Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...