Homeಕರ್ನಾಟಕಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

ಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

- Advertisement -
- Advertisement -

ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕೆಲವರು ಪರಾರಿ ಆಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಮೂರು ತಿಂಗಳಿಂದ ಸಕ್ರಿಯವಾಗಿ ಈ ಕಾಲ್ ಸೆಂಟರ್‌ ಮತದಾರರಿಗೆ ನಿರಂತರವಾಗಿ ಕರೆ ಮಾಡಿ ಬಿಜೆಪಿಗೆ ಮತ ಹಾಕುವಂತೆ ಮನವೊಲಿಕೆ ಮಾಡುತ್ತಿತ್ತು. ಮತದಾನದ ದಿನವಾದ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಯುವತಿಯರನ್ನು ಸೆಂಟರ್‌ಗೆ ಕರೆ ತಂದು ಅವರಿಂದ ಮತದಾರರಿಗೆ ಕರೆ ಮಾಡಿಸಲಾಗಿದೆ. ಕಾಂಗ್ರೆಸ್‌ಗೆ ಮತ ಹಾಕುವುದನ್ನು ತಪ್ಪಿಸುವುದನ್ನೇ ಟಾರ್ಗೆಟ್ ಮಾಡಿಕೊಂಡು ಮನವೊಲಿಕೆ ಮಾಡಲಾಗುತ್ತಿತ್ತು ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಮತದಾನದ ಕಾರಣ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಮತಚಲಾಯಿಸಲು ಹೋಗುವುದಾಗಿ ಹೇಳಿದ್ದರು. ಕಾಲ್ ಸೆಂಟರ್‌ನಲ್ಲಿಯೇ ಮತ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ನಂಬಿಸಿ ಕರೆ ತರಲಾಗಿತ್ತು. ಆ ಬಳಿಕ‌‌‌ ಅವರಿಂದ ಕರೆ ಮಾಡಿಸಿದ್ದಾರೆ ಎಂದು‌ ಕಾಂಗ್ರೆಸ್ಸಿಗರು ದೂರಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ಮಾತಿನ ಘರ್ಷಣೆ

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ.

ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಗಂಗಾವತಿ: ಕೆಆರ್‌ಪಿಪಿ- ಬಿಜೆಪಿ ಕಾರ್ಯಕರ್ತರ ನಡುವೆ ಜಗಳ

ಗಂಗಾವತಿ ನಗರದ ಎಪಿಎಂಸಿಯ 159 ಹಾಗೂ160 ಮತಗಟ್ಟೆ ಬಳಿ ಬುಧವಾರ ಕೆಆರ್‌ಪಿಪಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬುಧವಾರ ಮತದಾನ ಸಮಯದಲ್ಲಿ ಮಾತಿನ ಚಕಮಕಿ ನಡೆದಿದೆ.

ಮತಗಟ್ಟೆಯಲ್ಲಿ ಕೆಆರ್‌ಪಿಪಿ ಪಕ್ಷದ ಮಹಿಳಾ ಏಜೆಂಟ್ ತಮ್ಮ ಸೀರೆಗೆ ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್ ಧರಿಸಿದ್ದಾರೆ ಎಂದು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಪರವಾನಗಿ ಪಡೆದು ಧರಿಸಲಾಗಿದೆ ಎಂದು ಏಜೆಂಟ್ ತಿಳಿಸಿದ್ದಾರೆ. ಈ ಕಾರಣಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....