Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...