Homeಮುಖಪುಟರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

- Advertisement -
- Advertisement -

ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರುವಂತೆ ಮಾಡಿದೆ. ಈ ರೈತ ಹೋರಾಟದ ಯಶಸ್ಸಿನಲ್ಲಿ ಪಂಜಾಬ್ ರೈತರು ಅತಿ ಮಹತ್ವದ ಪಾತ್ರ ವಹಿಸಿದ್ದರು. ಮೊದಲಿಗೆ ಅಲ್ಲಿನ 32 ಸಂಘಟನೆಗಳು ಒಟ್ಟಾಗಿ ದೆಹಲಿಗೆ ಧಾವಿಸಿ ಇಡೀ ಪ್ರಪಂಚವೇ ತಮ್ಮೆಡೆಗೆ ತಿರುಗಿ ನೋಡುವಂತೆ ಮಾಡಿದರು. ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ದಿಟ್ಟವಾಗಿ ಹೋರಾಡಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆಗಾಗಿ ಸಮಿತಿ ರಚಿಸುವಂತೆ ಮಾಡಿದರು. ಈಗ ಎಲ್ಲರ ಪ್ರಶ್ನೆ ಮುಂಬರುವ ಫೆಬ್ರವರಿ 20ರಂದು ರಾಜ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ರೈತರ ಬೆಂಬಲ ಯಾರಿಗಿರುತ್ತದೆ ಎಂಬುದು ಮತ್ತು ಆ ಬೆಂಬಲದೊಂದಿಗೆ ಆ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಬಲ್ಲುದೇ ಎಂದು.

ಇದಕ್ಕೆ ಉತ್ತರ ಅಷ್ಟು ಸರಳವಾಗಿಲ್ಲ. ಆದರೆ ಬಿಜೆಪಿ ಅಂತೂ ರೈತ ದ್ರೋಹಿ ಪಕ್ಷ ಎಂಬ ಹಣೆಪಟ್ಟಿ ಪಡೆದಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್ ಸಿಂಗ್‌ರವರ ಪಂಜಾಬ್ ಲೋಕ್ ಕಾಂಗ್ರೆಸ್ ಸಹ ರೈತರ ವಿರೋಧ ಎದುರಿಸಬೇಕಾಗಿದೆ. ಈ ನಡುವೆ ರೈತರ ಕೆಲವು ಸಂಘಟನೆಗಳು ತಾವೇ ಸಂಯುಕ್ತ ಸಮಾಜ್ ಮೋರ್ಚಾ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಅದರಿಂದ ಅಂತರ ಕಾಯ್ದುಕೊಂಡಿದೆ. ಈ ಎಲ್ಲಾ ಕಾರಣಗಳಿಗಾಗಿ ಈ ಬಾರಿಯ ಚುನಾವಣೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಅಮರಿಂದರ್ ಸಿಂಗ್‌

ರೈತ ಹೋರಾಟವೊಂದೇ ಚುನಾವಣೆಯನ್ನು ನಿರ್ಧರಿಸುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಈ ಬಾರಿ ಪಂಜಾಬ್ ಜನರು ಎಲ್ಲಾ ಪಕ್ಷದ ಅಭ್ಯರ್ಥಿಗಳನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆ ತೋರಿಸಿ ಅನ್ನುತ್ತಿದ್ದಾರೆ. ಪಂಜಾಬ್ ಹೆಚ್ಚು ಸಾಲ ಮಾಡಿದ ರಾಜ್ಯಗಳ ಪಟ್ಟಿಯಲ್ಲಿರವುದೇಕೆ ಎಂದು ಕೇಳುತ್ತಿದ್ದಾರೆ. ಇವನ್ನು ಹೊರತುಪಡಿಸಿ “ಪಂಜಾಬ್‌ನ ಮೂರು ಭಾಷಿಕ ಪ್ರದೇಶಗಳು, ಜಾತಿ, ಧರ್ಮ, ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಹಾಗೂ ಪ್ರತಿ ಕ್ಷೇತ್ರದ ಅಭ್ಯರ್ಥಿಗಳು ಯಾರು ಎಂಬೆಲ್ಲಾ ಅಂಶಗಳು ಈ ಚುನಾವಣೆಯಲ್ಲಿ ಯಾರು ಬಹುಮತ ಪಡೆಯುತ್ತಾರೆ ಎಂಬುದನ್ನು ನಿರ್ಧರಿಸುತ್ತವೆ” ಎನ್ನುತ್ತಾರೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಯುವ ರೈತ ಬಲ್ಜಿತ್ ಸಿಂಗ್.

ಓಡುವ ಕುದುರೆ ಬೆನ್ನೇರಿದ ಕಾಂಗ್ರೆಸ್ ಚುನಾವಣೆಗೆ ಆರು ತಿಂಗಳು ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್‌ರವರನ್ನು ಕೆಳಗಿಳಿಸಿ ದಲಿತ ಸಮುದಾಯದ ಚರಣ್‌ಜಿತ್ ಸಿಂಗ್ ಚನ್ನಿಯವರನ್ನು ಸಿಎಂ ಮಾಡಿತು. ಇದಕ್ಕೆ ಮುಖ್ಯ ಕಾರಣ ನವಜೋತ್ ಸಿಂಗ್ ಸಿಧುವಾಗಿದ್ದರೂ ಚನ್ನಿ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಲ್ಪಾವಧಿಯಲ್ಲಿ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನರ ಕೈಗೆ ಸಿಗುವ ಸಿಎಂ ಎಂಬ ಮಾತು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ತೀವ್ರ ಭ್ರಷ್ಟಾಚಾರ ಮತ್ತು ಜನರಿಗೆ ಸಿಗುತ್ತಿಲ್ಲ ಎಂಬುದು ಹಿಂದಿನ ಸಿಎಂ ಅಮರಿಂದರ್ ಮೇಲಿದ್ದ ಆರೋಪ. ಅದನ್ನು ಚೆನ್ನಿ ತೊಡೆದುಹಾಕಿ ಬರುವ ಚುನಾವಣೆಯಲ್ಲಿ ತಾನೇ ಸಿಎಂ ಅಭ್ಯರ್ಥಿ ಎಂಬ ಸಂದೇಶ ರವಾನಿಸಿದ್ದಾರೆ.

ಪಂಜಾಬ್‌ನಲ್ಲಿ 34 ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಶೇ.32ರಷ್ಟು ಸಂಖ್ಯೆಯ ದಲಿತ ಸಮುದಾಯವಿದೆ. ಅವರಲ್ಲಿ ಹೆಚ್ಚಿನವರು 2017ರಲ್ಲಿ ಆಪ್ ಪಕ್ಷಕ್ಕೆ ಮತ ಚಲಾಯಿಸಿದ್ದರು ಎಂಬ ವರದಿಯಿದೆ. ಆಪ್ ಚಿಹ್ನೆ ಪೊರಕೆಯಾಗಿದ್ದ ಕಾರಣಕ್ಕೂ ಬಹಳಷ್ಟು ದಲಿತರು ಅದು ನಮ್ಮದು ಎಂದುಕೊಂಡು ಬೆಂಬಲಿಸಿದ್ದರು. ಈ ಬೆಂಬಲ ಈಗಲೂ ಉಳಿದಿದೆ ಎನ್ನಲಾಗುತ್ತಿದ್ದರೂ, ಚನ್ನಿಯವರು ಸಹ ದಲಿತರಾದ್ದರಿಂದ ಕಾಂಗ್ರೆಸ್‌ಗೆ ಒಂದಷ್ಟು ದಲಿತ ಸಮುದಾಯದ ಮತಗಳು ಬರುವುದು ಗ್ಯಾರಂಟಿ.

ಇನ್ನು ಮೋದಿಯವರ ಭದ್ರತಾ ಲೋಪ ಆರೋಪದ ಸಂದರ್ಭದಲ್ಲಿ ಅದನ್ನು ಚನ್ನಿಯವರು ನಿಭಾಯಿಸಿದ ರೀತಿಗೆ ಒಂದು ದೊಡ್ಡ ವರ್ಗದಿಂದ ಪ್ರಶಂಸೆ ವ್ಯಕ್ತವಾಗಿತ್ತು. ಭದ್ರತಾ ಲೋಪ ಸಂಭವಿಸಿಲ್ಲ, ಮೋದಿಯವರ ಚುನಾವಣಾ ರ್‍ಯಾಲಿಗೆ ಜನ ಬಾರದೇ ಇದ್ದುದ್ದಕ್ಕೆ ಈ ನಾಟಕ ಆಡುತ್ತಿದ್ದಾರೆ ಎಂದು ಅವರು ಬಹಿರಂಗವಾಗಿ ಆರೋಪಿಸಿದ್ದರು. ಫ್ಲೈ ಓವರ್‌ನಲ್ಲಿ ಪ್ರತಿಭಟಿಸುತ್ತಿದ್ದರು ಎಂದು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದ್ದರು. ಮಾಧ್ಯಮಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದಲ್ಲದೆ, ಮಾಧ್ಯಮಗಳ ಎದುರೇ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಬಳಿ ತೆರಳಿ ಬಿಜೆಪಿ ಸದಸ್ಯರ ಕೈ ಹಿಡಿದು ಮಾತನಾಡಿಸುವ ಸಂಯಮ ತೋರಿದ್ದರು. ಬಿಜೆಪಿ ಪಂಜಾಬಿಯನ್ನರನ್ನು ಆರೋಪಿಗಳನ್ನಾಗಿಸುತ್ತಿದೆ ಎಂಬ ಭಾವನೆಗೆ ಪುಷ್ಟಿ ನೀಡಿ ಮಾಧ್ಯಮಗಳನ್ನು ನಿಭಾಯಿಸಿದ್ದರು. ಈ ಎಲ್ಲಾ ಘಟನೆಗಳ ಜೊತೆಗೆ ಅವರೊಬ್ಬ ಸಮರ್ಥ ಆಡಳಿತಗಾರ ಎಂಬ ಹೆಸರು ಅವರಿಗೆ ಧನಾತ್ಮವಾಗಿ ಕೆಲಸ ಮಾಡುತ್ತಿದೆ. ದೆಹಲಿ ರೈತ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ಸಮರ್ಪಕ ಪರಿಹಾರ, ಸರ್ಕಾರಿ ಉದ್ಯೋಗ ನೀಡುವುದು, ಹೊಸ ಯೋಜನೆಗಳನ್ನು ಘೋಷಿಸುವುದು ಸೇರಿ ಚನ್ನಿಯವರು ಅಲ್ಪಾವಧಿಯಲ್ಲಿ ಮುನ್ನಲೆಗೆ ಬಂದಿದ್ದಾರೆ.

ಚರಣ್‌ಜಿತ್ ಸಿಂಗ್ ಚನ್ನಿ

ಪಕ್ಷದ ಆಂತರಿಕ ಸಮೀಕ್ಷೆಗಳಲ್ಲಿ ಚನ್ನಿ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ತಿಳಿಸಿದ್ದಾರೆ. ನಟ ಸೋನು ಸೂದ್‌ರವರ ಸಹೋದರಿ ಕಾಂಗ್ರೆಸ್ ಸೇರಿದ ನಂತರ ಸೋನು ಸೂದ್ ಸಹ ಚನ್ನಿ ಪರವಾಗಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಸನ್ನಿವೇಶಗಳು ಚನ್ನಿಯವರ ಪರವಾಗಿವೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಓಡುವ ಕುದುರೆಯ ಬೆನ್ನೇರಿದೆ. ಆದರೆ ತಾನು ಸಿಎಂ ಆಗಬೇಕು ಎಂದು ಕನಸು ಕಾಣುತ್ತಿರುವ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ಗೆ ಮುಳುವಾಗುವ ಸಂಭವವಿದೆ. ಕಾಂಗ್ರೆಸ್ ಇನ್ನೂ ಪಕ್ಷದ ಸಿಎಂ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸದಿದ್ದರೂ ಚನ್ನಿ ಬಹುತೇಕ ಖಚಿತ ಅಭ್ಯರ್ಥಿ ಎನ್ನಲಾಗುತ್ತಿದೆ. ಒಂದು ಪಕ್ಷ ನವಜೋತ್ ಸಿಂಗ್ ಸಿಧು ಬಂಡಾಯವೆದ್ದಲ್ಲಿ ಅದು ಕಾಂಗ್ರೆಸ್ ಪಾಲಿಗೆ ಬಹುದೊಡ್ಡ ನಷ್ಟವಾಗಲಿದೆ.

ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳಲಿದೆಯೇ?

ದೆಹಲಿಯ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಆಮ್ ಆದ್ಮಿ ಪಕ್ಷ 2017ರ ಪಂಜಾಬ್ ಚುನಾವಣೆಯಲ್ಲಿಯೂ ಅಧಿಕಾರ ಹಿಡಿಯುವ ಕನಸು ಕಂಡಿತ್ತು. ಉತ್ತಮ ಹೋರಾಟ ನೀಡಿದ ಆಪ್ ಮೊದಲ ಚುನಾವಣೆಯಲ್ಲಿಯೇ ಶೇ.23.80ರಷ್ಟು ಮತಗಳೊಂದಿಗೆ 20 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದೊಂದಿಗೆ ಅಧಿಕೃತ ವಿರೋಧ ಪಕ್ಷವಾಯಿತು. ಅದಕ್ಕೂ ಮುಂಚೆ ಅಧಿಕಾರದಲ್ಲಿದ್ದ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಮೈತ್ರಿಕೂಟವನ್ನು ಮೂರನೇ ಸ್ಥಾನಕ್ಕೆ ತಳ್ಳಿತ್ತು. 2017ರಲ್ಲಿ ಆಪ್‌ಗೆ ಮುಳುವಾಗಿದ್ದು ನಾಯಕತ್ವದ ಮುಖ. ಆಗ ಆಪ್‌ಗೆ ಕೊನೆ ಕ್ಷಣದವರೆಗೂ ಮುಖ್ಯಮಂತ್ರಿ ಅಭ್ಯರ್ಥಿ ಸಿಕ್ಕಿರಲಿಲ್ಲ.

ಈ ಬಾರಿ ಭಗವಂತ್ ಮನ್‌ರವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಅಂತಿಮ ಕ್ಷಣದಲ್ಲಿ ಆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಆಪ್ ಪ್ರಯತ್ನಿಸಿದೆ. ಇಷ್ಟು ದಿನ ತೆಗೆದುಕೊಂಡಿದ್ದಕ್ಕೆ ಬೇರೆ ಯಾರೂ ಸಿಗಲಿಲ್ಲ ಎಂಬುದೇ ಕಾರಣವಾಗಿದೆ. ಮನ್ ಇದ್ದುದರಲ್ಲೇ ವಾಸಿ ಎಂಬ ಅಂತಿಮ ಆಯ್ಕೆಯಾಗಿದೆ. ಕೆಲ ಸಮೀಕ್ಷೆಗಳು ಆಪ್ ಪರವಾಗಿಯೇ ಬಂದಿವೆ. ಉತ್ತಮ ವಾಗ್ಮಿಯೂ ಆದ ಭಗವಂತ್ ಮನ್‌ರನ್ನು ಪಂಜಾಬ್ ಜನ ತಮ್ಮ ಸಿಎಂ ಎಂದು ಸ್ವೀಕರಿಸುತ್ತಾರೆಯೇ ಎಂಬ ಸಂದೇಹ ಬಹಳಷ್ಟು ಜನರಿಗಿದೆ.

ಭಗವಂತ್ ಮನ್‌

ಇನ್ನೊಂದೆಡೆ ರೈತರು ಸ್ಥಾಪಿಸಿರುವ ಸಂಯುಕ್ತ ಸಮಾಜ್ ಮೋರ್ಚಾ ಪಕ್ಷವು ಆಪ್ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ, ರೈತರು ಆಪ್ ಬೆಂಬಲಿಸುತ್ತಾರೆ ಎಂಬ ಮಾತು ಸಹ ಹರಿದಾಡುತ್ತಿದೆ. ಇವೆಲ್ಲವೂ ಮತಗಳಾಗಿ ಎಷ್ಟು ಬದಲಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಅಮರಿಂದರ್ ಸಿಂಗ್ ಕಾಂಗ್ರೆಸ್‌ನ ಸಿಎಂ ಆಗಿದ್ದರೆ ಆಪ್‌ಗೆ ಈ ಚುನಾವಣೆಯಲ್ಲಿ ಬಹುಮತ ಸಾಧಿಸುವ ಸಾಧ್ಯತೆಯಿತ್ತು. ಆದರೆ ಅಮರಿಂದರ್ ಬದಲಿಗೆ ಚನ್ನಿ ಸಿಎಂ ಆದ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ. ಹಾಗಾಗಿ ಅಲ್ಪ ಅಂತರದಲ್ಲಿ ಆಪ್ ಈ ಬಾರಿಯೂ ಟ್ರೇನ್ ಮಿಸ್ ಮಾಡಿಕೊಳ್ಳುತ್ತದೆ ಎಂಬುದು ಕೆಲವು ರಾಜಕೀಯ ಪಂಡಿತರ ಅಭಿಮತ.

ಶಿರೋಮಣಿ ಅಕಾಲಿ ದಳದ ಸ್ಥಿತಿಯೇನು?

2012ರಲ್ಲಿ ಶೇ.34.73% ರಷ್ಟು ಮತಗಳೊಂದಿಗೆ 56 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಮೈತ್ರಿಯೊಂದಿಗೆ ಅಧಿಕಾರ ಹಿಡಿದಿದ್ದ ಅಕಾಲಿ ದಳ 2017ರ ವೇಳೆಗೆ ಕೇವಲ ಶೇ.25.24 ಮತಗಳೊಂದಿಗೆ 15 ಸ್ಥಾನಕ್ಕೆ ಕುಸಿಯುವ ಮೂಲಕ ಹೀನಾಯ ಸ್ಥಿತಿ ತಲುಪಿತ್ತು. ಈ ಬಾರಿ ಸುಧಾರಿಸಿಕೊಂಡು ಅಧಿಕಾರಕ್ಕೆ ಬರುವ ಕನಸು ಕಂಡಿದ್ದ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದು ರೈತ ಹೋರಾಟ. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಾಗ ಅಕಾಲಿ ದಳ ಆರಂಭದಲ್ಲಿ ಅದನ್ನು ಬೆಂಬಲಿಸಿತ್ತು. ಆದರೆ ಯಾವಾಗ ಪಂಜಾಬ್ ರೈತರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದರೋ ಅಕಾಲಿ ದಳ ಸಹ ಉಲ್ಟಾ ಹೊಡೆದು ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದು ತಾನು ರೈತರ ಪರ ಎಂದು ಘೋಷಿಸಿತು. ಆದರೆ ರೈತರು ಅದನ್ನು ಒಪ್ಪಿಕೊಂಡಿದ್ದಾರೆಯೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬಹುಮತ: ಶಿರೋಮಣಿ ಅಕಾಲಿ ದಳ & ಬಿಜೆಪಿ ಮೈತ್ರಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್

ಬಿಎಸ್‌ಪಿ ಪಕ್ಷವು ಅಕಾಲಿ ದಳದ ಜೊತೆ ಮೈತ್ರಿ ಮಾಡಿಕೊಂಡು ದಲಿತ ಮತಗಳ ಮೇಲೆ ಕಣ್ಣಿಟ್ಟಿದೆ. ಇದು ಅಕಾಲಿ ದಳಕ್ಕೆ ವರವಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್-ಆಪ್ ನಡುವಿನ ಮತ ವಿಭಜನೆಯಲ್ಲಿ ಲಾಭ ಪಡೆಯಲು ಅಕಾಲಿ ದಳ ನೋಡುತ್ತಿದೆ. ಆದರೂ ಅದಕ್ಕೆ ನಿರೀಕ್ಷಿತ ಸ್ಥಾನಗಳು ದಕ್ಕುವ ಸೂಚನೆಗಳು ಕಾಣುತ್ತಿಲ್ಲ.

ಬಿಜೆಪಿ ಮತ್ತು ಅಮರಿಂದರ್ – ಆಟಕ್ಕುಂಟು, ಲೆಕ್ಕಕ್ಕಿಲ್ಲ

ಕಳೆದ ಚುನಾವಣೆಯಲ್ಲಿ 3 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದ್ದ ಬಿಜೆಪಿ ಈ ಬಾರಿ ತಿಣಕಾಡಬೇಕಾದ ಪರಿಸ್ಥಿತಿಯಲ್ಲಿದೆ. ಈ ಚುನಾವನೆಯಲ್ಲಿ ಬಿಜೆಪಿ, ಅಕಾಲಿ ದಳ ಬಿಟ್ಟು ಅಮರಿಂದರ್ ಸಿಂಗ್ ಪಕ್ಷದ ಜೊತೆಗಿನ ಮೈತ್ರಿಯೊಂದಿಗೆ ಚುನಾವಣೆಗೆ ಹೋಗುತ್ತಿದೆ. ನಗರ ಭಾಗದಲ್ಲಿ ಒಂದಷ್ಟು ನೆಲೆ ಹೊಂದಿರುವ ಅದು ಗ್ರಾಮೀಣ ಭಾಗದಲ್ಲಿ ಪೂರಾ ನೆಲಕಚ್ಚಲಿದೆ ಎನ್ನಲಾಗುತ್ತಿದೆ.

ಇನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಹೊರಬಂದು ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಸ್ಥಾಪಿಸಿರುವ ಕ್ಯಾಪ್ಟನ್ ಅಮರಿಂದರ್ ಸಹ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದ್ದಾರೆ. ಆರಂಭದಲ್ಲಿ ಬಿಜೆಪಿ ಸೇರುವುದಿಲ್ಲ ಎಂದಿದ್ದ ಅವರು ಕೊನೆಗೆ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ. ಅದು ಫಲ ಕೊಡುವುದು ದೂರದ ಮಾತಾಗಿದೆ.

ಸಂಯುಕ್ತ ಸಮಾಜ್ ಮೋರ್ಚಾ

ಸುಮಾರು 20 ರೈತ ಸಂಘಟನೆಗಳು ಸೇರಿ ಚುನಾವಣೆ ಹತ್ತಿರದಲ್ಲಿ ಸಂಯುಕ್ತ ಸಮಾಜ್ ಮೋರ್ಚಾ ಎಂಬ ಪಕ್ಷ ಸ್ಥಾಪಿಸಿದ್ದರೂ ಅದು ಪರಿಣಾಮ ಬೀರಲು ಸಾಧ್ಯವಾಗುವುದಿಲ್ಲ. ಏಕೆಂದರೆ ರೈತ ಹೋರಾಟ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಬೆಂಬಲಿಸಿಲ್ಲ. ಇದಕ್ಕೆ ದೊಡ್ಡ ನಾಯಕರಿಲ್ಲ ಮತ್ತು ಪಂಜಾಬ್‌ನಾದ್ಯಂತ ನೆಲೆ ಇಲ್ಲ ಎನ್ನುತ್ತಾರೆ ಬಲ್ಜಿತ್ ಸಿಂಗ್.

ಬಹುಮತ: ಕಾಂಗ್ರೆಸ್ ಮುಖ್ಯಮಂತ್ರಿ: ಅಮರಿಂದರ್ ಸಿಂಗ್

ಅತಂತ್ರ ವಿಧಾನಸಭೆಯ ಸಾಧ್ಯತೆ?

117 ಕ್ಷೇತ್ರಗಳ ಪಂಜಾಬ್‌ನಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಆಪ್ ನಡುವೆ ನೇರ ಪೈಪೋಟಿ ಇರಲಿದೆ. ಕಾಂಗ್ರೆಸ್‌ಗೆ ಹೆಚ್ಚಿನ ಸಾಧ್ಯತೆಯಿದ್ದರೂ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಲ್ಲಿ ನವಜೋತ್ ಸಿಂಗ್ ಸಿಡಿದೇಳುವ ಸಾಧ್ಯತೆ ಇದೆ. ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಭ್ಯರ್ಥಿ ಎಂದಾದರೂ ಅದು ಸಹ ಕಾಂಗ್ರೆಸ್‌ಗೆ ಒಳ್ಳೆಯದು ಮಾಡುವುದಿಲ್ಲ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಯಾವೊಂದು ಪಕ್ಷವೂ ಬಹುಮತ (59 ಸ್ಥಾನಗಳನ್ನು ಗೆಲ್ಲಬೇಕು) ಗಳಿಸುವುದು ಕಷ್ಟ ಎನ್ನಲಾಗುತ್ತಿದೆ. ಹಾಗಾಗಿ ಅತಂತ್ರ ವಿಧಾನಸಭೆ ಸಾಧ್ಯತೆಯನ್ನು ತಳ್ಳ ಹಾಕುವಂತಿಲ್ಲ. ಆದರೆ ಇತ್ತೀಚೆಗೆ ನಡೆದ ಚಂಢೀಗಡ ನಗರಪಾಲಿಗೆ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿದ್ದ ಆಪ್ (14) ಮತ್ತು 8 ಸ್ಥಾನಗಳಿಸಿದ್ದ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿಲ್ಲ. ಹಾಗಾಗಿ 12 ಸ್ಥಾನ ಗಳಿಸಿದ್ದ ಬಿಜೆಪಿ ತೆರೆಮರೆಯಲ್ಲಿ ಅಧಿಕಾರ ಹಿಡಿದಿದೆ. ಆದರೆ ವಿಧಾನಸಭೆಯಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....