Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...