Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...