Homeಮುಖಪುಟರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

- Advertisement -
- Advertisement -

ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರುವಂತೆ ಮಾಡಿದೆ. ಈ ರೈತ ಹೋರಾಟದ ಯಶಸ್ಸಿನಲ್ಲಿ ಪಂಜಾಬ್ ರೈತರು ಅತಿ ಮಹತ್ವದ ಪಾತ್ರ ವಹಿಸಿದ್ದರು. ಮೊದಲಿಗೆ ಅಲ್ಲಿನ 32 ಸಂಘಟನೆಗಳು ಒಟ್ಟಾಗಿ ದೆಹಲಿಗೆ ಧಾವಿಸಿ ಇಡೀ ಪ್ರಪಂಚವೇ ತಮ್ಮೆಡೆಗೆ ತಿರುಗಿ ನೋಡುವಂತೆ ಮಾಡಿದರು. ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ದಿಟ್ಟವಾಗಿ ಹೋರಾಡಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆಗಾಗಿ ಸಮಿತಿ ರಚಿಸುವಂತೆ ಮಾಡಿದರು. ಈಗ ಎಲ್ಲರ ಪ್ರಶ್ನೆ ಮುಂಬರುವ ಫೆಬ್ರವರಿ 20ರಂದು ರಾಜ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ರೈತರ ಬೆಂಬಲ ಯಾರಿಗಿರುತ್ತದೆ ಎಂಬುದು ಮತ್ತು ಆ ಬೆಂಬಲದೊಂದಿಗೆ ಆ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಬಲ್ಲುದೇ ಎಂದು.

ಇದಕ್ಕೆ ಉತ್ತರ ಅಷ್ಟು ಸರಳವಾಗಿಲ್ಲ. ಆದರೆ ಬಿಜೆಪಿ ಅಂತೂ ರೈತ ದ್ರೋಹಿ ಪಕ್ಷ ಎಂಬ ಹಣೆಪಟ್ಟಿ ಪಡೆದಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್ ಸಿಂಗ್‌ರವರ ಪಂಜಾಬ್ ಲೋಕ್ ಕಾಂಗ್ರೆಸ್ ಸಹ ರೈತರ ವಿರೋಧ ಎದುರಿಸಬೇಕಾಗಿದೆ. ಈ ನಡುವೆ ರೈತರ ಕೆಲವು ಸಂಘಟನೆಗಳು ತಾವೇ ಸಂಯುಕ್ತ ಸಮಾಜ್ ಮೋರ್ಚಾ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಅದರಿಂದ ಅಂತರ ಕಾಯ್ದುಕೊಂಡಿದೆ. ಈ ಎಲ್ಲಾ ಕಾರಣಗಳಿಗಾಗಿ ಈ ಬಾರಿಯ ಚುನಾವಣೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಅಮರಿಂದರ್ ಸಿಂಗ್‌

ರೈತ ಹೋರಾಟವೊಂದೇ ಚುನಾವಣೆಯನ್ನು ನಿರ್ಧರಿಸುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಈ ಬಾರಿ ಪಂಜಾಬ್ ಜನರು ಎಲ್ಲಾ ಪಕ್ಷದ ಅಭ್ಯರ್ಥಿಗಳನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆ ತೋರಿಸಿ ಅನ್ನುತ್ತಿದ್ದಾರೆ. ಪಂಜಾಬ್ ಹೆಚ್ಚು ಸಾಲ ಮಾಡಿದ ರಾಜ್ಯಗಳ ಪಟ್ಟಿಯಲ್ಲಿರವುದೇಕೆ ಎಂದು ಕೇಳುತ್ತಿದ್ದಾರೆ. ಇವನ್ನು ಹೊರತುಪಡಿಸಿ “ಪಂಜಾಬ್‌ನ ಮೂರು ಭಾಷಿಕ ಪ್ರದೇಶಗಳು, ಜಾತಿ, ಧರ್ಮ, ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಹಾಗೂ ಪ್ರತಿ ಕ್ಷೇತ್ರದ ಅಭ್ಯರ್ಥಿಗಳು ಯಾರು ಎಂಬೆಲ್ಲಾ ಅಂಶಗಳು ಈ ಚುನಾವಣೆಯಲ್ಲಿ ಯಾರು ಬಹುಮತ ಪಡೆಯುತ್ತಾರೆ ಎಂಬುದನ್ನು ನಿರ್ಧರಿಸುತ್ತವೆ” ಎನ್ನುತ್ತಾರೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಯುವ ರೈತ ಬಲ್ಜಿತ್ ಸಿಂಗ್.

ಓಡುವ ಕುದುರೆ ಬೆನ್ನೇರಿದ ಕಾಂಗ್ರೆಸ್ ಚುನಾವಣೆಗೆ ಆರು ತಿಂಗಳು ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್‌ರವರನ್ನು ಕೆಳಗಿಳಿಸಿ ದಲಿತ ಸಮುದಾಯದ ಚರಣ್‌ಜಿತ್ ಸಿಂಗ್ ಚನ್ನಿಯವರನ್ನು ಸಿಎಂ ಮಾಡಿತು. ಇದಕ್ಕೆ ಮುಖ್ಯ ಕಾರಣ ನವಜೋತ್ ಸಿಂಗ್ ಸಿಧುವಾಗಿದ್ದರೂ ಚನ್ನಿ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಲ್ಪಾವಧಿಯಲ್ಲಿ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನರ ಕೈಗೆ ಸಿಗುವ ಸಿಎಂ ಎಂಬ ಮಾತು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ತೀವ್ರ ಭ್ರಷ್ಟಾಚಾರ ಮತ್ತು ಜನರಿಗೆ ಸಿಗುತ್ತಿಲ್ಲ ಎಂಬುದು ಹಿಂದಿನ ಸಿಎಂ ಅಮರಿಂದರ್ ಮೇಲಿದ್ದ ಆರೋಪ. ಅದನ್ನು ಚೆನ್ನಿ ತೊಡೆದುಹಾಕಿ ಬರುವ ಚುನಾವಣೆಯಲ್ಲಿ ತಾನೇ ಸಿಎಂ ಅಭ್ಯರ್ಥಿ ಎಂಬ ಸಂದೇಶ ರವಾನಿಸಿದ್ದಾರೆ.

ಪಂಜಾಬ್‌ನಲ್ಲಿ 34 ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಶೇ.32ರಷ್ಟು ಸಂಖ್ಯೆಯ ದಲಿತ ಸಮುದಾಯವಿದೆ. ಅವರಲ್ಲಿ ಹೆಚ್ಚಿನವರು 2017ರಲ್ಲಿ ಆಪ್ ಪಕ್ಷಕ್ಕೆ ಮತ ಚಲಾಯಿಸಿದ್ದರು ಎಂಬ ವರದಿಯಿದೆ. ಆಪ್ ಚಿಹ್ನೆ ಪೊರಕೆಯಾಗಿದ್ದ ಕಾರಣಕ್ಕೂ ಬಹಳಷ್ಟು ದಲಿತರು ಅದು ನಮ್ಮದು ಎಂದುಕೊಂಡು ಬೆಂಬಲಿಸಿದ್ದರು. ಈ ಬೆಂಬಲ ಈಗಲೂ ಉಳಿದಿದೆ ಎನ್ನಲಾಗುತ್ತಿದ್ದರೂ, ಚನ್ನಿಯವರು ಸಹ ದಲಿತರಾದ್ದರಿಂದ ಕಾಂಗ್ರೆಸ್‌ಗೆ ಒಂದಷ್ಟು ದಲಿತ ಸಮುದಾಯದ ಮತಗಳು ಬರುವುದು ಗ್ಯಾರಂಟಿ.

ಇನ್ನು ಮೋದಿಯವರ ಭದ್ರತಾ ಲೋಪ ಆರೋಪದ ಸಂದರ್ಭದಲ್ಲಿ ಅದನ್ನು ಚನ್ನಿಯವರು ನಿಭಾಯಿಸಿದ ರೀತಿಗೆ ಒಂದು ದೊಡ್ಡ ವರ್ಗದಿಂದ ಪ್ರಶಂಸೆ ವ್ಯಕ್ತವಾಗಿತ್ತು. ಭದ್ರತಾ ಲೋಪ ಸಂಭವಿಸಿಲ್ಲ, ಮೋದಿಯವರ ಚುನಾವಣಾ ರ್‍ಯಾಲಿಗೆ ಜನ ಬಾರದೇ ಇದ್ದುದ್ದಕ್ಕೆ ಈ ನಾಟಕ ಆಡುತ್ತಿದ್ದಾರೆ ಎಂದು ಅವರು ಬಹಿರಂಗವಾಗಿ ಆರೋಪಿಸಿದ್ದರು. ಫ್ಲೈ ಓವರ್‌ನಲ್ಲಿ ಪ್ರತಿಭಟಿಸುತ್ತಿದ್ದರು ಎಂದು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದ್ದರು. ಮಾಧ್ಯಮಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದಲ್ಲದೆ, ಮಾಧ್ಯಮಗಳ ಎದುರೇ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಬಳಿ ತೆರಳಿ ಬಿಜೆಪಿ ಸದಸ್ಯರ ಕೈ ಹಿಡಿದು ಮಾತನಾಡಿಸುವ ಸಂಯಮ ತೋರಿದ್ದರು. ಬಿಜೆಪಿ ಪಂಜಾಬಿಯನ್ನರನ್ನು ಆರೋಪಿಗಳನ್ನಾಗಿಸುತ್ತಿದೆ ಎಂಬ ಭಾವನೆಗೆ ಪುಷ್ಟಿ ನೀಡಿ ಮಾಧ್ಯಮಗಳನ್ನು ನಿಭಾಯಿಸಿದ್ದರು. ಈ ಎಲ್ಲಾ ಘಟನೆಗಳ ಜೊತೆಗೆ ಅವರೊಬ್ಬ ಸಮರ್ಥ ಆಡಳಿತಗಾರ ಎಂಬ ಹೆಸರು ಅವರಿಗೆ ಧನಾತ್ಮವಾಗಿ ಕೆಲಸ ಮಾಡುತ್ತಿದೆ. ದೆಹಲಿ ರೈತ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ಸಮರ್ಪಕ ಪರಿಹಾರ, ಸರ್ಕಾರಿ ಉದ್ಯೋಗ ನೀಡುವುದು, ಹೊಸ ಯೋಜನೆಗಳನ್ನು ಘೋಷಿಸುವುದು ಸೇರಿ ಚನ್ನಿಯವರು ಅಲ್ಪಾವಧಿಯಲ್ಲಿ ಮುನ್ನಲೆಗೆ ಬಂದಿದ್ದಾರೆ.

ಚರಣ್‌ಜಿತ್ ಸಿಂಗ್ ಚನ್ನಿ

ಪಕ್ಷದ ಆಂತರಿಕ ಸಮೀಕ್ಷೆಗಳಲ್ಲಿ ಚನ್ನಿ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ತಿಳಿಸಿದ್ದಾರೆ. ನಟ ಸೋನು ಸೂದ್‌ರವರ ಸಹೋದರಿ ಕಾಂಗ್ರೆಸ್ ಸೇರಿದ ನಂತರ ಸೋನು ಸೂದ್ ಸಹ ಚನ್ನಿ ಪರವಾಗಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಸನ್ನಿವೇಶಗಳು ಚನ್ನಿಯವರ ಪರವಾಗಿವೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಓಡುವ ಕುದುರೆಯ ಬೆನ್ನೇರಿದೆ. ಆದರೆ ತಾನು ಸಿಎಂ ಆಗಬೇಕು ಎಂದು ಕನಸು ಕಾಣುತ್ತಿರುವ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ಗೆ ಮುಳುವಾಗುವ ಸಂಭವವಿದೆ. ಕಾಂಗ್ರೆಸ್ ಇನ್ನೂ ಪಕ್ಷದ ಸಿಎಂ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸದಿದ್ದರೂ ಚನ್ನಿ ಬಹುತೇಕ ಖಚಿತ ಅಭ್ಯರ್ಥಿ ಎನ್ನಲಾಗುತ್ತಿದೆ. ಒಂದು ಪಕ್ಷ ನವಜೋತ್ ಸಿಂಗ್ ಸಿಧು ಬಂಡಾಯವೆದ್ದಲ್ಲಿ ಅದು ಕಾಂಗ್ರೆಸ್ ಪಾಲಿಗೆ ಬಹುದೊಡ್ಡ ನಷ್ಟವಾಗಲಿದೆ.

ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳಲಿದೆಯೇ?

ದೆಹಲಿಯ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಆಮ್ ಆದ್ಮಿ ಪಕ್ಷ 2017ರ ಪಂಜಾಬ್ ಚುನಾವಣೆಯಲ್ಲಿಯೂ ಅಧಿಕಾರ ಹಿಡಿಯುವ ಕನಸು ಕಂಡಿತ್ತು. ಉತ್ತಮ ಹೋರಾಟ ನೀಡಿದ ಆಪ್ ಮೊದಲ ಚುನಾವಣೆಯಲ್ಲಿಯೇ ಶೇ.23.80ರಷ್ಟು ಮತಗಳೊಂದಿಗೆ 20 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದೊಂದಿಗೆ ಅಧಿಕೃತ ವಿರೋಧ ಪಕ್ಷವಾಯಿತು. ಅದಕ್ಕೂ ಮುಂಚೆ ಅಧಿಕಾರದಲ್ಲಿದ್ದ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಮೈತ್ರಿಕೂಟವನ್ನು ಮೂರನೇ ಸ್ಥಾನಕ್ಕೆ ತಳ್ಳಿತ್ತು. 2017ರಲ್ಲಿ ಆಪ್‌ಗೆ ಮುಳುವಾಗಿದ್ದು ನಾಯಕತ್ವದ ಮುಖ. ಆಗ ಆಪ್‌ಗೆ ಕೊನೆ ಕ್ಷಣದವರೆಗೂ ಮುಖ್ಯಮಂತ್ರಿ ಅಭ್ಯರ್ಥಿ ಸಿಕ್ಕಿರಲಿಲ್ಲ.

ಈ ಬಾರಿ ಭಗವಂತ್ ಮನ್‌ರವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಅಂತಿಮ ಕ್ಷಣದಲ್ಲಿ ಆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಆಪ್ ಪ್ರಯತ್ನಿಸಿದೆ. ಇಷ್ಟು ದಿನ ತೆಗೆದುಕೊಂಡಿದ್ದಕ್ಕೆ ಬೇರೆ ಯಾರೂ ಸಿಗಲಿಲ್ಲ ಎಂಬುದೇ ಕಾರಣವಾಗಿದೆ. ಮನ್ ಇದ್ದುದರಲ್ಲೇ ವಾಸಿ ಎಂಬ ಅಂತಿಮ ಆಯ್ಕೆಯಾಗಿದೆ. ಕೆಲ ಸಮೀಕ್ಷೆಗಳು ಆಪ್ ಪರವಾಗಿಯೇ ಬಂದಿವೆ. ಉತ್ತಮ ವಾಗ್ಮಿಯೂ ಆದ ಭಗವಂತ್ ಮನ್‌ರನ್ನು ಪಂಜಾಬ್ ಜನ ತಮ್ಮ ಸಿಎಂ ಎಂದು ಸ್ವೀಕರಿಸುತ್ತಾರೆಯೇ ಎಂಬ ಸಂದೇಹ ಬಹಳಷ್ಟು ಜನರಿಗಿದೆ.

ಭಗವಂತ್ ಮನ್‌

ಇನ್ನೊಂದೆಡೆ ರೈತರು ಸ್ಥಾಪಿಸಿರುವ ಸಂಯುಕ್ತ ಸಮಾಜ್ ಮೋರ್ಚಾ ಪಕ್ಷವು ಆಪ್ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ, ರೈತರು ಆಪ್ ಬೆಂಬಲಿಸುತ್ತಾರೆ ಎಂಬ ಮಾತು ಸಹ ಹರಿದಾಡುತ್ತಿದೆ. ಇವೆಲ್ಲವೂ ಮತಗಳಾಗಿ ಎಷ್ಟು ಬದಲಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಅಮರಿಂದರ್ ಸಿಂಗ್ ಕಾಂಗ್ರೆಸ್‌ನ ಸಿಎಂ ಆಗಿದ್ದರೆ ಆಪ್‌ಗೆ ಈ ಚುನಾವಣೆಯಲ್ಲಿ ಬಹುಮತ ಸಾಧಿಸುವ ಸಾಧ್ಯತೆಯಿತ್ತು. ಆದರೆ ಅಮರಿಂದರ್ ಬದಲಿಗೆ ಚನ್ನಿ ಸಿಎಂ ಆದ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ. ಹಾಗಾಗಿ ಅಲ್ಪ ಅಂತರದಲ್ಲಿ ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳುತ್ತದೆ ಎಂಬುದು ಕೆಲವು ರಾಜಕೀಯ ಪಂಡಿತರ ಅಭಿಮತ.

ಶಿರೋಮಣಿ ಅಕಾಲಿ ದಳದ ಸ್ಥಿತಿಯೇನು?

2012ರಲ್ಲಿ ಶೇ.34.73% ರಷ್ಟು ಮತಗಳೊಂದಿಗೆ 56 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಮೈತ್ರಿಯೊಂದಿಗೆ ಅಧಿಕಾರ ಹಿಡಿದಿದ್ದ ಅಕಾಲಿ ದಳ 2017ರ ವೇಳೆಗೆ ಕೇವಲ ಶೇ.25.24 ಮತಗಳೊಂದಿಗೆ 15 ಸ್ಥಾನಕ್ಕೆ ಕುಸಿಯುವ ಮೂಲಕ ಹೀನಾಯ ಸ್ಥಿತಿ ತಲುಪಿತ್ತು. ಈ ಬಾರಿ ಸುಧಾರಿಸಿಕೊಂಡು ಅಧಿಕಾರಕ್ಕೆ ಬರುವ ಕನಸು ಕಂಡಿದ್ದ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದು ರೈತ ಹೋರಾಟ. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಾಗ ಅಕಾಲಿ ದಳ ಆರಂಭದಲ್ಲಿ ಅದನ್ನು ಬೆಂಬಲಿಸಿತ್ತು. ಆದರೆ ಯಾವಾಗ ಪಂಜಾಬ್ ರೈತರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದರೋ ಅಕಾಲಿ ದಳ ಸಹ ಉಲ್ಟಾ ಹೊಡೆದು ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದು ತಾನು ರೈತರ ಪರ ಎಂದು ಘೋಷಿಸಿತು. ಆದರೆ ರೈತರು ಅದನ್ನು ಒಪ್ಪಿಕೊಂಡಿದ್ದಾರೆಯೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬಹುಮತ: ಶಿರೋಮಣಿ ಅಕಾಲಿ ದಳ & ಬಿಜೆಪಿ ಮೈತ್ರಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್

ಬಿಎಸ್‌ಪಿ ಪಕ್ಷವು ಅಕಾಲಿ ದಳದ ಜೊತೆ ಮೈತ್ರಿ ಮಾಡಿಕೊಂಡು ದಲಿತ ಮತಗಳ ಮೇಲೆ ಕಣ್ಣಿಟ್ಟಿದೆ. ಇದು ಅಕಾಲಿ ದಳಕ್ಕೆ ವರವಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್-ಆಪ್ ನಡುವಿನ ಮತ ವಿಭಜನೆಯಲ್ಲಿ ಲಾಭ ಪಡೆಯಲು ಅಕಾಲಿ ದಳ ನೋಡುತ್ತಿದೆ. ಆದರೂ ಅದಕ್ಕೆ ನಿರೀಕ್ಷಿತ ಸ್ಥಾನಗಳು ದಕ್ಕುವ ಸೂಚನೆಗಳು ಕಾಣುತ್ತಿಲ್ಲ.

ಬಿಜೆಪಿ ಮತ್ತು ಅಮರಿಂದರ್ – ಆಟಕ್ಕುಂಟು, ಲೆಕ್ಕಕ್ಕಿಲ್ಲ

ಕಳೆದ ಚುನಾವಣೆಯಲ್ಲಿ 3 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದ್ದ ಬಿಜೆಪಿ ಈ ಬಾರಿ ತಿಣಕಾಡಬೇಕಾದ ಪರಿಸ್ಥಿತಿಯಲ್ಲಿದೆ. ಈ ಚುನಾವನೆಯಲ್ಲಿ ಬಿಜೆಪಿ, ಅಕಾಲಿ ದಳ ಬಿಟ್ಟು ಅಮರಿಂದರ್ ಸಿಂಗ್ ಪಕ್ಷದ ಜೊತೆಗಿನ ಮೈತ್ರಿಯೊಂದಿಗೆ ಚುನಾವಣೆಗೆ ಹೋಗುತ್ತಿದೆ. ನಗರ ಭಾಗದಲ್ಲಿ ಒಂದಷ್ಟು ನೆಲೆ ಹೊಂದಿರುವ ಅದು ಗ್ರಾಮೀಣ ಭಾಗದಲ್ಲಿ ಪೂರಾ ನೆಲಕಚ್ಚಲಿದೆ ಎನ್ನಲಾಗುತ್ತಿದೆ.

ಇನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಹೊರಬಂದು ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿರುವ ಕ್ಯಾಪ್ಟನ್ ಅಮರಿಂದರ್ ಸಹ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದ್ದಾರೆ. ಆರಂಭದಲ್ಲಿ ಬಿಜೆಪಿ ಸೇರುವುದಿಲ್ಲ ಎಂದಿದ್ದ ಅವರು ಕೊನೆಗೆ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ. ಅದು ಫಲ ಕೊಡುವುದು ದೂರದ ಮಾತಾಗಿದೆ.

ಸಂಯುಕ್ತ ಸಮಾಜ್ ಮೋರ್ಚಾ

ಸುಮಾರು 20 ರೈತ ಸಂಘಟನೆಗಳು ಸೇರಿ ಚುನಾವಣೆ ಹತ್ತಿರದಲ್ಲಿ ಸಂಯುಕ್ತ ಸಮಾಜ್ ಮೋರ್ಚಾ ಎಂಬ ಪಕ್ಷ ಸ್ಥಾಪಿಸಿದ್ದರೂ ಅದು ಪರಿಣಾಮ ಬೀರಲು ಸಾಧ್ಯವಾಗುವುದಿಲ್ಲ. ಏಕೆಂದರೆ ರೈತ ಹೋರಾಟ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಬೆಂಬಲಿಸಿಲ್ಲ. ಇದಕ್ಕೆ ದೊಡ್ಡ ನಾಯಕರಿಲ್ಲ ಮತ್ತು ಪಂಜಾಬ್‌ನಾದ್ಯಂತ ನೆಲೆ ಇಲ್ಲ ಎನ್ನುತ್ತಾರೆ ಬಲ್ಜಿತ್ ಸಿಂಗ್.

ಬಹುಮತ: ಕಾಂಗ್ರೆಸ್ ಮುಖ್ಯಮಂತ್ರಿ: ಅಮರಿಂದರ್ ಸಿಂಗ್

ಅತಂತ್ರ ವಿಧಾನಸಭೆಯ ಸಾಧ್ಯತೆ?

117 ಕ್ಷೇತ್ರಗಳ ಪಂಜಾಬ್‌ನಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಆಪ್ ನಡುವೆ ನೇರ ಪೈಪೋಟಿ ಇರಲಿದೆ. ಕಾಂಗ್ರೆಸ್‌ಗೆ ಹೆಚ್ಚಿನ ಸಾಧ್ಯತೆಯಿದ್ದರೂ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಲ್ಲಿ ನವಜೋತ್ ಸಿಂಗ್ ಸಿಡಿದೇಳುವ ಸಾಧ್ಯತೆ ಇದೆ. ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಭ್ಯರ್ಥಿ ಎಂದಾದರೂ ಅದು ಸಹ ಕಾಂಗ್ರೆಸ್‌ಗೆ ಒಳ್ಳೆಯದು ಮಾಡುವುದಿಲ್ಲ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಯಾವೊಂದು ಪಕ್ಷವೂ ಬಹುಮತ (59 ಸ್ಥಾನಗಳನ್ನು ಗೆಲ್ಲಬೇಕು) ಗಳಿಸುವುದು ಕಷ್ಟ ಎನ್ನಲಾಗುತ್ತಿದೆ. ಹಾಗಾಗಿ ಅತಂತ್ರ ವಿಧಾನಸಭೆ ಸಾಧ್ಯತೆಯನ್ನು ತಳ್ಳ ಹಾಕುವಂತಿಲ್ಲ. ಆದರೆ ಇತ್ತೀಚೆಗೆ ನಡೆದ ಚಂಢೀಗಡ ನಗರಪಾಲಿಗೆ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿದ್ದ ಆಪ್ (14) ಮತ್ತು 8 ಸ್ಥಾನಗಳಿಸಿದ್ದ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿಲ್ಲ. ಹಾಗಾಗಿ 12 ಸ್ಥಾನ ಗಳಿಸಿದ್ದ ಬಿಜೆಪಿ ತೆರೆಮರೆಯಲ್ಲಿ ಅಧಿಕಾರ ಹಿಡಿದಿದೆ. ಆದರೆ ವಿಧಾನಸಭೆಯಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...