Homeಮುಖಪುಟವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ಪ್ರಧಾನಿ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಿದೆ.

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಫಲಿತಾಂಶಗಳೊಂದಿಗೆ ಆಡಳಿತಾರೂಢ ಆದಿತ್ಯನಾಥ್ ಸರ್ಕಾರವು ದೊಡ್ಡ ಹಿನ್ನಡೆ ಅನುಭವಿಸಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ವಾರಣಾಸಿ ಮತ್ತು ಅಯೋಧ್ಯೆಯಲ್ಲಿ ಸಮಗ್ರ ಗೆಲುವು ಸಾಧಿಸಿದರೆ, ಮಾಯಾವತಿಯ ಬಿಎಸ್ಪಿ ಮತ್ತು ಅಜಿತ್ ಸಿಂಗ್ ಅವರ ಆರ್‌‌ಎಲ್‌ಡಿ ಮಥುರಾದಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರೂ ಜಿಲ್ಲೆಗಳು ಕೇಸರಿ ಪಕ್ಷದ ಕಾರ್ಯಸೂಚಿಯ ಪ್ರಮುಖವಾದ ಜಿಲ್ಲೆಗಳಾಗಿವೆ. ಆದಿತ್ಯನಾಥ್‌‌ ಸರ್ಕಾರದ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಈ ಮೂರು ಜಿಲ್ಲೆಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿತ್ತು. ಪ್ರಸ್ತುತ ಪಂಚಾಯತ್ ಚುನಾವಣೆಯ ಫಲಿತಾಂಶಗಳು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಸಾಬೀತಾಗಿದೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಲ್ಲಿ ಸಮಾಜವಾದಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ, ಬಿಎಸ್ಪಿಗೆ 5 ಸ್ಥಾನಗಳು, ಅಪ್ನಾ ದಳ (ಎಸ್) ಮೂರು ಸ್ಥಾನಗಳನ್ನು ಗಳಿಸಿವೆ. ಆಮ್ ಆದ್ಮಿ ಪಕ್ಷ ಕೂಡಾ ವಾರಣಾಸಿ ಜಿಲ್ಲೆಯಲ್ಲಿ ತನ್ನ ಖಾತೆಯನ್ನು ತೆರೆದಿದೆ.

ಮಥುರಾದಲ್ಲಿ ಬಿಜೆಪಿಯು ಭಾರಿ ಸೋಲನ್ನು ಅನುಭವಿಸಿದೆ. ಮಥುರಾದಲ್ಲಿ ಮಾಯಾವತಿಯ ಬಿಎಸ್ಪಿ 12 ಸ್ಥಾನಗಳನ್ನು ಮತ್ತು ಚೌಧರಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕ ದಳ 9 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ 8 ಸ್ಥಾನಗಳನ್ನು ಗೆದ್ದಿದೆ. ಅದೇ ರೀತಿ, ಎಸ್ಪಿ ಒಂದು ಸ್ಥಾನವನ್ನು ಪಡೆಯುವುದರೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಕಾಂಗ್ರೆಸ್ ಮಾತ್ರ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. 3 ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ.

ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷವು ಜಿಲ್ಲೆಯ 40 ಸ್ಥಾನಗಳಲ್ಲಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಕೇವಲ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದೆ. ಅಲ್ಲಿನ ಉಳಿದ ಸ್ಥಾನವನ್ನು ಪಕ್ಷೇತರರು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಅಯೋಧ್ಯೆ-ಮಥುರಾ-ಕಾಶಿಯ ಎಲ್ಲಾ ಮೂರು ಜಿಲ್ಲೆಗಳು ಯಾವಾಗಲೂ ಬಿಜೆಪಿಯ ರಾಜಕೀಯ ಕಾರ್ಯಸೂಚಿಯ ಕೇಂದ್ರಸ್ಥಾನವಾಗಿದೆ. ಬಿಜೆಪಿ ಈ ಪ್ರದೇಶಗಳ ಸುತ್ತ ಸುತ್ತುವ ರಾಜಕೀಯವನ್ನು ಯಾವಾಗಲೂ ಮಾಡುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದ್ದು, ಬಿಜೆಪಿ ಇದರ ಸಂಪೂರ್ಣ ಮನ್ನಣೆಯನ್ನು ಪಡೆದಿದೆ. ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾಗಿದ್ದು, ಸತತ 2 ಬಾರಿ ಗೆದ್ದು ಬಂದಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ನಂತರ ಬಿಜೆಪಿಯು ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ವಾರಣಾಸಿಯ ಜ್ಞಾನಪೂರಿ ಮಸೀದಿಯ ವಿಷಯದಲ್ಲಿ ವಿವಾದ ಹುಟ್ಟು ಹಾಕಿದೆ. ಆದರೆ ಮುಂದಿನ 8 ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಂಚಾಯತ್ ಚುನಾವಣೆಯ ಈ ಅವಮಾನಕರ ಸೋಲು ಆದಿತ್ಯನಾಥ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶುಬ ಸೂಚನೆ, ಸಮಾದಾನಕರ ಸಂಗತಿ. ವಿರೋಧ ಪಕ್ಷಗಳ ಎಲ್ಲಾ ನಾಯಕರು ತಮ್ಮ ಸ್ವಾರ್ತ ಮತ್ತು ಪ್ರತಿಷ್ಠೆಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ವರ್ತಿಸಿದರೆ, ವಿಧಾನಸಭಾ (ಉ.ಪ್ರದೇಶ) ಚುನಾವಣೆಯಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...