Homeಮುಖಪುಟವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ಪ್ರಧಾನಿ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಿದೆ.

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಫಲಿತಾಂಶಗಳೊಂದಿಗೆ ಆಡಳಿತಾರೂಢ ಆದಿತ್ಯನಾಥ್ ಸರ್ಕಾರವು ದೊಡ್ಡ ಹಿನ್ನಡೆ ಅನುಭವಿಸಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ವಾರಣಾಸಿ ಮತ್ತು ಅಯೋಧ್ಯೆಯಲ್ಲಿ ಸಮಗ್ರ ಗೆಲುವು ಸಾಧಿಸಿದರೆ, ಮಾಯಾವತಿಯ ಬಿಎಸ್ಪಿ ಮತ್ತು ಅಜಿತ್ ಸಿಂಗ್ ಅವರ ಆರ್‌‌ಎಲ್‌ಡಿ ಮಥುರಾದಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರೂ ಜಿಲ್ಲೆಗಳು ಕೇಸರಿ ಪಕ್ಷದ ಕಾರ್ಯಸೂಚಿಯ ಪ್ರಮುಖವಾದ ಜಿಲ್ಲೆಗಳಾಗಿವೆ. ಆದಿತ್ಯನಾಥ್‌‌ ಸರ್ಕಾರದ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಈ ಮೂರು ಜಿಲ್ಲೆಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿತ್ತು. ಪ್ರಸ್ತುತ ಪಂಚಾಯತ್ ಚುನಾವಣೆಯ ಫಲಿತಾಂಶಗಳು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಸಾಬೀತಾಗಿದೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾದ ವಾರಣಾಸಿ ಜಿಲ್ಲಾ ಪಂಚಾಯಿತಿಯ 40 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಲ್ಲಿ ಸಮಾಜವಾದಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ, ಬಿಎಸ್ಪಿಗೆ 5 ಸ್ಥಾನಗಳು, ಅಪ್ನಾ ದಳ (ಎಸ್) ಮೂರು ಸ್ಥಾನಗಳನ್ನು ಗಳಿಸಿವೆ. ಆಮ್ ಆದ್ಮಿ ಪಕ್ಷ ಕೂಡಾ ವಾರಣಾಸಿ ಜಿಲ್ಲೆಯಲ್ಲಿ ತನ್ನ ಖಾತೆಯನ್ನು ತೆರೆದಿದೆ.

ಮಥುರಾದಲ್ಲಿ ಬಿಜೆಪಿಯು ಭಾರಿ ಸೋಲನ್ನು ಅನುಭವಿಸಿದೆ. ಮಥುರಾದಲ್ಲಿ ಮಾಯಾವತಿಯ ಬಿಎಸ್ಪಿ 12 ಸ್ಥಾನಗಳನ್ನು ಮತ್ತು ಚೌಧರಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕ ದಳ 9 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ 8 ಸ್ಥಾನಗಳನ್ನು ಗೆದ್ದಿದೆ. ಅದೇ ರೀತಿ, ಎಸ್ಪಿ ಒಂದು ಸ್ಥಾನವನ್ನು ಪಡೆಯುವುದರೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಕಾಂಗ್ರೆಸ್ ಮಾತ್ರ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. 3 ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ.

ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷವು ಜಿಲ್ಲೆಯ 40 ಸ್ಥಾನಗಳಲ್ಲಿ 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಕೇವಲ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದೆ. ಅಲ್ಲಿನ ಉಳಿದ ಸ್ಥಾನವನ್ನು ಪಕ್ಷೇತರರು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಅಯೋಧ್ಯೆ-ಮಥುರಾ-ಕಾಶಿಯ ಎಲ್ಲಾ ಮೂರು ಜಿಲ್ಲೆಗಳು ಯಾವಾಗಲೂ ಬಿಜೆಪಿಯ ರಾಜಕೀಯ ಕಾರ್ಯಸೂಚಿಯ ಕೇಂದ್ರಸ್ಥಾನವಾಗಿದೆ. ಬಿಜೆಪಿ ಈ ಪ್ರದೇಶಗಳ ಸುತ್ತ ಸುತ್ತುವ ರಾಜಕೀಯವನ್ನು ಯಾವಾಗಲೂ ಮಾಡುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದ್ದು, ಬಿಜೆಪಿ ಇದರ ಸಂಪೂರ್ಣ ಮನ್ನಣೆಯನ್ನು ಪಡೆದಿದೆ. ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯ ಸಂಸದೀಯ ಕ್ಷೇತ್ರವಾಗಿದ್ದು, ಸತತ 2 ಬಾರಿ ಗೆದ್ದು ಬಂದಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ನಂತರ ಬಿಜೆಪಿಯು ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ವಾರಣಾಸಿಯ ಜ್ಞಾನಪೂರಿ ಮಸೀದಿಯ ವಿಷಯದಲ್ಲಿ ವಿವಾದ ಹುಟ್ಟು ಹಾಕಿದೆ. ಆದರೆ ಮುಂದಿನ 8 ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಂಚಾಯತ್ ಚುನಾವಣೆಯ ಈ ಅವಮಾನಕರ ಸೋಲು ಆದಿತ್ಯನಾಥ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶುಬ ಸೂಚನೆ, ಸಮಾದಾನಕರ ಸಂಗತಿ. ವಿರೋಧ ಪಕ್ಷಗಳ ಎಲ್ಲಾ ನಾಯಕರು ತಮ್ಮ ಸ್ವಾರ್ತ ಮತ್ತು ಪ್ರತಿಷ್ಠೆಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ವರ್ತಿಸಿದರೆ, ವಿಧಾನಸಭಾ (ಉ.ಪ್ರದೇಶ) ಚುನಾವಣೆಯಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...