Homeಕರ್ನಾಟಕಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ
ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು ಮೆಟ್ಟಿ ಹಾಕಿದ ಯುವತಿಯೊಬ್ಬಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದು ಫೀಲ್ಡಿಗೆ ಇಳಿದಿದ್ದಾಳೆ. ಗೆಲುವು ಈ ಯುವತಿಯ ಪರವೇ ನಿಂತಂತಿದೆ.

ಬಾಗಲಕೋಟೆ ಕ್ಷೇತ್ರ ಈ ಸಲ ಗಮನ ಸೆಳೆದಿರುವುದು ಮೂರು ಕಾರಣಗಳಿಂದಾಗಿ. ಒಂದು, ಪುಟು ಪುಟು ಓಡಾಡುತ್ತ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶೆಪ್ಪನವರ್. ಎರಡನೇಯದು, ಬಾದಾಮಿ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಗಂಭಿರವಾಗಿ ಪರಿಗಣಿಸಿರುವುದು. ಮೂರನೆಯ ಮತ್ತು ಅತಿ ಮುಖ್ಯ ಕಾರಣ: ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರವಿದ್ದ ಪಂಚಮಸಾಲಿ ಸಮಯದಾಯ ಈ ಸಲ ತಮ್ಮದೇ ಸಮುದಾಯದ ವೀಣಾ ಪರ ನಿಂತಿರುವುದು.

ಬಾಗಲಕೋಟೆಯಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯಿಂದ ಸಂಸದರಾಗಿರುವ ಗಾಣಿಗ ಸಮುದಾಯದ ಗದ್ದಿಗೌಡರು ಸಂಭಾವಿತರು ಎಂಬ ಬಗ್ಗೆ ಎರಡು ಮಾತಿಲ್ಲ. ಅವರೆಂದೂ ಬಾಗಲಕೋಟೆ ಬಿಜೆಪಿ ಶಾಸಕ ಚರಂತಿಮಠ, ತೇರದಾಳದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ತರಹ ಕೋಮು ಉನ್ಮಾದದ ರಾಜಕಾರಣ ಮಾಡಿದವರಲ್ಲ. ಜಮಖಂಡಿ ಶಾಸಕ ಮುರುಗೇಶ ನಿರಾಣಿ, ಹುನಗುಂದದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲರಂತೆ ಬ್ಯುಸಿನೆಸ್ ಇಂಟರೆಸ್ಟ್ ಹೊಂದಿದವರಲ್ಲ. ಆದರೆ, ಅವರು ಮಹಾ ಸೋಮಾರಿ. ಚುನಾವಣೆಯಲ್ಲಿ ಮುಖ ತೋರಿಸುವ ಗದ್ದಿಗೌಡರು ನಂತರ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಪಕ್ಷದ ಸಾರ್ವಜನಿಕ ಸಭೆಗಳಲ್ಲೂ ಅವರಿಗೆ ಆಸಕ್ತಿ ಇಲ್ಲವೇ ಇಲ್ಲ. ಇದಕ್ಕಿಂತ ಮಿಗಿಲಾಗಿ 10 ವರ್ಷಗಳಲ್ಲಿ ಬಾಗಲಕೋಟೆಗೆ ಅವರು ಕೊಟ್ಟಿದ್ದು ಶೂನ್ಯ.

ಗದ್ದಿಗೌಡರ್ ನಿರುಪ್ರದವಿ ಇರಬಹುದು, ಆದರೆ ಸೋಮಾರಿ ಎಂಬುದು ಈ ಸಲ ಹೈಟಾಗಲು ಕಾರಣ ಎದುರಿಗೆ ನಿಂತಿರುವ ಯುವತಿ ಹುಮ್ಮಸ್ಸಿನಿಂದ ಪುಟಿದೇಳುವ, ರಾಜಕೀಯವನ್ನು ಜನಸೇವೆಗೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಪ್ರಾಕ್ಟಿಕಲ್ ಆಗಿ ಮಾಡಿ ತೋರಿಸಿರುವ ಯುವತಿ.

ಬಾಗಲಕೋಟೆ ಕ್ಷೇತ್ರದಲ್ಲಿ ಗದಗ ಜಿಲ್ಲೆಯಾ ನರಗುಂದವೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು ಐದರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇದುಬಿಜೆಪಿಗೆ ವರವಾಗಬಹುದೇ ಎಂಬ ಪ್ರಶನೆ ಸಹಜ. 2014ರಲ್ಲಿ ಕಾಂಗ್ರಸ್‍ನಿಂದ ಇಲ್ಲಿ 7 ಶಾಸಕರಿದ್ದರೂ ಗದ್ದಿಗೌಡರ್ ಇಲ್ಲಿ 5,220 ಮತಗಳಿಂದ ಗೆದ್ದಿದ್ದರು. ಆಗ ಮೋದಿಯ ಸೃಷ್ಟಿತ ಹವಾ ಇತ್ತು. ಅದಕ್ಕೂ ಮುಖ್ಯವಾಗಿ ಇಲ್ಲಿ ಸದಾ ಜಾತಿ ರಾಜಕಾರಣವೇ ರ್ಮಯಲುಗೈ ಪಡೆದಿದ್ದು ಬಿಜೆಪಿಗೆ ವರದಾನವಾಗಿತ್ತು.

ಇಲ್ಲಿ ಲಿಂಗಾಯತ/ವೀರಶೈವ ಜಾತಿಗೆ ಸೇರಿದ ಗಾಣಿಗರು, ಪಂಚಮಸಾಲಿಗಳು ಮತ್ತು ರೆಡಿಗಳು ತಲಾ ಒಂದೂವರೆ ಲಕ್ಷದಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ರಡ್ಡಿಗಳ ಟಿಕೆಟ್ ಕೊಟ್ಟ ಪರಿಣಾಮ, ಗಾಣಿಗರು ಮತ್ತು ಪಂಚಮಸಾಲಿಗಳು ಒಟ್ಟಾಗಿ ಬಿಜೆಪಿ ನೆರವಿಗೆ ಬರುತ್ತಿದ್ದರು. ಈ ಸಲ ಪಂಚಮಸಾಲಿಗೆ ಸೇರಿದ ಮಹಿಳಾ ಅಭ್ಯರ್ಥಿ ಕಣದಲ್ಲಿ ರಂಗು ಎಬ್ಬಿಸುವ ಮೂಲಕ ಹೊಸ ಜಾತಿ ಸಂಇಕರಣದ ಗೆಲುವಿನತ್ತ ಮುನ್ನುಗುತ್ತಿದ್ದಾರೆ.

ಸುಮಾರು ಎರಡೂವರೆ ಲಕ್ಷದಷ್ಟಿರು ದಲಿತ ಮತಗಳು ಹೆಚ್ಚೂ ಕಡಿಮೆ ಕಾಂಗ್ರೆಸ್ ಪರವೇ ಇವೆ. ಒಂದು ಲಕ್ಷದಷ್ಟಿರುವ ಎಸ್‍ಟಿ ಮತಗಳಲ್ಲಿ ಎರಡೂ ಪಾರ್ಟಿಗಳು ಸಮಾನವಾಗಿ ಮತ ಪಡೆಯಬಹುದೇನೋ? ಎರಡೂವರೆ ಲಕ್ಷದಷ್ಟಿರುವ ಮುಸ್ಲಿಮರು ಕಾಂಗ್ರೆಸ್ ಪರವೇ. ಎರಡೂವರೆ ಲಕ್ಷದಷ್ಟಿರುವ ಕುರುಬರು ಮತ್ತು ಒಂದೂವರೆ ಲಕ್ಷದಷ್ಟಿರುವ ನೇಕಾರರು ಈ ಸಲ ಸಿದ್ದರಾಮಯ್ಯ ಕಾರಣಕ್ಕೆ ಕಾಂಗ್ರೆಸ್ ಪರ ನಿಲ್ಲುವ ದಟ್ಟ ಸಾಧ್ಯತೆ ಇವೆ. ಸಿದ್ದರಾಮಯ್ಯ ಒಂದು ದಿನ ಮತ್ತು ಸತೀಶ ಜಾರಕಿಹೊಳಿ ಎರಡು ದಿನ ಇಲ್ಲಿ ಪ್ರಚಾರ ಮಾಡಲಿದ್ದು ಅದು ಕಾಂಗ್ರೆಸ್ ಗೆಲುವಿಗೆ ದೊಡ್ಡ ‘ಬೂಸ್ಟ್’

ಜಾತಿ ಮೀರಿದ ಜಾಣೆ
ಜಿಪಂ ಸದಸ್ಯೆ ಆಗಿರುವ ವೀಣಾ ಕಾಶಪ್ಪನವರ್ ಹುನಗುಂದದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್ ಪತ್ನಿ. ವಿಜಯಾನಂದನ ಹುಂಬ ಕ್ಯಾರೆಕ್ಟರ್‍ಗೆ ಈಕೆ ತದ್ವಿರುದ್ಧ. ಎಲ್ಲ ಜನರೊಡನೆ ಆತ್ಮೀಯತೆಯಿಂದ ಬೆರೆಯುವ, ಯುಜನತೆಯ ಮಧ್ಯದಲ್ಲಿ ಸ್ಪೂರ್ತಿ ತುಂಬುವ ಕೆಲಸವನ್ನು ವೀಣಾ ಮಾಡಿದ್ದಾರೆ. ಈಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿ ಅವರು ಮಾಡಿರುವ ಕೆಲಸಗಳು ಗಮನ ಸೆಳೆದಿವೆ. ನೀರಾವರಿ, ಕುಡಿಯುವ ನೀರಿಗೆ ಆದ್ಯತೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಹಾಸ್ಟೇಲ್‍ಗಳ ನಿರ್ವಹಣೆಯಲ್ಲಿ ಗುಣಮಟ್ಟ ತಂದ ಹಿರಿಮೆಯೂ ಅವರಿಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳಲ್ಲಿ ವಿಶೇಷ ಆಸಕ್ತಿ ತೋರಿದ್ದರಿಂದ ಅವರಿಗೆ ಮಹಿಳಾ ಮತದಾರರೂ ಒಲಿದಿದ್ದಾರೆ.
ಹೀಗಾಗಿ, ಈ ಸಲ ಗದ್ದಿಗೌಡರ ಗದ್ದುಗೆಯನ್ನು ಈ ಯುವತಿ ಕಿತ್ತುಕೊಳ್ಳುವ ಚಾನ್ಸ್ ಜಾಸ್ತಿನೇ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...