Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...