Homeಮುಖಪುಟವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ಪ್ರಧಾನಿ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಿದೆ.

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಫಲಿತಾಂಶಗಳೊಂದಿಗೆ ಆಡಳಿತಾರೂಢ ಆದಿತ್ಯನಾಥ್ ಸರ್ಕಾರವು ದೊಡ್ಡ ಹಿನ್ನಡೆ ಅನುಭವಿಸಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ವಾರಣಾಸಿ ಮತ್ತು ಅಯೋಧ್ಯೆಯಲ್ಲಿ ಸಮಗ್ರ ಗೆಲುವು ಸಾಧಿಸಿದರೆ, ಮಾಯಾವತಿಯ ಬಿಎಸ್ಪಿ ಮತ್ತು ಅಜಿತ್ ಸಿಂಗ್ ಅವರ ಆರ್‌‌ಎಲ್‌ಡಿ ಮಥುರಾದಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರೂ ಜಿಲ್ಲೆಗಳು ಕೇಸರಿ ಪಕ್ಷದ ಕಾರ್ಯಸೂಚಿಯ ಪ್ರಮುಖವಾದ ಜಿಲ್ಲೆಗಳಾಗಿವೆ. ಆದಿತ್ಯನಾಥ್‌‌ ಸರ್ಕಾರದ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಈ ಮೂರು ಜಿಲ್ಲೆಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿತ್ತು. ಪ್ರಸ್ತುತ ಪಂಚಾಯತ್ ಚುನಾವಣೆಯ ಫಲಿತಾಂಶಗಳು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಸಾಬೀತಾಗಿದೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಲ್ಲಿ ಸಮಾಜವಾದಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ, ಬಿಎಸ್ಪಿಗೆ 5 ಸ್ಥಾನಗಳು, ಅಪ್ನಾ ದಳ (ಎಸ್) ಮೂರು ಸ್ಥಾನಗಳನ್ನು ಗಳಿಸಿವೆ. ಆಮ್ ಆದ್ಮಿ ಪಕ್ಷ ಕೂಡಾ ವಾರಣಾಸಿ ಜಿಲ್ಲೆಯಲ್ಲಿ ತನ್ನ ಖಾತೆಯನ್ನು ತೆರೆದಿದೆ.

ಮಥುರಾದಲ್ಲಿ ಬಿಜೆಪಿಯು ಭಾರಿ ಸೋಲನ್ನು ಅನುಭವಿಸಿದೆ. ಮಥುರಾದಲ್ಲಿ ಮಾಯಾವತಿಯ ಬಿಎಸ್ಪಿ 12 ಸ್ಥಾನಗಳನ್ನು ಮತ್ತು ಚೌಧರಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕ ದಳ 9 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ 8 ಸ್ಥಾನಗಳನ್ನು ಗೆದ್ದಿದೆ. ಅದೇ ರೀತಿ, ಎಸ್ಪಿ ಒಂದು ಸ್ಥಾನವನ್ನು ಪಡೆಯುವುದರೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಕಾಂಗ್ರೆಸ್ ಮಾತ್ರ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. 3 ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ.

ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷವು ಜಿಲ್ಲೆಯ 40 ಸ್ಥಾನಗಳಲ್ಲಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಕೇವಲ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದೆ. ಅಲ್ಲಿನ ಉಳಿದ ಸ್ಥಾನವನ್ನು ಪಕ್ಷೇತರರು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಅಯೋಧ್ಯೆ-ಮಥುರಾ-ಕಾಶಿಯ ಎಲ್ಲಾ ಮೂರು ಜಿಲ್ಲೆಗಳು ಯಾವಾಗಲೂ ಬಿಜೆಪಿಯ ರಾಜಕೀಯ ಕಾರ್ಯಸೂಚಿಯ ಕೇಂದ್ರಸ್ಥಾನವಾಗಿದೆ. ಬಿಜೆಪಿ ಈ ಪ್ರದೇಶಗಳ ಸುತ್ತ ಸುತ್ತುವ ರಾಜಕೀಯವನ್ನು ಯಾವಾಗಲೂ ಮಾಡುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದ್ದು, ಬಿಜೆಪಿ ಇದರ ಸಂಪೂರ್ಣ ಮನ್ನಣೆಯನ್ನು ಪಡೆದಿದೆ. ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾಗಿದ್ದು, ಸತತ 2 ಬಾರಿ ಗೆದ್ದು ಬಂದಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ನಂತರ ಬಿಜೆಪಿಯು ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ವಾರಣಾಸಿಯ ಜ್ಞಾನಪೂರಿ ಮಸೀದಿಯ ವಿಷಯದಲ್ಲಿ ವಿವಾದ ಹುಟ್ಟು ಹಾಕಿದೆ. ಆದರೆ ಮುಂದಿನ 8 ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಂಚಾಯತ್ ಚುನಾವಣೆಯ ಈ ಅವಮಾನಕರ ಸೋಲು ಆದಿತ್ಯನಾಥ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶುಬ ಸೂಚನೆ, ಸಮಾದಾನಕರ ಸಂಗತಿ. ವಿರೋಧ ಪಕ್ಷಗಳ ಎಲ್ಲಾ ನಾಯಕರು ತಮ್ಮ ಸ್ವಾರ್ತ ಮತ್ತು ಪ್ರತಿಷ್ಠೆಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ವರ್ತಿಸಿದರೆ, ವಿಧಾನಸಭಾ (ಉ.ಪ್ರದೇಶ) ಚುನಾವಣೆಯಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...