Homeಮುಖಪುಟಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
- Advertisement -

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ: ಮಾಜಿ ಮುಖ್ಯ ಚುನಾವಣಾ ಆಯುಕ್ತರೊಬ್ಬರ ಆಗ್ರಹ
 
ದೇಶದಲ್ಲಿ ಚುನಾವಣಾ ಸುಧಾರಣೆಗಳನ್ನು ತ್ವರಿತವಾಗಿ ಜಾರಿ ಮಾಡಬೇಕಿದೆ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಈ ಕೃಷ್ಣಮೂರ್ತಿ, ರಾಷ್ಟ್ರೀಯ ಚುನಾವಣಾ ನಿದಿಯೊಂದನ್ನು ಸ್ಥಾಪಿಸಬೇಕು ಮತ್ತು ಕಾರ್ಪೋರೇಟ್‍ಗಳು ಪಕ್ಷಗಳಿಗೆ ನೀಡುವ ಫಂಡಿಂಗ್‍ಗೆ ನಿಷೇಧ ಹಾಕಬೇಕು ಎಂದು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳವಾರ ಹೈದರಾಬಾದಿನಲ್ಲಿ ಮಾತನಾಡಿದ ಅವರು, ‘ಈ ರಾಷ್ಟ್ರೀಯ ನಿಧಿಗೆ ಜನರಿಂದ ಪಾರದರ್ಶಕವಾಗಿ ದೇಣಿಗೆ ಪಡೆಯಬೇಕು. ಚುನಾವಣಾ ಆಯೋಗವು ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ನಿಧಿಯನ್ನು ಚುನಾವಣಾ ಕಾರ್ಯಕ್ಕೆ ಹೇಗೆ ಬಳಸಬಹುದು ಎಂದು ನಿಯಮ ರೂಪಿಸಬೇಕು. ಕಾರ್ಪೋರೇಟ್ ಕಂಪನಿಗಳು ಈಗ ಪಕ್ಷಗಳಿಗೆ ನೀಡುತ್ತಿರುವ ಬೃಹತ್ ನಿಧಿಗಳು ಗೌಪ್ಯವಾಗಿದ್ದು ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ ಎಂದಿದ್ದಾರೆ.

2004ರಲ್ಲಿ ಚುನಾವಣಾ ನಿರ್ವಹಣೆ ಜವಾಬ್ದಾರಿ ನಿರ್ವಹಿಸಿದ್ದ ಕೃಷ್ಣಮೂರ್ತಿ, ಈ ಸಲದ ಚುನಾವಣೆಯಲ್ಲಿ 60 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ ಎಂಬ ಚಿಂತಕರ ಕೂಟವೊಂದರ ವರದಿಯ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸದರು. ‘ಪಕ್ಷಗಳು ಮತ್ತು ಅಭ್ಯರ್ಥಿಗಳು ಹೆಚ್ಚಾಗಿರುವವುದರಿಂದ ಚುನಾವಣಾ ವೆಚ್ಚವೂ ಏರಿರಬಹುದು’ ಎಂದು ಅವರು ಅಭಿಪ್ರಾಯ ಪಟ್ಟರು.

ಇದಕ್ಕಿಂತ ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವೊಂದು ಪಕ್ಷವೂ ಚುನಾವಣಾ ಸುಧಾರಣೆಗಳ ಬಗ್ಗೆ ಗಂಭೀರ ನಿಲುವನ್ನೇ ಹೊಂದಿಲ್ಲದಿರುವುದು ಆತಂಕದ ವಿಷಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಈ ಚುನಾವಣಾ ವ್ಯವಸ್ಥೆಯ ಬಗ್ಗೇ ಅವರಿಗೆ (ರಾಜಕಾರಣಿಗಳಿಗೆ) ವೈಯಕ್ತಿಕವಾದ ಸಂತೋಷವಿಲ್ಲ. ಆದರೆ ಒಟ್ಟಾಗಿ, ಈಗಿರುವ ಯಥಾಸ್ಥಿತಿಯೇ ಮುಂದುವರೆಯಲೆಂದು ಅವರೆಲ್ಲ ಬಯಸಿದ್ದಾರೆ’ ಎಂದೂ ಕೃಷ್ಣಮೂರ್ತಿ ಟೀಕಿಸಿದರು. ವಿ.ವಿ ಪ್ಯಾಟ್‍ಗಳಿಲ್ಲದೆಯೂ ಇವಿಯಂಗಳು ವಿಶ್ವಾಸಾರ್ಹ ಎಂದು ತಮ್ಮ ಹಿಂದಿನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...