Homeಮುಖಪುಟವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ಪ್ರಧಾನಿ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಿದೆ.

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಫಲಿತಾಂಶಗಳೊಂದಿಗೆ ಆಡಳಿತಾರೂಢ ಆದಿತ್ಯನಾಥ್ ಸರ್ಕಾರವು ದೊಡ್ಡ ಹಿನ್ನಡೆ ಅನುಭವಿಸಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ವಾರಣಾಸಿ ಮತ್ತು ಅಯೋಧ್ಯೆಯಲ್ಲಿ ಸಮಗ್ರ ಗೆಲುವು ಸಾಧಿಸಿದರೆ, ಮಾಯಾವತಿಯ ಬಿಎಸ್ಪಿ ಮತ್ತು ಅಜಿತ್ ಸಿಂಗ್ ಅವರ ಆರ್‌‌ಎಲ್‌ಡಿ ಮಥುರಾದಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರೂ ಜಿಲ್ಲೆಗಳು ಕೇಸರಿ ಪಕ್ಷದ ಕಾರ್ಯಸೂಚಿಯ ಪ್ರಮುಖವಾದ ಜಿಲ್ಲೆಗಳಾಗಿವೆ. ಆದಿತ್ಯನಾಥ್‌‌ ಸರ್ಕಾರದ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಈ ಮೂರು ಜಿಲ್ಲೆಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿತ್ತು. ಪ್ರಸ್ತುತ ಪಂಚಾಯತ್ ಚುನಾವಣೆಯ ಫಲಿತಾಂಶಗಳು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಸಾಬೀತಾಗಿದೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಲ್ಲಿ ಸಮಾಜವಾದಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ, ಬಿಎಸ್ಪಿಗೆ 5 ಸ್ಥಾನಗಳು, ಅಪ್ನಾ ದಳ (ಎಸ್) ಮೂರು ಸ್ಥಾನಗಳನ್ನು ಗಳಿಸಿವೆ. ಆಮ್ ಆದ್ಮಿ ಪಕ್ಷ ಕೂಡಾ ವಾರಣಾಸಿ ಜಿಲ್ಲೆಯಲ್ಲಿ ತನ್ನ ಖಾತೆಯನ್ನು ತೆರೆದಿದೆ.

ಮಥುರಾದಲ್ಲಿ ಬಿಜೆಪಿಯು ಭಾರಿ ಸೋಲನ್ನು ಅನುಭವಿಸಿದೆ. ಮಥುರಾದಲ್ಲಿ ಮಾಯಾವತಿಯ ಬಿಎಸ್ಪಿ 12 ಸ್ಥಾನಗಳನ್ನು ಮತ್ತು ಚೌಧರಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕ ದಳ 9 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ 8 ಸ್ಥಾನಗಳನ್ನು ಗೆದ್ದಿದೆ. ಅದೇ ರೀತಿ, ಎಸ್ಪಿ ಒಂದು ಸ್ಥಾನವನ್ನು ಪಡೆಯುವುದರೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಕಾಂಗ್ರೆಸ್ ಮಾತ್ರ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. 3 ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ.

ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷವು ಜಿಲ್ಲೆಯ 40 ಸ್ಥಾನಗಳಲ್ಲಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಕೇವಲ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದೆ. ಅಲ್ಲಿನ ಉಳಿದ ಸ್ಥಾನವನ್ನು ಪಕ್ಷೇತರರು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಅಯೋಧ್ಯೆ-ಮಥುರಾ-ಕಾಶಿಯ ಎಲ್ಲಾ ಮೂರು ಜಿಲ್ಲೆಗಳು ಯಾವಾಗಲೂ ಬಿಜೆಪಿಯ ರಾಜಕೀಯ ಕಾರ್ಯಸೂಚಿಯ ಕೇಂದ್ರಸ್ಥಾನವಾಗಿದೆ. ಬಿಜೆಪಿ ಈ ಪ್ರದೇಶಗಳ ಸುತ್ತ ಸುತ್ತುವ ರಾಜಕೀಯವನ್ನು ಯಾವಾಗಲೂ ಮಾಡುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದ್ದು, ಬಿಜೆಪಿ ಇದರ ಸಂಪೂರ್ಣ ಮನ್ನಣೆಯನ್ನು ಪಡೆದಿದೆ. ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾಗಿದ್ದು, ಸತತ 2 ಬಾರಿ ಗೆದ್ದು ಬಂದಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ನಂತರ ಬಿಜೆಪಿಯು ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ವಾರಣಾಸಿಯ ಜ್ಞಾನಪೂರಿ ಮಸೀದಿಯ ವಿಷಯದಲ್ಲಿ ವಿವಾದ ಹುಟ್ಟು ಹಾಕಿದೆ. ಆದರೆ ಮುಂದಿನ 8 ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಂಚಾಯತ್ ಚುನಾವಣೆಯ ಈ ಅವಮಾನಕರ ಸೋಲು ಆದಿತ್ಯನಾಥ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶುಬ ಸೂಚನೆ, ಸಮಾದಾನಕರ ಸಂಗತಿ. ವಿರೋಧ ಪಕ್ಷಗಳ ಎಲ್ಲಾ ನಾಯಕರು ತಮ್ಮ ಸ್ವಾರ್ತ ಮತ್ತು ಪ್ರತಿಷ್ಠೆಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ವರ್ತಿಸಿದರೆ, ವಿಧಾನಸಭಾ (ಉ.ಪ್ರದೇಶ) ಚುನಾವಣೆಯಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...