದಿ ಶಕ್ತಿಗಳು ಇತಿಹಾಸದುದ್ದಕ್ಕೂ ಅಂಬೇಡ್ಕರ್‌ವಾದಿಗಳನ್ನು ಹತ್ತಿಕ್ಕಲು ಅನೈತಿಕ ಮತ್ತು ಅನ್ಯಾಯದ ವಿಧಾನಗಳನ್ನು ಬಳಸುತ್ತಿದ್ದಾರೆ. ಆದರೆ ಈ ಪ್ರಜಾಪ್ರಭುತ್ವ ವಿರೋಧಿ ಮತ್ತು ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸಲು ನಾವು ಕಾನೂನು ಮಾರ್ಗಗಳು ಸೇರಿದಂತೆ ನಮ್ಮದೇ ಆದ ವಿಧಾನಗಳಿವೆ’’ ಎಂದು ಸ್ಕ್ರಾಲ್‌.ಇನ್‌ಗೆ ಹೇಳಿದ್ದಾರೆ.

ಚುನಾವಣಾ ಆಯೋಗವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಚಾ ಅವರ ಮನವಿಯನ್ನು ವಿರೋಧಿಸಿತ್ತು. ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಚಾ ಅವರು ಅಭ್ಯರ್ಥಿಯಾಗಿರಲಿಲ್ಲ, ಆದ್ದರಿಂದ ಅವರು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಅದು ವಾದಿಸಿತ್ತು. ಆದರೆ, ವಕೀಲ ಪ್ರಾಚಾ ಅವರ ವಾದವನ್ನು ಪುರಸ್ಕರಿಸಿದ್ದ ಹೈಕೋರ್ಟ್, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗೆ ಉಚಿತವಾಗಿ ಮತ್ತು ಇತರ ವ್ಯಕ್ತಿಗಳಿಗೆ ನಿಗದಿತ ಶುಲ್ಕ ಪಾವತಿಸಿ ದಾಖಲೆಗಳನ್ನು ನೀಡಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...