Homeರಾಜಕೀಯಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ

- Advertisement -
- Advertisement -

ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಜಂಟಿ ಆಯ್ಕೆಯಾದ ಯಶವಂತ್ ಸಿನ್ಹಾ ಅವರು ಸೋಮವಾರ (ಇಂದು) ನಡೆಯುವ ರಾಷ್ಟ್ರಪತಿ ಚುನಾವಣೆಗಾಗಿ ಮುಖಾಮುಖಿಯಾಗಲಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸುಮಾರು 4,000 ಕ್ಕೂ ಹೆಚ್ಚು ಸಂಸದರು ಮತ್ತು ಶಾಸಕರು ತಮ್ಮ ಮತವನ್ನು ಚಲಾಯಿಸಲಿದ್ದಾರೆ.

ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

64 ವರ್ಷದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಪ್ರಬಲ ಸ್ಪರ್ಧಿಯಾಗಿದ್ದಾರೆ. ಒಡಿಶಾದ ಬುಡಕಟ್ಟು ಮಹಿಳೆಯಾಗಿರುವ ಅವರು ಜಾರ್ಖಂಡ್‌ನ ಮಾಜಿ ರಾಜ್ಯಪಾಲೆಯೂ ಆಗಿದ್ದಾರೆ. ಮುರ್ಮು ಅವರ ಆಯ್ಕೆಯೂ ಲೆಕ್ಕಾಚಾರದ ಕ್ರಮವೆಂದು ಪರಿಗಣಿಸಲ್ಪಟ್ಟಿದ್ದು, ಇದು ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಬೆಂಬಲವನ್ನು ಮಾತ್ರವಲ್ಲದೆ ಒಡಿಶಾದ ನವೀನ್ ಪಟ್ನಾಯಕ್ ಅವರ ಬೆಂಬಲ ಕೂಡಾ ಪಡೆಯುವಂತೆ ನೋಡಿಕೊಳ್ಳಲಾಗಿದೆ.

ಇದನ್ನೂ ಓದಿ: ವಿವರಣೆ: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಮುರ್ಮು ಅವರಿಗೆ ಬೆಂಬಲ ನೀಡುತ್ತೇವೆ ಎಂಬ ಭರವಸೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ. ಬಿಹಾರದಲ್ಲಿ ಬಿಜೆಪಿಯೊಂದಿಗೆ ನಿತೀಶ್ ಕುಮಾರ್‌ ಅವರ ಪಕ್ಷವೂ ಮೈತ್ರಿಯಲ್ಲಿದ್ದರೂ, ಇತ್ತೀಚೆಗೆ ಅವರ ನಡುವೆ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಏಕನಾಥ್ ಶಿಂಧೆ ಬಣ ಮುರ್ಮು ಅವರನ್ನು ಬೆಂಬಲಿಸುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಬಣ ಕೂಡಾ ಅವರನ್ನು ಬೆಂಬಲಿಸುತ್ತಿದೆ.

16 ಸಂಸದರು ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬುಡಕಟ್ಟು ಮಹಿಳೆ ಮುರ್ಮು ಅವರಿಗೆ ಮತ ಹಾಕುವಂತೆ ಸೂಚಿಸಿದ ನಂತರ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತಿದ್ದ ಠಾಕ್ರೆ ಬಣ ತಮ್ಮ ನಿರ್ಧಾರವನ್ನು ಬದಲಾಯಿಸಲು ನಿರ್ಧರಿಸಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ…’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌ ಆದ್ಮಿ ಪಕ್ಷ

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ ಸಿನ್ಹಾ ಅವರು ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದರು. ವಿರೋಧ ಪಕ್ಷಗಳು ಮೂವರು ಹಿರಿಯ ನಾಯಕರನ್ನು ಅಭ್ಯರ್ಥಿಯಾಗುವಂತೆ ಕೇಳಿಕೊಂಡರೂ ಅವರು ನಿರಾಕರಿಸಿದ ನಂತರ ವಿರೋಧ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ವಿವಿಧ ಕಾರಣಗಳನ್ನು ಉಲ್ಲೇಖಿಸಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ್ದರು.

ಸಂಸತ್ತಿನ ಎರಡೂ ಸದನಗಳ ಚುನಾಯಿತ ಸದಸ್ಯರು ಮತ್ತು ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳು ಹಾಗೂ ರಾಷ್ಟ್ರೀಯ ರಾಜಧಾನಿ ದೆಹಲಿ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಸಚಿವೆ ಮಾರ್ಗರೆಟ್ ಆಳ್ವ ಆಯ್ಕೆ

ಮತದಾನಕ್ಕೆ ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...