Homeಮುಖಪುಟಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
- Advertisement -

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ: ಮಾಜಿ ಮುಖ್ಯ ಚುನಾವಣಾ ಆಯುಕ್ತರೊಬ್ಬರ ಆಗ್ರಹ
 
ದೇಶದಲ್ಲಿ ಚುನಾವಣಾ ಸುಧಾರಣೆಗಳನ್ನು ತ್ವರಿತವಾಗಿ ಜಾರಿ ಮಾಡಬೇಕಿದೆ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಈ ಕೃಷ್ಣಮೂರ್ತಿ, ರಾಷ್ಟ್ರೀಯ ಚುನಾವಣಾ ನಿದಿಯೊಂದನ್ನು ಸ್ಥಾಪಿಸಬೇಕು ಮತ್ತು ಕಾರ್ಪೋರೇಟ್‍ಗಳು ಪಕ್ಷಗಳಿಗೆ ನೀಡುವ ಫಂಡಿಂಗ್‍ಗೆ ನಿಷೇಧ ಹಾಕಬೇಕು ಎಂದು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳವಾರ ಹೈದರಾಬಾದಿನಲ್ಲಿ ಮಾತನಾಡಿದ ಅವರು, ‘ಈ ರಾಷ್ಟ್ರೀಯ ನಿಧಿಗೆ ಜನರಿಂದ ಪಾರದರ್ಶಕವಾಗಿ ದೇಣಿಗೆ ಪಡೆಯಬೇಕು. ಚುನಾವಣಾ ಆಯೋಗವು ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ನಿಧಿಯನ್ನು ಚುನಾವಣಾ ಕಾರ್ಯಕ್ಕೆ ಹೇಗೆ ಬಳಸಬಹುದು ಎಂದು ನಿಯಮ ರೂಪಿಸಬೇಕು. ಕಾರ್ಪೋರೇಟ್ ಕಂಪನಿಗಳು ಈಗ ಪಕ್ಷಗಳಿಗೆ ನೀಡುತ್ತಿರುವ ಬೃಹತ್ ನಿಧಿಗಳು ಗೌಪ್ಯವಾಗಿದ್ದು ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ ಎಂದಿದ್ದಾರೆ.

2004ರಲ್ಲಿ ಚುನಾವಣಾ ನಿರ್ವಹಣೆ ಜವಾಬ್ದಾರಿ ನಿರ್ವಹಿಸಿದ್ದ ಕೃಷ್ಣಮೂರ್ತಿ, ಈ ಸಲದ ಚುನಾವಣೆಯಲ್ಲಿ 60 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ ಎಂಬ ಚಿಂತಕರ ಕೂಟವೊಂದರ ವರದಿಯ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸದರು. ‘ಪಕ್ಷಗಳು ಮತ್ತು ಅಭ್ಯರ್ಥಿಗಳು ಹೆಚ್ಚಾಗಿರುವವುದರಿಂದ ಚುನಾವಣಾ ವೆಚ್ಚವೂ ಏರಿರಬಹುದು’ ಎಂದು ಅವರು ಅಭಿಪ್ರಾಯ ಪಟ್ಟರು.

ಇದಕ್ಕಿಂತ ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವೊಂದು ಪಕ್ಷವೂ ಚುನಾವಣಾ ಸುಧಾರಣೆಗಳ ಬಗ್ಗೆ ಗಂಭೀರ ನಿಲುವನ್ನೇ ಹೊಂದಿಲ್ಲದಿರುವುದು ಆತಂಕದ ವಿಷಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಈ ಚುನಾವಣಾ ವ್ಯವಸ್ಥೆಯ ಬಗ್ಗೇ ಅವರಿಗೆ (ರಾಜಕಾರಣಿಗಳಿಗೆ) ವೈಯಕ್ತಿಕವಾದ ಸಂತೋಷವಿಲ್ಲ. ಆದರೆ ಒಟ್ಟಾಗಿ, ಈಗಿರುವ ಯಥಾಸ್ಥಿತಿಯೇ ಮುಂದುವರೆಯಲೆಂದು ಅವರೆಲ್ಲ ಬಯಸಿದ್ದಾರೆ’ ಎಂದೂ ಕೃಷ್ಣಮೂರ್ತಿ ಟೀಕಿಸಿದರು. ವಿ.ವಿ ಪ್ಯಾಟ್‍ಗಳಿಲ್ಲದೆಯೂ ಇವಿಯಂಗಳು ವಿಶ್ವಾಸಾರ್ಹ ಎಂದು ತಮ್ಮ ಹಿಂದಿನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...