Homeಕರ್ನಾಟಕಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ
ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು ಮೆಟ್ಟಿ ಹಾಕಿದ ಯುವತಿಯೊಬ್ಬಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದು ಫೀಲ್ಡಿಗೆ ಇಳಿದಿದ್ದಾಳೆ. ಗೆಲುವು ಈ ಯುವತಿಯ ಪರವೇ ನಿಂತಂತಿದೆ.

ಬಾಗಲಕೋಟೆ ಕ್ಷೇತ್ರ ಈ ಸಲ ಗಮನ ಸೆಳೆದಿರುವುದು ಮೂರು ಕಾರಣಗಳಿಂದಾಗಿ. ಒಂದು, ಪುಟು ಪುಟು ಓಡಾಡುತ್ತ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶೆಪ್ಪನವರ್. ಎರಡನೇಯದು, ಬಾದಾಮಿ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಗಂಭಿರವಾಗಿ ಪರಿಗಣಿಸಿರುವುದು. ಮೂರನೆಯ ಮತ್ತು ಅತಿ ಮುಖ್ಯ ಕಾರಣ: ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರವಿದ್ದ ಪಂಚಮಸಾಲಿ ಸಮಯದಾಯ ಈ ಸಲ ತಮ್ಮದೇ ಸಮುದಾಯದ ವೀಣಾ ಪರ ನಿಂತಿರುವುದು.

ಬಾಗಲಕೋಟೆಯಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯಿಂದ ಸಂಸದರಾಗಿರುವ ಗಾಣಿಗ ಸಮುದಾಯದ ಗದ್ದಿಗೌಡರು ಸಂಭಾವಿತರು ಎಂಬ ಬಗ್ಗೆ ಎರಡು ಮಾತಿಲ್ಲ. ಅವರೆಂದೂ ಬಾಗಲಕೋಟೆ ಬಿಜೆಪಿ ಶಾಸಕ ಚರಂತಿಮಠ, ತೇರದಾಳದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ತರಹ ಕೋಮು ಉನ್ಮಾದದ ರಾಜಕಾರಣ ಮಾಡಿದವರಲ್ಲ. ಜಮಖಂಡಿ ಶಾಸಕ ಮುರುಗೇಶ ನಿರಾಣಿ, ಹುನಗುಂದದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲರಂತೆ ಬ್ಯುಸಿನೆಸ್ ಇಂಟರೆಸ್ಟ್ ಹೊಂದಿದವರಲ್ಲ. ಆದರೆ, ಅವರು ಮಹಾ ಸೋಮಾರಿ. ಚುನಾವಣೆಯಲ್ಲಿ ಮುಖ ತೋರಿಸುವ ಗದ್ದಿಗೌಡರು ನಂತರ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಪಕ್ಷದ ಸಾರ್ವಜನಿಕ ಸಭೆಗಳಲ್ಲೂ ಅವರಿಗೆ ಆಸಕ್ತಿ ಇಲ್ಲವೇ ಇಲ್ಲ. ಇದಕ್ಕಿಂತ ಮಿಗಿಲಾಗಿ 10 ವರ್ಷಗಳಲ್ಲಿ ಬಾಗಲಕೋಟೆಗೆ ಅವರು ಕೊಟ್ಟಿದ್ದು ಶೂನ್ಯ.

ಗದ್ದಿಗೌಡರ್ ನಿರುಪ್ರದವಿ ಇರಬಹುದು, ಆದರೆ ಸೋಮಾರಿ ಎಂಬುದು ಈ ಸಲ ಹೈಟಾಗಲು ಕಾರಣ ಎದುರಿಗೆ ನಿಂತಿರುವ ಯುವತಿ ಹುಮ್ಮಸ್ಸಿನಿಂದ ಪುಟಿದೇಳುವ, ರಾಜಕೀಯವನ್ನು ಜನಸೇವೆಗೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಪ್ರಾಕ್ಟಿಕಲ್ ಆಗಿ ಮಾಡಿ ತೋರಿಸಿರುವ ಯುವತಿ.

ಬಾಗಲಕೋಟೆ ಕ್ಷೇತ್ರದಲ್ಲಿ ಗದಗ ಜಿಲ್ಲೆಯಾ ನರಗುಂದವೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು ಐದರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇದುಬಿಜೆಪಿಗೆ ವರವಾಗಬಹುದೇ ಎಂಬ ಪ್ರಶನೆ ಸಹಜ. 2014ರಲ್ಲಿ ಕಾಂಗ್ರಸ್‍ನಿಂದ ಇಲ್ಲಿ 7 ಶಾಸಕರಿದ್ದರೂ ಗದ್ದಿಗೌಡರ್ ಇಲ್ಲಿ 5,220 ಮತಗಳಿಂದ ಗೆದ್ದಿದ್ದರು. ಆಗ ಮೋದಿಯ ಸೃಷ್ಟಿತ ಹವಾ ಇತ್ತು. ಅದಕ್ಕೂ ಮುಖ್ಯವಾಗಿ ಇಲ್ಲಿ ಸದಾ ಜಾತಿ ರಾಜಕಾರಣವೇ ರ್ಮಯಲುಗೈ ಪಡೆದಿದ್ದು ಬಿಜೆಪಿಗೆ ವರದಾನವಾಗಿತ್ತು.

ಇಲ್ಲಿ ಲಿಂಗಾಯತ/ವೀರಶೈವ ಜಾತಿಗೆ ಸೇರಿದ ಗಾಣಿಗರು, ಪಂಚಮಸಾಲಿಗಳು ಮತ್ತು ರೆಡಿಗಳು ತಲಾ ಒಂದೂವರೆ ಲಕ್ಷದಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ರಡ್ಡಿಗಳ ಟಿಕೆಟ್ ಕೊಟ್ಟ ಪರಿಣಾಮ, ಗಾಣಿಗರು ಮತ್ತು ಪಂಚಮಸಾಲಿಗಳು ಒಟ್ಟಾಗಿ ಬಿಜೆಪಿ ನೆರವಿಗೆ ಬರುತ್ತಿದ್ದರು. ಈ ಸಲ ಪಂಚಮಸಾಲಿಗೆ ಸೇರಿದ ಮಹಿಳಾ ಅಭ್ಯರ್ಥಿ ಕಣದಲ್ಲಿ ರಂಗು ಎಬ್ಬಿಸುವ ಮೂಲಕ ಹೊಸ ಜಾತಿ ಸಂಇಕರಣದ ಗೆಲುವಿನತ್ತ ಮುನ್ನುಗುತ್ತಿದ್ದಾರೆ.

ಸುಮಾರು ಎರಡೂವರೆ ಲಕ್ಷದಷ್ಟಿರು ದಲಿತ ಮತಗಳು ಹೆಚ್ಚೂ ಕಡಿಮೆ ಕಾಂಗ್ರೆಸ್ ಪರವೇ ಇವೆ. ಒಂದು ಲಕ್ಷದಷ್ಟಿರುವ ಎಸ್‍ಟಿ ಮತಗಳಲ್ಲಿ ಎರಡೂ ಪಾರ್ಟಿಗಳು ಸಮಾನವಾಗಿ ಮತ ಪಡೆಯಬಹುದೇನೋ? ಎರಡೂವರೆ ಲಕ್ಷದಷ್ಟಿರುವ ಮುಸ್ಲಿಮರು ಕಾಂಗ್ರೆಸ್ ಪರವೇ. ಎರಡೂವರೆ ಲಕ್ಷದಷ್ಟಿರುವ ಕುರುಬರು ಮತ್ತು ಒಂದೂವರೆ ಲಕ್ಷದಷ್ಟಿರುವ ನೇಕಾರರು ಈ ಸಲ ಸಿದ್ದರಾಮಯ್ಯ ಕಾರಣಕ್ಕೆ ಕಾಂಗ್ರೆಸ್ ಪರ ನಿಲ್ಲುವ ದಟ್ಟ ಸಾಧ್ಯತೆ ಇವೆ. ಸಿದ್ದರಾಮಯ್ಯ ಒಂದು ದಿನ ಮತ್ತು ಸತೀಶ ಜಾರಕಿಹೊಳಿ ಎರಡು ದಿನ ಇಲ್ಲಿ ಪ್ರಚಾರ ಮಾಡಲಿದ್ದು ಅದು ಕಾಂಗ್ರೆಸ್ ಗೆಲುವಿಗೆ ದೊಡ್ಡ ‘ಬೂಸ್ಟ್’

ಜಾತಿ ಮೀರಿದ ಜಾಣೆ
ಜಿಪಂ ಸದಸ್ಯೆ ಆಗಿರುವ ವೀಣಾ ಕಾಶಪ್ಪನವರ್ ಹುನಗುಂದದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್ ಪತ್ನಿ. ವಿಜಯಾನಂದನ ಹುಂಬ ಕ್ಯಾರೆಕ್ಟರ್‍ಗೆ ಈಕೆ ತದ್ವಿರುದ್ಧ. ಎಲ್ಲ ಜನರೊಡನೆ ಆತ್ಮೀಯತೆಯಿಂದ ಬೆರೆಯುವ, ಯುಜನತೆಯ ಮಧ್ಯದಲ್ಲಿ ಸ್ಪೂರ್ತಿ ತುಂಬುವ ಕೆಲಸವನ್ನು ವೀಣಾ ಮಾಡಿದ್ದಾರೆ. ಈಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿ ಅವರು ಮಾಡಿರುವ ಕೆಲಸಗಳು ಗಮನ ಸೆಳೆದಿವೆ. ನೀರಾವರಿ, ಕುಡಿಯುವ ನೀರಿಗೆ ಆದ್ಯತೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಹಾಸ್ಟೇಲ್‍ಗಳ ನಿರ್ವಹಣೆಯಲ್ಲಿ ಗುಣಮಟ್ಟ ತಂದ ಹಿರಿಮೆಯೂ ಅವರಿಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳಲ್ಲಿ ವಿಶೇಷ ಆಸಕ್ತಿ ತೋರಿದ್ದರಿಂದ ಅವರಿಗೆ ಮಹಿಳಾ ಮತದಾರರೂ ಒಲಿದಿದ್ದಾರೆ.
ಹೀಗಾಗಿ, ಈ ಸಲ ಗದ್ದಿಗೌಡರ ಗದ್ದುಗೆಯನ್ನು ಈ ಯುವತಿ ಕಿತ್ತುಕೊಳ್ಳುವ ಚಾನ್ಸ್ ಜಾಸ್ತಿನೇ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...