Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...