Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...