Homeಕರ್ನಾಟಕಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ
ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು ಮೆಟ್ಟಿ ಹಾಕಿದ ಯುವತಿಯೊಬ್ಬಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದು ಫೀಲ್ಡಿಗೆ ಇಳಿದಿದ್ದಾಳೆ. ಗೆಲುವು ಈ ಯುವತಿಯ ಪರವೇ ನಿಂತಂತಿದೆ.

ಬಾಗಲಕೋಟೆ ಕ್ಷೇತ್ರ ಈ ಸಲ ಗಮನ ಸೆಳೆದಿರುವುದು ಮೂರು ಕಾರಣಗಳಿಂದಾಗಿ. ಒಂದು, ಪುಟು ಪುಟು ಓಡಾಡುತ್ತ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶೆಪ್ಪನವರ್. ಎರಡನೇಯದು, ಬಾದಾಮಿ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಗಂಭಿರವಾಗಿ ಪರಿಗಣಿಸಿರುವುದು. ಮೂರನೆಯ ಮತ್ತು ಅತಿ ಮುಖ್ಯ ಕಾರಣ: ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರವಿದ್ದ ಪಂಚಮಸಾಲಿ ಸಮಯದಾಯ ಈ ಸಲ ತಮ್ಮದೇ ಸಮುದಾಯದ ವೀಣಾ ಪರ ನಿಂತಿರುವುದು.

ಬಾಗಲಕೋಟೆಯಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯಿಂದ ಸಂಸದರಾಗಿರುವ ಗಾಣಿಗ ಸಮುದಾಯದ ಗದ್ದಿಗೌಡರು ಸಂಭಾವಿತರು ಎಂಬ ಬಗ್ಗೆ ಎರಡು ಮಾತಿಲ್ಲ. ಅವರೆಂದೂ ಬಾಗಲಕೋಟೆ ಬಿಜೆಪಿ ಶಾಸಕ ಚರಂತಿಮಠ, ತೇರದಾಳದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ತರಹ ಕೋಮು ಉನ್ಮಾದದ ರಾಜಕಾರಣ ಮಾಡಿದವರಲ್ಲ. ಜಮಖಂಡಿ ಶಾಸಕ ಮುರುಗೇಶ ನಿರಾಣಿ, ಹುನಗುಂದದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲರಂತೆ ಬ್ಯುಸಿನೆಸ್ ಇಂಟರೆಸ್ಟ್ ಹೊಂದಿದವರಲ್ಲ. ಆದರೆ, ಅವರು ಮಹಾ ಸೋಮಾರಿ. ಚುನಾವಣೆಯಲ್ಲಿ ಮುಖ ತೋರಿಸುವ ಗದ್ದಿಗೌಡರು ನಂತರ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಪಕ್ಷದ ಸಾರ್ವಜನಿಕ ಸಭೆಗಳಲ್ಲೂ ಅವರಿಗೆ ಆಸಕ್ತಿ ಇಲ್ಲವೇ ಇಲ್ಲ. ಇದಕ್ಕಿಂತ ಮಿಗಿಲಾಗಿ 10 ವರ್ಷಗಳಲ್ಲಿ ಬಾಗಲಕೋಟೆಗೆ ಅವರು ಕೊಟ್ಟಿದ್ದು ಶೂನ್ಯ.

ಗದ್ದಿಗೌಡರ್ ನಿರುಪ್ರದವಿ ಇರಬಹುದು, ಆದರೆ ಸೋಮಾರಿ ಎಂಬುದು ಈ ಸಲ ಹೈಟಾಗಲು ಕಾರಣ ಎದುರಿಗೆ ನಿಂತಿರುವ ಯುವತಿ ಹುಮ್ಮಸ್ಸಿನಿಂದ ಪುಟಿದೇಳುವ, ರಾಜಕೀಯವನ್ನು ಜನಸೇವೆಗೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಪ್ರಾಕ್ಟಿಕಲ್ ಆಗಿ ಮಾಡಿ ತೋರಿಸಿರುವ ಯುವತಿ.

ಬಾಗಲಕೋಟೆ ಕ್ಷೇತ್ರದಲ್ಲಿ ಗದಗ ಜಿಲ್ಲೆಯಾ ನರಗುಂದವೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು ಐದರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇದುಬಿಜೆಪಿಗೆ ವರವಾಗಬಹುದೇ ಎಂಬ ಪ್ರಶನೆ ಸಹಜ. 2014ರಲ್ಲಿ ಕಾಂಗ್ರಸ್‍ನಿಂದ ಇಲ್ಲಿ 7 ಶಾಸಕರಿದ್ದರೂ ಗದ್ದಿಗೌಡರ್ ಇಲ್ಲಿ 5,220 ಮತಗಳಿಂದ ಗೆದ್ದಿದ್ದರು. ಆಗ ಮೋದಿಯ ಸೃಷ್ಟಿತ ಹವಾ ಇತ್ತು. ಅದಕ್ಕೂ ಮುಖ್ಯವಾಗಿ ಇಲ್ಲಿ ಸದಾ ಜಾತಿ ರಾಜಕಾರಣವೇ ರ್ಮಯಲುಗೈ ಪಡೆದಿದ್ದು ಬಿಜೆಪಿಗೆ ವರದಾನವಾಗಿತ್ತು.

ಇಲ್ಲಿ ಲಿಂಗಾಯತ/ವೀರಶೈವ ಜಾತಿಗೆ ಸೇರಿದ ಗಾಣಿಗರು, ಪಂಚಮಸಾಲಿಗಳು ಮತ್ತು ರೆಡಿಗಳು ತಲಾ ಒಂದೂವರೆ ಲಕ್ಷದಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ರಡ್ಡಿಗಳ ಟಿಕೆಟ್ ಕೊಟ್ಟ ಪರಿಣಾಮ, ಗಾಣಿಗರು ಮತ್ತು ಪಂಚಮಸಾಲಿಗಳು ಒಟ್ಟಾಗಿ ಬಿಜೆಪಿ ನೆರವಿಗೆ ಬರುತ್ತಿದ್ದರು. ಈ ಸಲ ಪಂಚಮಸಾಲಿಗೆ ಸೇರಿದ ಮಹಿಳಾ ಅಭ್ಯರ್ಥಿ ಕಣದಲ್ಲಿ ರಂಗು ಎಬ್ಬಿಸುವ ಮೂಲಕ ಹೊಸ ಜಾತಿ ಸಂಇಕರಣದ ಗೆಲುವಿನತ್ತ ಮುನ್ನುಗುತ್ತಿದ್ದಾರೆ.

ಸುಮಾರು ಎರಡೂವರೆ ಲಕ್ಷದಷ್ಟಿರು ದಲಿತ ಮತಗಳು ಹೆಚ್ಚೂ ಕಡಿಮೆ ಕಾಂಗ್ರೆಸ್ ಪರವೇ ಇವೆ. ಒಂದು ಲಕ್ಷದಷ್ಟಿರುವ ಎಸ್‍ಟಿ ಮತಗಳಲ್ಲಿ ಎರಡೂ ಪಾರ್ಟಿಗಳು ಸಮಾನವಾಗಿ ಮತ ಪಡೆಯಬಹುದೇನೋ? ಎರಡೂವರೆ ಲಕ್ಷದಷ್ಟಿರುವ ಮುಸ್ಲಿಮರು ಕಾಂಗ್ರೆಸ್ ಪರವೇ. ಎರಡೂವರೆ ಲಕ್ಷದಷ್ಟಿರುವ ಕುರುಬರು ಮತ್ತು ಒಂದೂವರೆ ಲಕ್ಷದಷ್ಟಿರುವ ನೇಕಾರರು ಈ ಸಲ ಸಿದ್ದರಾಮಯ್ಯ ಕಾರಣಕ್ಕೆ ಕಾಂಗ್ರೆಸ್ ಪರ ನಿಲ್ಲುವ ದಟ್ಟ ಸಾಧ್ಯತೆ ಇವೆ. ಸಿದ್ದರಾಮಯ್ಯ ಒಂದು ದಿನ ಮತ್ತು ಸತೀಶ ಜಾರಕಿಹೊಳಿ ಎರಡು ದಿನ ಇಲ್ಲಿ ಪ್ರಚಾರ ಮಾಡಲಿದ್ದು ಅದು ಕಾಂಗ್ರೆಸ್ ಗೆಲುವಿಗೆ ದೊಡ್ಡ ‘ಬೂಸ್ಟ್’

ಜಾತಿ ಮೀರಿದ ಜಾಣೆ
ಜಿಪಂ ಸದಸ್ಯೆ ಆಗಿರುವ ವೀಣಾ ಕಾಶಪ್ಪನವರ್ ಹುನಗುಂದದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್ ಪತ್ನಿ. ವಿಜಯಾನಂದನ ಹುಂಬ ಕ್ಯಾರೆಕ್ಟರ್‍ಗೆ ಈಕೆ ತದ್ವಿರುದ್ಧ. ಎಲ್ಲ ಜನರೊಡನೆ ಆತ್ಮೀಯತೆಯಿಂದ ಬೆರೆಯುವ, ಯುಜನತೆಯ ಮಧ್ಯದಲ್ಲಿ ಸ್ಪೂರ್ತಿ ತುಂಬುವ ಕೆಲಸವನ್ನು ವೀಣಾ ಮಾಡಿದ್ದಾರೆ. ಈಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿ ಅವರು ಮಾಡಿರುವ ಕೆಲಸಗಳು ಗಮನ ಸೆಳೆದಿವೆ. ನೀರಾವರಿ, ಕುಡಿಯುವ ನೀರಿಗೆ ಆದ್ಯತೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಹಾಸ್ಟೇಲ್‍ಗಳ ನಿರ್ವಹಣೆಯಲ್ಲಿ ಗುಣಮಟ್ಟ ತಂದ ಹಿರಿಮೆಯೂ ಅವರಿಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳಲ್ಲಿ ವಿಶೇಷ ಆಸಕ್ತಿ ತೋರಿದ್ದರಿಂದ ಅವರಿಗೆ ಮಹಿಳಾ ಮತದಾರರೂ ಒಲಿದಿದ್ದಾರೆ.
ಹೀಗಾಗಿ, ಈ ಸಲ ಗದ್ದಿಗೌಡರ ಗದ್ದುಗೆಯನ್ನು ಈ ಯುವತಿ ಕಿತ್ತುಕೊಳ್ಳುವ ಚಾನ್ಸ್ ಜಾಸ್ತಿನೇ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...