HomeಮುಖಪುಟElection Results 2021 Live Updates: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಇದುವರೆಗೂ

Election Results 2021 Live Updates: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಇದುವರೆಗೂ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಬಹುನಿರೀಕ್ಷಿತ ಪಂಚರಾಜ್ಯ ಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳು ತಮಿಳುನಾಡಿನಲ್ಲಿ ಮಾತ್ರ ಆಡಳಿತ ಬದಲಾವಣೆ ಎಂದು ಹೇಳಿದ್ದವು. ಇದರ ಜೊತೆಗೆ ರಾಜ್ಯದ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆಯ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಪ್ರಸ್ತುತ ಎಣಿಕೆಯಂತೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ಭಾರಿ ಜಿದ್ದಾಜಿದ್ದಿನ ಹೋರಾಟದಲ್ಲಿದೆಯಾದರೂ ಟಿಎಂಸಿ ಪಕ್ಷ ಮುನ್ನಡೆಯಲ್ಲಿದೆ. ಕೇರಳದಲ್ಲಿ ನಿರೀಕ್ಷೆಯಂತೆ ಎಡಪಕ್ಷಗಳ ಒಕ್ಕೂಟ ಮುನ್ನಡೆಯಲ್ಲಿದೆ. ಆದರೆ ವಿಶೇಷವೇನೆಂದರೆ ಬಿಜೆಪಿ ಅಲ್ಲಿ ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ತಮಿಳುನಾಡಿನಲ್ಲಿ ಆಡಳಿತ ಪಕ್ಷವಾದ ಎಐಎಡಿಎಂಕೆ ಈ ಭಾರಿ ಮುಗ್ಗರಿಸಲಿದೆ ಎಂದು ಸಮೀಕ್ಷೆಗಳು ತಿಳಿಸಿದ್ದವು, ಅದರಂತೆ ಅದು ಹಿನ್ನಡೆಯಲ್ಲಿದ್ದು, ವಿರೋಧ ಪಕ್ಷವಾದ ಡಿಎಂಕೆ ಭಾರಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಅಸ್ಸಾಂನಲ್ಲಿ ನಿರೀಕ್ಷೆಯಂತೆ ಬಿಜೆಪಿ ಮುನ್ನಡೆಯಲ್ಲಿದೆ. ಪುದುಚೇರಿಯಲ್ಲಿ ಇತ್ತೀಚೆಗೆ ಬಿಜೆಪಿ ಆಪರೇಷನ್ ಕಮಲ ಮೂಲಕ ಅಲ್ಲಿನ ಸರ್ಕಾರವನ್ನು ಕೆಡವಿತ್ತು. ಆದರೆ ಅಲ್ಲಿಯೂ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದ್ದು ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಒಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಪಶ್ಚಿಮಬಂಗಾಳ

ರಾಜ್ಯದಲ್ಲಿ ಒಟ್ಟು 292 ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯಲಿದೆ. ಅದರಲ್ಲಿ ಇದುವರೆಗೂ 238 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಟಿಎಂಸಿ 150 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ 86 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಇತರೆ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ:ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಕೇರಳ

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ ಎಲ್‌ಡಿಎಫ್‌ 94 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್‌ 45 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ತಮಿಳುನಾಡು

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 227 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಡಿಎಂಕೆ ನೇತೃತ್ವದ ಒಕ್ಕೂಟವು 129 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಎಐಎಡಿಎಂಕೆ ನೇತೃತ್ವದ ಒಕ್ಕೂಟ 98 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.(ಇದರಲ್ಲೇ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ)
ಕಮಲ್ ಹಾಸನ್ ನೇತೃತ್ವದ ಎಮ್‌ಎನ್‌ಎಮ್‌ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 110 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಬಿಜೆಪಿ ಮೈತ್ರಿ ಕೂಟ 70 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ಮೈತ್ರಿ ಕೂಟ 39 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇತರೆ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 16 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಬಿಜೆಪಿ ಮೈತ್ರಿ ಕೂಟ 11 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ಮೈತ್ರಿ ಕೂಟ 4 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇತರೆ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...