Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...