Homeಕರ್ನಾಟಕಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

ಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

- Advertisement -
- Advertisement -

ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕೆಲವರು ಪರಾರಿ ಆಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಮೂರು ತಿಂಗಳಿಂದ ಸಕ್ರಿಯವಾಗಿ ಈ ಕಾಲ್ ಸೆಂಟರ್‌ ಮತದಾರರಿಗೆ ನಿರಂತರವಾಗಿ ಕರೆ ಮಾಡಿ ಬಿಜೆಪಿಗೆ ಮತ ಹಾಕುವಂತೆ ಮನವೊಲಿಕೆ ಮಾಡುತ್ತಿತ್ತು. ಮತದಾನದ ದಿನವಾದ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಯುವತಿಯರನ್ನು ಸೆಂಟರ್‌ಗೆ ಕರೆ ತಂದು ಅವರಿಂದ ಮತದಾರರಿಗೆ ಕರೆ ಮಾಡಿಸಲಾಗಿದೆ. ಕಾಂಗ್ರೆಸ್‌ಗೆ ಮತ ಹಾಕುವುದನ್ನು ತಪ್ಪಿಸುವುದನ್ನೇ ಟಾರ್ಗೆಟ್ ಮಾಡಿಕೊಂಡು ಮನವೊಲಿಕೆ ಮಾಡಲಾಗುತ್ತಿತ್ತು ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಮತದಾನದ ಕಾರಣ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಮತಚಲಾಯಿಸಲು ಹೋಗುವುದಾಗಿ ಹೇಳಿದ್ದರು. ಕಾಲ್ ಸೆಂಟರ್‌ನಲ್ಲಿಯೇ ಮತ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ನಂಬಿಸಿ ಕರೆ ತರಲಾಗಿತ್ತು. ಆ ಬಳಿಕ‌‌‌ ಅವರಿಂದ ಕರೆ ಮಾಡಿಸಿದ್ದಾರೆ ಎಂದು‌ ಕಾಂಗ್ರೆಸ್ಸಿಗರು ದೂರಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ಮಾತಿನ ಘರ್ಷಣೆ

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ.

ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಗಂಗಾವತಿ: ಕೆಆರ್‌ಪಿಪಿ- ಬಿಜೆಪಿ ಕಾರ್ಯಕರ್ತರ ನಡುವೆ ಜಗಳ

ಗಂಗಾವತಿ ನಗರದ ಎಪಿಎಂಸಿಯ 159 ಹಾಗೂ160 ಮತಗಟ್ಟೆ ಬಳಿ ಬುಧವಾರ ಕೆಆರ್‌ಪಿಪಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬುಧವಾರ ಮತದಾನ ಸಮಯದಲ್ಲಿ ಮಾತಿನ ಚಕಮಕಿ ನಡೆದಿದೆ.

ಮತಗಟ್ಟೆಯಲ್ಲಿ ಕೆಆರ್‌ಪಿಪಿ ಪಕ್ಷದ ಮಹಿಳಾ ಏಜೆಂಟ್ ತಮ್ಮ ಸೀರೆಗೆ ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್ ಧರಿಸಿದ್ದಾರೆ ಎಂದು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಪರವಾನಗಿ ಪಡೆದು ಧರಿಸಲಾಗಿದೆ ಎಂದು ಏಜೆಂಟ್ ತಿಳಿಸಿದ್ದಾರೆ. ಈ ಕಾರಣಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...