Homeಮುಖಪುಟಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
- Advertisement -

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ: ಮಾಜಿ ಮುಖ್ಯ ಚುನಾವಣಾ ಆಯುಕ್ತರೊಬ್ಬರ ಆಗ್ರಹ
 
ದೇಶದಲ್ಲಿ ಚುನಾವಣಾ ಸುಧಾರಣೆಗಳನ್ನು ತ್ವರಿತವಾಗಿ ಜಾರಿ ಮಾಡಬೇಕಿದೆ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಈ ಕೃಷ್ಣಮೂರ್ತಿ, ರಾಷ್ಟ್ರೀಯ ಚುನಾವಣಾ ನಿದಿಯೊಂದನ್ನು ಸ್ಥಾಪಿಸಬೇಕು ಮತ್ತು ಕಾರ್ಪೋರೇಟ್‍ಗಳು ಪಕ್ಷಗಳಿಗೆ ನೀಡುವ ಫಂಡಿಂಗ್‍ಗೆ ನಿಷೇಧ ಹಾಕಬೇಕು ಎಂದು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳವಾರ ಹೈದರಾಬಾದಿನಲ್ಲಿ ಮಾತನಾಡಿದ ಅವರು, ‘ಈ ರಾಷ್ಟ್ರೀಯ ನಿಧಿಗೆ ಜನರಿಂದ ಪಾರದರ್ಶಕವಾಗಿ ದೇಣಿಗೆ ಪಡೆಯಬೇಕು. ಚುನಾವಣಾ ಆಯೋಗವು ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ನಿಧಿಯನ್ನು ಚುನಾವಣಾ ಕಾರ್ಯಕ್ಕೆ ಹೇಗೆ ಬಳಸಬಹುದು ಎಂದು ನಿಯಮ ರೂಪಿಸಬೇಕು. ಕಾರ್ಪೋರೇಟ್ ಕಂಪನಿಗಳು ಈಗ ಪಕ್ಷಗಳಿಗೆ ನೀಡುತ್ತಿರುವ ಬೃಹತ್ ನಿಧಿಗಳು ಗೌಪ್ಯವಾಗಿದ್ದು ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ ಎಂದಿದ್ದಾರೆ.

2004ರಲ್ಲಿ ಚುನಾವಣಾ ನಿರ್ವಹಣೆ ಜವಾಬ್ದಾರಿ ನಿರ್ವಹಿಸಿದ್ದ ಕೃಷ್ಣಮೂರ್ತಿ, ಈ ಸಲದ ಚುನಾವಣೆಯಲ್ಲಿ 60 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ ಎಂಬ ಚಿಂತಕರ ಕೂಟವೊಂದರ ವರದಿಯ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸದರು. ‘ಪಕ್ಷಗಳು ಮತ್ತು ಅಭ್ಯರ್ಥಿಗಳು ಹೆಚ್ಚಾಗಿರುವವುದರಿಂದ ಚುನಾವಣಾ ವೆಚ್ಚವೂ ಏರಿರಬಹುದು’ ಎಂದು ಅವರು ಅಭಿಪ್ರಾಯ ಪಟ್ಟರು.

ಇದಕ್ಕಿಂತ ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವೊಂದು ಪಕ್ಷವೂ ಚುನಾವಣಾ ಸುಧಾರಣೆಗಳ ಬಗ್ಗೆ ಗಂಭೀರ ನಿಲುವನ್ನೇ ಹೊಂದಿಲ್ಲದಿರುವುದು ಆತಂಕದ ವಿಷಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಈ ಚುನಾವಣಾ ವ್ಯವಸ್ಥೆಯ ಬಗ್ಗೇ ಅವರಿಗೆ (ರಾಜಕಾರಣಿಗಳಿಗೆ) ವೈಯಕ್ತಿಕವಾದ ಸಂತೋಷವಿಲ್ಲ. ಆದರೆ ಒಟ್ಟಾಗಿ, ಈಗಿರುವ ಯಥಾಸ್ಥಿತಿಯೇ ಮುಂದುವರೆಯಲೆಂದು ಅವರೆಲ್ಲ ಬಯಸಿದ್ದಾರೆ’ ಎಂದೂ ಕೃಷ್ಣಮೂರ್ತಿ ಟೀಕಿಸಿದರು. ವಿ.ವಿ ಪ್ಯಾಟ್‍ಗಳಿಲ್ಲದೆಯೂ ಇವಿಯಂಗಳು ವಿಶ್ವಾಸಾರ್ಹ ಎಂದು ತಮ್ಮ ಹಿಂದಿನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...