Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...