Homeಮುಖಪುಟಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
- Advertisement -

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ: ಮಾಜಿ ಮುಖ್ಯ ಚುನಾವಣಾ ಆಯುಕ್ತರೊಬ್ಬರ ಆಗ್ರಹ
 
ದೇಶದಲ್ಲಿ ಚುನಾವಣಾ ಸುಧಾರಣೆಗಳನ್ನು ತ್ವರಿತವಾಗಿ ಜಾರಿ ಮಾಡಬೇಕಿದೆ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಈ ಕೃಷ್ಣಮೂರ್ತಿ, ರಾಷ್ಟ್ರೀಯ ಚುನಾವಣಾ ನಿದಿಯೊಂದನ್ನು ಸ್ಥಾಪಿಸಬೇಕು ಮತ್ತು ಕಾರ್ಪೋರೇಟ್‍ಗಳು ಪಕ್ಷಗಳಿಗೆ ನೀಡುವ ಫಂಡಿಂಗ್‍ಗೆ ನಿಷೇಧ ಹಾಕಬೇಕು ಎಂದು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳವಾರ ಹೈದರಾಬಾದಿನಲ್ಲಿ ಮಾತನಾಡಿದ ಅವರು, ‘ಈ ರಾಷ್ಟ್ರೀಯ ನಿಧಿಗೆ ಜನರಿಂದ ಪಾರದರ್ಶಕವಾಗಿ ದೇಣಿಗೆ ಪಡೆಯಬೇಕು. ಚುನಾವಣಾ ಆಯೋಗವು ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ನಿಧಿಯನ್ನು ಚುನಾವಣಾ ಕಾರ್ಯಕ್ಕೆ ಹೇಗೆ ಬಳಸಬಹುದು ಎಂದು ನಿಯಮ ರೂಪಿಸಬೇಕು. ಕಾರ್ಪೋರೇಟ್ ಕಂಪನಿಗಳು ಈಗ ಪಕ್ಷಗಳಿಗೆ ನೀಡುತ್ತಿರುವ ಬೃಹತ್ ನಿಧಿಗಳು ಗೌಪ್ಯವಾಗಿದ್ದು ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ ಎಂದಿದ್ದಾರೆ.

2004ರಲ್ಲಿ ಚುನಾವಣಾ ನಿರ್ವಹಣೆ ಜವಾಬ್ದಾರಿ ನಿರ್ವಹಿಸಿದ್ದ ಕೃಷ್ಣಮೂರ್ತಿ, ಈ ಸಲದ ಚುನಾವಣೆಯಲ್ಲಿ 60 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ ಎಂಬ ಚಿಂತಕರ ಕೂಟವೊಂದರ ವರದಿಯ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸದರು. ‘ಪಕ್ಷಗಳು ಮತ್ತು ಅಭ್ಯರ್ಥಿಗಳು ಹೆಚ್ಚಾಗಿರುವವುದರಿಂದ ಚುನಾವಣಾ ವೆಚ್ಚವೂ ಏರಿರಬಹುದು’ ಎಂದು ಅವರು ಅಭಿಪ್ರಾಯ ಪಟ್ಟರು.

ಇದಕ್ಕಿಂತ ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವೊಂದು ಪಕ್ಷವೂ ಚುನಾವಣಾ ಸುಧಾರಣೆಗಳ ಬಗ್ಗೆ ಗಂಭೀರ ನಿಲುವನ್ನೇ ಹೊಂದಿಲ್ಲದಿರುವುದು ಆತಂಕದ ವಿಷಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಈ ಚುನಾವಣಾ ವ್ಯವಸ್ಥೆಯ ಬಗ್ಗೇ ಅವರಿಗೆ (ರಾಜಕಾರಣಿಗಳಿಗೆ) ವೈಯಕ್ತಿಕವಾದ ಸಂತೋಷವಿಲ್ಲ. ಆದರೆ ಒಟ್ಟಾಗಿ, ಈಗಿರುವ ಯಥಾಸ್ಥಿತಿಯೇ ಮುಂದುವರೆಯಲೆಂದು ಅವರೆಲ್ಲ ಬಯಸಿದ್ದಾರೆ’ ಎಂದೂ ಕೃಷ್ಣಮೂರ್ತಿ ಟೀಕಿಸಿದರು. ವಿ.ವಿ ಪ್ಯಾಟ್‍ಗಳಿಲ್ಲದೆಯೂ ಇವಿಯಂಗಳು ವಿಶ್ವಾಸಾರ್ಹ ಎಂದು ತಮ್ಮ ಹಿಂದಿನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...