Homeಕರ್ನಾಟಕಚುನಾವಣಾ ಪ್ರಣಾಳಿಕೆಯ ಭರವಸೆ ಭ್ರಷ್ಟಾಚಾರವಲ್ಲ : ಝಮೀರ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

ಚುನಾವಣಾ ಪ್ರಣಾಳಿಕೆಯ ಭರವಸೆ ಭ್ರಷ್ಟಾಚಾರವಲ್ಲ : ಝಮೀರ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

ಕಾಂಗ್ರೆಸ್ ಭರವಸೆಗಳು ಸಾರ್ವಜನಿಕರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆರ್ಥಿಕ ಸಹಾಯ ಕಲ್ಪಿಸಿದ್ದು, ಇದು ಭ್ರಷ್ಟ ವ್ಯವಹಾರ ಎಂಬ ವಾದ ಒಪ್ಪಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ಪ್ರಕಟಿಸುವ ಭರವಸೆ ಅಥವಾ ಬದ್ಧತೆಗಳು ಜನರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದೇ ವಿನಃ, ಜನ ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

2023ರ ವಿಧಾನಸಭೆ ಚುನಾವಣೆಯ ವೇಳೆ ಕರ್ನಾಟಕ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಕುರಿತು ಕುರಿತು ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಝಡ್‌ ಝಮೀರ್‌ ಅಹ್ಮದ್ ಖಾನ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಕೆವಿ ವಿಶ್ವನಾಥನ್‌ ಅವರಿದ್ದ ಪೀಠ, “ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ನೀಡುವ ಭರವಸೆಗಳು ಭ್ರಷ್ಟ ವ್ಯವಹಾರಕ್ಕೆ ಸಮವಲ್ಲ” ಎಂದು ಹೇಳಿದ್ದು, ಮೇಲ್ಮನವಿಯನ್ನು ವಜಾಗೊಳಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ 2023ರ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ ಆಶ್ವಾಸನೆಗಳು ಸಾರ್ವಜನಿಕರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆರ್ಥಿಕ ಸಹಾಯ ಕಲ್ಪಿಸಿದ್ದು, ಇದು ಅಭ್ಯರ್ಥಿಯ ಭ್ರಷ್ಟ ವ್ಯವಹಾರಕ್ಕೆ ಕಾರಣವಾಗುತ್ತದೆ ಎಂಬ ವಕೀಲರ ವಾದ ನಂಬಲರ್ಹವಲ್ಲ ಹಾಗೂ ಅದನ್ನು ಒಪ್ಪಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಝಮೀರ್ ಅಹ್ಮದ್ ಖಾನ್ ಅವರ ಆಯ್ಕೆ ಪ್ರಶ್ನಿಸಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರರೊಬ್ಬರು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

2023ರ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯ ಕಲ್ಪಿಸಿದ್ದು, ಇದು ಭ್ರಷ್ಟ ಚುನಾವಣಾ ವ್ಯವಹಾರ ಎಂದು ದೂರುದಾರರು ವಾದಿಸಿದ್ದರು.

ವಾದ ಆಲಿಸಿದ್ದ ಕರ್ನಾಟ ಹೈಕೋರ್ಟ್‌ ಇದು ತಪ್ಪು ನೀತಿಗೆ ಉದಾಹರಣೆಯಾಗಿರಬಹುದಾದರೂ, ಜನ ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟ ವ್ಯವಹಾರ ಎನ್ನಲಾಗದು ಎಂದು ಅಭಿಪ್ರಾಯಪಟ್ಟಿತ್ತು.

“ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಸಮಾಜ ಕಲ್ಯಾಣ ನೀತಿಗಳೆಂದು ಪರಿಗಣಿಸಬೇಕು. ಅವು ಆರ್ಥಿಕವಾಗಿ ಕಾರ್ಯ ಸಾಧುವೇ ಅಥವಾ ಇಲ್ಲವೇ ಎಂಬುವುದು ಬೇರೆ ವಿಚಾರ. ಭರವಸೆಗಳ ಜಾರಿಯಿಂದ ರಾಜ್ಯದ ಬೊಕ್ಕಸ ಹೇಗೆ ಬರಿದಾಗುತ್ತದೆ? ಅದು ಅಸಮರ್ಪಕ ಆಡಳಿತಕ್ಕೆ ಹೇಗೆ ಕಾರಣವಾಗುತ್ತದೆ? ಎಂಬುವುದನ್ನು ಉಳಿದ ಪಕ್ಷದವರು ತೋರಿಸಬೇಕು. ಪ್ರಕರಣದ ನಿರ್ದಿಷ್ಟ ಸಂದರ್ಭ ಸನ್ನಿವೇಶಗಳ ಅಡಿಯಲ್ಲಿ ಅವುಗಳನ್ನು ತಪ್ಪು ನೀತಿ ಎಂದು ಕರೆಯಬಹುದು. ಆದರೆ, ಭ್ರಷ್ಟ ನಡೆ ಎನ್ನಲಾಗದು” ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆ ಭ್ರಷ್ಟ ವ್ಯವಹಾರಕ್ಕೆ ಸಮವೇ? ಎಂಬ ಬಗ್ಗೆ ಕಾನೂನಿನ ಪ್ರಶ್ನೆಗೆ ಹೋಗಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಮೇಲ್ಮನವಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ದಿಢೀರ್ ಸಾವು: ತನಿಖೆಗೆ ಆಗ್ರಹಿಸಿದ ಜನವಾದಿ ಮಹಿಳಾ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...