Homeರಾಜಕೀಯಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ

- Advertisement -
- Advertisement -

ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಜಂಟಿ ಆಯ್ಕೆಯಾದ ಯಶವಂತ್ ಸಿನ್ಹಾ ಅವರು ಸೋಮವಾರ (ಇಂದು) ನಡೆಯುವ ರಾಷ್ಟ್ರಪತಿ ಚುನಾವಣೆಗಾಗಿ ಮುಖಾಮುಖಿಯಾಗಲಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸುಮಾರು 4,000 ಕ್ಕೂ ಹೆಚ್ಚು ಸಂಸದರು ಮತ್ತು ಶಾಸಕರು ತಮ್ಮ ಮತವನ್ನು ಚಲಾಯಿಸಲಿದ್ದಾರೆ.

ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

64 ವರ್ಷದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಪ್ರಬಲ ಸ್ಪರ್ಧಿಯಾಗಿದ್ದಾರೆ. ಒಡಿಶಾದ ಬುಡಕಟ್ಟು ಮಹಿಳೆಯಾಗಿರುವ ಅವರು ಜಾರ್ಖಂಡ್‌ನ ಮಾಜಿ ರಾಜ್ಯಪಾಲೆಯೂ ಆಗಿದ್ದಾರೆ. ಮುರ್ಮು ಅವರ ಆಯ್ಕೆಯೂ ಲೆಕ್ಕಾಚಾರದ ಕ್ರಮವೆಂದು ಪರಿಗಣಿಸಲ್ಪಟ್ಟಿದ್ದು, ಇದು ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಬೆಂಬಲವನ್ನು ಮಾತ್ರವಲ್ಲದೆ ಒಡಿಶಾದ ನವೀನ್ ಪಟ್ನಾಯಕ್ ಅವರ ಬೆಂಬಲ ಕೂಡಾ ಪಡೆಯುವಂತೆ ನೋಡಿಕೊಳ್ಳಲಾಗಿದೆ.

ಇದನ್ನೂ ಓದಿ: ವಿವರಣೆ: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಮುರ್ಮು ಅವರಿಗೆ ಬೆಂಬಲ ನೀಡುತ್ತೇವೆ ಎಂಬ ಭರವಸೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ. ಬಿಹಾರದಲ್ಲಿ ಬಿಜೆಪಿಯೊಂದಿಗೆ ನಿತೀಶ್ ಕುಮಾರ್‌ ಅವರ ಪಕ್ಷವೂ ಮೈತ್ರಿಯಲ್ಲಿದ್ದರೂ, ಇತ್ತೀಚೆಗೆ ಅವರ ನಡುವೆ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಏಕನಾಥ್ ಶಿಂಧೆ ಬಣ ಮುರ್ಮು ಅವರನ್ನು ಬೆಂಬಲಿಸುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಬಣ ಕೂಡಾ ಅವರನ್ನು ಬೆಂಬಲಿಸುತ್ತಿದೆ.

16 ಸಂಸದರು ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬುಡಕಟ್ಟು ಮಹಿಳೆ ಮುರ್ಮು ಅವರಿಗೆ ಮತ ಹಾಕುವಂತೆ ಸೂಚಿಸಿದ ನಂತರ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತಿದ್ದ ಠಾಕ್ರೆ ಬಣ ತಮ್ಮ ನಿರ್ಧಾರವನ್ನು ಬದಲಾಯಿಸಲು ನಿರ್ಧರಿಸಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ…’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌ ಆದ್ಮಿ ಪಕ್ಷ

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ ಸಿನ್ಹಾ ಅವರು ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದರು. ವಿರೋಧ ಪಕ್ಷಗಳು ಮೂವರು ಹಿರಿಯ ನಾಯಕರನ್ನು ಅಭ್ಯರ್ಥಿಯಾಗುವಂತೆ ಕೇಳಿಕೊಂಡರೂ ಅವರು ನಿರಾಕರಿಸಿದ ನಂತರ ವಿರೋಧ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ವಿವಿಧ ಕಾರಣಗಳನ್ನು ಉಲ್ಲೇಖಿಸಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ್ದರು.

ಸಂಸತ್ತಿನ ಎರಡೂ ಸದನಗಳ ಚುನಾಯಿತ ಸದಸ್ಯರು ಮತ್ತು ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳು ಹಾಗೂ ರಾಷ್ಟ್ರೀಯ ರಾಜಧಾನಿ ದೆಹಲಿ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಸಚಿವೆ ಮಾರ್ಗರೆಟ್ ಆಳ್ವ ಆಯ್ಕೆ

ಮತದಾನಕ್ಕೆ ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...