Homeಕರ್ನಾಟಕಎಲ್ಲಿಂದಲೋ ಬಂದವರು ಈ ಪ್ರೇತಮತಗಳು

ಎಲ್ಲಿಂದಲೋ ಬಂದವರು ಈ ಪ್ರೇತಮತಗಳು

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಟ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

|ಜಿ.ಆರ್. ವಿದ್ಯಾರಣ್ಯ |

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದು ಗೆದ್ದವರು ಸಂಭ್ರಮಿಸಿದ್ದು ಮತ್ತು ಸೋತವರು ಅತ್ತಿದ್ದು ಮುಗಿದಿದೆ.ಎಲ್ಲರೂ ತಮ್ಮ ತಮ್ಮ ಬುದ್ಧಿಶಕ್ತಿಗನುಸಾರವಾಗಿ ಸೋಲಿನ ವಿಶ್ಲೇಷಣೆ ಮಾಡುತ್ತಿದ್ದಾರೆ. ನನಗೆ ಬುದ್ಧಿ ಸ್ವಲ್ಪ ಕಡಿಮೆ ಇರುವುದರಿಂದ ಸರಕಾರಿ ಅಂಕಿ-ಅಂಶಗಳತ್ತ ನನ್ನ ದೃಷ್ಟಿ ಹಾಯಿಸಿದೆ. ಅದರಲ್ಲಿ ಕಂಡಂತೆ, ನನಗೆ ತಿಳಿದುಬಂದ ಮಾಹಿತಿ ಏನೆಂದರೆ.

ಚುನಾವಣೆ ದಿನ 18.4.2019 ರಂದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಇದ್ದ ಒಟ್ಟು ಮತದಾರರ ಸಂಖ್ಯೆ ಪುರುಷರು: 9,44,580, ಮಹಿಳೆಯರು: 9,49,649 ತೃತೀಯ ಲಿಂಗಿಯರು: 150 ಹಾಗೂ ಒಟ್ಟು ಮತದಾರರು: 18,94,379. ಇವರ ಪೈಕಿ ಮತ ಚಲಾಯಿಸಿದ ಪುರುಷರು: 6,61,278 ಮಹಿಳೆಯರು: 6,43,014 ಇತರರು: 0 ಹಾಗೂ ಒಟ್ಟು ಮತ ಹಾಕಿದವರು:13,04,297. ಅಂದರೆ ಮತದಾನ ನಡೆದದ್ದು 68.85%.

ಮತ ಎಣಿಕೆಯ ದಿನ 23.05.2019ರಂದು ಎಣಿಕೆಯಾದ ಮತಗಳು: 13,12,478. ಅಂಚೆ ಮತಗಳು: 5,625 ಮತ್ತು ಅಸ್ವೀಕೃತವಾದ ಮತಗಳು 62. ಓಟ್ಟು ಎಣಿಕೆಯಾದ ಮತಗಳು 13,18,103. ಇದಲ್ಲದೆ 7 ಮತಗಳು ಟೆಂಡರ್ಡ್ ಮತಗಳಾಗಿದ್ದು ಇವು ಎಣಿಕೆಯ ವ್ಯಾಪ್ತಿಗೆ ಬಂದಿಲ್ಲ.

13,04,297 ಜನರು ಮತಹಾಕಿದ್ದು ಮತ್ತು 5,625 ಅಂಚೆ ಮತಗಳನ್ನು ಸೇರಿಸಿದರೆ ಆಗುವುದು ಕೇವಲ 13,09,822. ಅಂದರೆ ಈ ಅಧಿಕ 8,200ಕ್ಕೂ ಹೆಚ್ಚು ಪ್ರೇತ ಮತಗಳು ಎಲ್ಲಿಂದ ಬಂದವು ಎಂಬುದು ನನಗೆ ಯಕ್ಷಪ್ರಶ್ನೆಯಾಗಿದೆ. ಈ ರೀತಿಯ ಅವಾಂತರ ಪ್ರತಿಯೊಂದು ಕ್ಷೇತ್ರದಲ್ಲೂ ನಡೆದಿದ್ದು, ಹಲವಾರು ಕಡೆ ಈ ಮತಗಳ ನಡುವಿನ ಅಂತರ ಸೋಲು-ಗೆಲುವಿನ ಅಂತರಕ್ಕಿಂತಲೂ ಹೆಚ್ಚಾಗಿದೆ ಎಂಬ ಕೂಗು ಕೇಳಿ ಬರುತ್ತಿದೆ.

ವೋಟ್ ಆಗಿದ್ದಕ್ಕಿಂತ ಕೌಂಟ್ ಆದ ಮತಗಳೇ ಹೆಚ್ಚು!

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗದು. ಸರಿ ಒಪ್ಪೋಣ. ಆದರೆ ನಿರ್ದಿಷ್ಟ ಪಕ್ಷವೊಂದಕ್ಕೆ ಮೊದಲೇ ಮತ ಚಲಾಯಿಸಿದ ಮತಯಂತ್ರಗಳನ್ನು ತಂದು ತುರುಕಲು ಸಾಧ್ಯವೇ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ. ಈಗ ನ್ಯೂಸ್‍ಕ್ಲಿಕ್ ಪೋರ್ಟಲ್ ಮಾಡಿರುವ ತನಿಖೆ ಈ ಪ್ರಶ್ನೆಗಳನ್ನು ಎತ್ತಿದೆ ಮತ್ತು ಈ ಕುರಿತು ಧ್ವನಿ ಎತ್ತಿರುವ ಮೂವರು ಮಾಜಿ ಚುನಾವಣಾ ಆಯುಕ್ತರು ಆಯೋಗ ಈ ಕುರಿತು ಗೊಂದಲಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೌಂಟಿಂಗ್‍ನಲ್ಲಿ ಹೆಚ್ಚಾಗಿದ್ದು ಹೇಗೆ?

ಈ ಪ್ರಶ್ನೆಯನ್ನು ಪ್ರಜಾಪ್ರಭುತ್ವ ಗೌರವಿಸುವ ಎಲ್ಲರೂ ಕೇಳಲೇಬೇಕಾಗಿದೆ. ಉತ್ತರಪ್ರದೇಶ, ಬಿಹಾರ್, ದೆಹಲಿ ಮತ್ತು ಮಧ್ಯಪ್ರದೇಶದ ಹಲವಾರು ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಕಂಡು ಬಂದಿದೆ. ಅವುಗಳಲ್ಲಿ ಎಂಟು ಕ್ಷೇತ್ರಗಳ ತನಿಖೆ ಮಾಡಿದಾಗ ಇದು ಸತ್ಯ ಎಂಬುದು ಸಾಬೀತಾಗಿದೆ. ಅದರಲ್ಲಿ ಪ್ರತಿಷ್ಠಿತ ಎನಿಸಿದ್ದ ಪಾಟ್ನಾ ಸಾಹೀಬ್, ಜೆಹಲ್ನಾಬಾದ್ ಮತ್ತು ಬೇಗುಸರಾಯ್ ಕ್ಷೇತ್ರಗಳೂ ಸೇರಿವೆ. ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತಗಳು ಹೆಚ್ಚಿವೆ, ಒಂದು ಕಡೆ ವೋಟ್ ಆದ ಮತಗಳಿಗಿಂತ ಕೌಂಟ್ ಆದ ಮತ ಕಡಿಮೆಯೂ ಇದೆ. ಈ ವ್ಯತ್ಯಾಸವೇ ಗೋಲ್‍ಮಾಲ್ ನಡೆದಿರಬಹುದು ಎಂಬ ದಟ್ಟ ಸಂಶಯಕ್ಕೆ ಕಾರಣವಾಗಿದೆ.

ಈ ಎಂಟು ಕ್ಷೇತ್ರಗಳ ಪೈಕಿ ಕನಿಷ್ಠ ಒಂದರಲ್ಲಿ, ಗೆಲುವಿನ ಅಂತರಕ್ಕಿಂತ ಮತ ವ್ಯತ್ಯಾಸ (ಕೌಂಟ್ ಆದ ಮತಗಳು ಮೈನಸ್ ವೋಟ್ ಆದ ಮತಗಳು)ವೇ ದೊಡ್ಡದಿದ್ದು ಬಹುಪಾಲು ಕ್ಷೇತ್ರಗಳಲ್ಲಿ ಇದು ಸಂಭವಿಸಿರಬಹುದು ಎಂದು ತನಿಖೆ ಉಲ್ಲೇಖಿಸಿದೆ. ಮೇ 23ರ ಏಣಿಕೆಗೂ ಮೊದಲು ಅಕ್ರಮವಾಗಿ ಎವಿಎಂಗಳನ್ನು ಸಾಗಿಸಿದ ವರದಿ ಮತ್ತು ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಇಲ್ಲೇನೋ ಮಸಲತ್ತು ನಡೆದಿದೆ ಎಂಬ ಸಂಶಯವನ್ನು ಈ ತನಿಖೆ ಇನ್ನಷ್ಟು ಗಟ್ಟಿಗೊಳಿಸಿದೆ.

ಮಾಜಿ ಆಯುಕ್ತರ ಆಗ್ರಹ

ಮೂವರು ಮಾಜಿ ಆಯುಕ್ತರು ಇದರ ವಿರುದ್ಧ ಧ್ವನಿ ಎತ್ತಿ ಆಯೋಗ ಕೂಡಲೇ ಈ ಸಂಶಯಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 2011-12ರಲ್ಲಿ ಆಯುಕ್ತರಾಗಿದ್ದ ಖುರೇಶಿ, ಇದಕ್ಕೆ ಆಯೋಗದ ಬಳಿ ಕಾರಣಗಳಿರಬಹುದು. ಆದರೆ ಈ ವಿಷಯವಾಗಿ ಯಾರಾದರೂ ಕೋರ್ಟಿಗೆ ಹೋಗೋದು ಒಳ್ಳೆಯದು ಎಂದು ಹೇಳಿದ್ದಾರೆ.

2006-09ರಲ್ಲಿ ಆಯುಕ್ತರಾಗಿದ್ದ ಗೋಪಾಲಸ್ವಾಮಿ, 2015ರಲ್ಲಿ ಆಯುಕ್ತರಾಗಿದ್ದ ಎಚ್.ಎಸ್ ಬ್ರಹ್ಮ ಕೂಡ ಇದೇ ತರಹದ ಪ್ರಶ್ನೆ ಎತ್ತುವ ಮೂಲಕ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಚ್ಚಿ ಬೀಳಿಸುವ ವ್ಯತ್ಯಾಸಗಳು!

ಪಾಟ್ನಾ ಸಾಹೀಬ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿಶಂಕರ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಶತ್ರುಘ್ನ ಸಿನ್ಹಾ ಸ್ಪರ್ಧಿಸಿದ್ದರು. ಅಲ್ಲಿ 20, 51, 905 ಅರ್ಹ ಮತದಾರರಿದ್ದು, ಮೇ 18ರಂದು ಶೇ 46.34ರಷ್ಟು ಮತದಾನವಾಗಿತ್ತು.

ಆದರೆ ಮೇ 23ರಂದು ಏಣಿಕೆ ಮಾಡಿದಾಗ ಅಂಚೆಮತ ಸೇರಿ ರವಿಶಂಕರ ಪ್ರಸಾದ್‍ಗೆ 6,07,506, ಶತ್ರುಘ್ನ ಸಿನ್ಹಾಗೆ 3,22, 849 ಮತ್ತು ನೋಟಾ ಸೇರಿ ಇತರೆ 45,709 ಮತ ಲಭಿಸಿವೆ.

ಅಂದರೆ ಆಯೋಗದ ಪ್ರಕಾರ 9,82,285 ಮತಗಳು ದಾಖಲಾಗಿವೆ. ಶೇಕಡಾವಾರು ಮತದಾನದ ಪ್ರಕಾರ, 9,50,852 ಮತಗಳು ಹಾಕಲ್ಪಟ್ಟಿವೆ. ಈ ಹೆಚ್ಚುವರಿ 31,433 ಮತಗಳು ಎಲ್ಲಿಂದ ಬಂದವು?
ಕನ್ನಯ್ಯಕುಮಾರ್ ಸ್ಪರ್ಧಿಸಿದ್ದ ಬೇಗುಸ್‍ರಾಯ್, ಆಪ್‍ನ ಅತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರಗಳಲ್ಲೂ ಈ ಮತ ವ್ಯತ್ಯಾಸ ಕಂಡುಬರುತ್ತಿದೆ.

ಇದು ಕೇವಲ ಅಂಕಗಣಿತದ ತಪ್ಪಾಗಿರಲಾರದು. ಏಕೆಂದರೆ ದೇಶದ ನಾನಾ ಕಡೆಯಿಂದ ಈ ಸಂಶಯಗಳು ಕೇಳಿ ಬಂದಿವೆ. ರಾಜ್ಯದ ಪ್ರತಿಷ್ಠಿತ ಕಲಬುರ್ಗಿ ಕ್ಷೇತ್ರದಲ್ಲೂ ಅಪರಾ ತಪರಾ ಕಂಡುಬಂದಿದೆ.

ವಿರೋಧ ಪಕ್ಷಗಳು ಮತಯಂತ್ರಗಳ ಬಗ್ಗೆ ತಮ್ಮ ಅಪನಂಬಿಕೆ ಮೊದಲಿನಿಂದಲೂ ವ್ಯಕ್ತ ಪಡಿಸುತ್ತಲೇ ಇದ್ದಾರೆ. ಅದನ್ನು ಚುನಾವಣಾ ಆಯೋಗವಾಗಲೀ ಸರ್ವೊಚ್ಚ ನ್ಯಾಯಾಲಯವಾಗಲಿ ಗಂಭೀರವಾಗಿ ಪರಿಗಣಿಸಿಲ್ಲ. 2009ರಲ್ಲಿ ಯುಪಿಎ ಸರಕಾರ ಮತ್ತೊಮ್ಮೆ ಅಸ್ತಿತ್ವಕ್ಕೆ ಬಂದನಂತರ ಚುನಾವಣಾ ಮತಯಂತ್ರಗಳ ಬಗ್ಗೆ ಬಿಜೆಪಿ ನಾಯಕರಾದ ಜಿ.ವಿ.ಎಲ್. ನರಸಿಂಹ ರಾವ್ ಒಂದು ಪುಸ್ತಕವನ್ನೇ ಬರೆದರು; ಅದಕ್ಕೆ ಮುನ್ನುಡಿ ಶ್ರೀ ಅಡ್ವಾನಿಯವರದಾಗಿತ್ತು. ಇನ್ನೋರ್ವ ನಾಯಕ ಸುಬ್ರಹ್ಮಣ್ಯ ಸ್ವಾಮಿಯವರು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿ ಮತಯಂತ್ರದ ಜೊತೆಗೆ ವಿವಿಪ್ಯಾಟ್ ಅಳವಡಿಸಬೇಕು ಎಂಬ ಆದೇಶವನ್ನೂ ಪಡೆದರು. ಆದರೆ ಅವೆರಡನ್ನೂ ಸಂಪೂರ್ಣವಾಗಿ ಹೋಲಿಕೆ ಮಾಡಿ ಅಥವಾ 50% ಆದರೂ ಹೋಲಿಸಿ ಎಂಬ ಕೂಗು ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಸಲಿಲ್ಲವೆಂಬುದು ನಮ್ಮ ದೌರ್ಭಾಗ್ಯವೇ ಸರಿ.

ಈಗಲಾದರೂ ಚುನಾವಣಾ ಆಯೋಗ ಈ ವ್ಯತ್ಯಾಸಗಳಿಗೆ ಕಾರಣ ನೀಡಲೇಬೇಕು. ಹೆಚ್ಚುವರಿ ಮತಗಳು ಹೇಗೆ ಬಂದವು ಎಂಬುದನ್ನೂ ವಿವರಿಸಬೇಕು.

ಜನರ ಮತವನ್ನು ಅನ್ಯಾಯವಾಗಿ ಯಾರೋ ಕದ್ದು ಗೆದ್ದಿರಬಹುದು ಆದರೆ ದೇಶಕ್ಕೆ ಬೇಕಾದ ಆಡಳಿತ ನೀಡುವಲ್ಲಿ ವಿಫಲವಾಗಿ, ಕೇವಲ ಜನರನ್ನು ವಿಂಗಡಿಸುವ ಪ್ರಯತ್ನ ಮುಂದುವರೆದರೆ ಗೆದ್ದು ಸೋತವರು ಯಾರೇ ಆಗಿರಬಹುದು ಆದರೆ ಇದಕ್ಕೆ ನಮ್ಮ ದೇಶ ಬಹು ದೊಡ್ಡ ಬೆಲೆ ಮುಂಬರುವ ದಿನಗಳಲ್ಲಿ ತೆರಬೇಕಾಗುತ್ತದೆ. ಹಾಗಾಗದಿರಲಿ ಎಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...